
ಕನ್ನಡ ಮೇರು ವ್ಯಕ್ತಿಗಳಾದ ಡಾ.ಸಿ.ಅಶ್ವತ್ಥ್ ಹಾಗೂ ಡಾ. ವಿಷ್ಣುವರ್ಧನ್ ಇನ್ನಿಲ್ಲವಾಗಿದ್ದಾರೆ... ಅವರಿಬ್ಬರೂ ಮತ್ತೆ ಹುಟ್ಟಿಬರಲಿ...
ಅವರನ್ನು ತನ್ನೂರಿಗೆ ಕರೆದೊಯ್ದ ಜವರಾಯನಿಗೆ ನನ್ನ
ದೊಂದು ಶಾಪ...
ನಿಜ.
ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇಡೀ ಉತ್ತರ ಕರ್ನಾಟಕ ತತ್ತರಗೊಂಡಿದೆ. ಆದರೆ ವಿಧಾನಸೌಧದಲ್ಲಿ ಮಾತ್ರ ಒಬ್ಬರೇ ಒಬ್ಬ ಸಚಿವರೂ ಇಲ್ಲ! ಎಲ್ಲರೂ ಸುತ್ತೂರು ಮಠದಲ್ಲಿ ‘ವ್ಯಾಯಾಮ’ ಮಾಡುತ್ತ, ಚಿಂತನ ಬೈಠಕ್ ನಡೆಸಿಕೊಂಡಿದ್ದರು. ಇದ್ದಕ್ಕಿಂದ್ದಂತೆ ವರುಣ ಮಂತ್ರಾಲಯದ ಒಳಗೆ ನುಗ್ಗಿದ್ದಾನೆ. ಆಗ ಸಚಿವೋದಯರೆಲ್ಲಾ ವಿಧಾನಸೌಧದ ಕಡೆ ಮುಖ ಮಾಡಿ ನಿಂತಿದ್ದಾರೆ!!
ಳಜಿ’ !!
ರೈತರ ಹೆಸರಿನಲ್ಲಿ ಪ್ರಮಾಣ ವಚನ ಮಾಡಿದರು. ಅದೇ ಸಮಯದಲ್ಲಿ ಬರ ಬಂದು ರೈತರು ಸಂಕಷ್ಟದಲ್ಲಿದ್ದಾರೆಂದು ಮಾಧ್ಯಮಗಳು ಆಕ್ರೋಶ ವ್ಯಕ್ತಪಡಿಸಿದಾಗ ‘ಇನ್ನು ಜನ ಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುವುದೇ ನನ್ನ ಕೆಲಸ. ಹಾರ ತುರಾಯಿಗಳನ್ನು ನನಗೆ ಹಾಕಬೇಡಿ, ಅಂಥ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಬೇಡಿ’. ಎಂದ ಸಿಎಂ ಗೆ ಈಗ ತಾವು ಹೇಳಿದ ಮಾತು ಮರೆತುಹೋದಂತಿದೆ. ಆ ಕಾರಣಕ್ಕೇ ಜಲಪ್ರಳಯದಿಂದ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದರೂ ಯಡಿಯೂರಪ್ಪ ಮಾತ್ರ ಡಾಬಸ್ಪೇಟೆಯಲ್ಲಿ ಬೆಳ್ಳಿ ಕಿರೀಟ ತೊಟ್ಟುಕೊಂಡು, ಸನ್ಮಾನ ಮಾಡಿಸಿಕೊಳ್ಳಲು ಬೆಂಗಳೂರಿನಿಂದ ತೆರಳಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿದೆಯಾ...?
ಆದರೆ ಈ ಹಣದಲ್ಲಿ ಒಂದು ಪೈಸೆ ಕೂಡ ಬಳಕೆ ಮಾಡಿಕೊಂದಿಲ್ಲ. ಆದರೆ ಕೇಂದ್ರದ ಕಡೆ ಕೈ ತೋರಿಸಿ ಪ್ರತಿಪಕ್ಷದ ನಾಯಕರಂತೆ ವರ್ತಿಸುವುದು ಇನ್ನೂ ನಿಂತಿಲ್ಲ. ಇದು ನಿಜಕ್ಕೂ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ವರ್ತಿಸುವವರ ಲಕ್ಷಣವೇ?
ಸಾಮಾನ್ಯವಾಗಿ ‘ಮದುವೆ’ ಎಂಬ ಮಧುರ ಪದ ಕೇಳುತ್ತಿದ್ದ ಹಾಗೆಯೇ ಬಹಳಷ್ಟು ಜನರ ಮೈ ರೋಮಾಂಚನಗೊಳ್ಳುತ್ತದೆ. ಮತ್ತೆ ಕೆಲಸವರ ಮನ ಮುಂಜಾನೆಯ ಮಂಜಿನ ಹಾಗೆ ತಂಪಾಗುತ್ತದೆ. ಮತ್ತೆ ಕೆಲವರಿಗೆ ಕನಸುಗಳು ಗರಿಗೆದರುತ್ತವೆ. ಮನಸಿನ ಹಾಸಿಗೆಯಲ್ಲಿ ಹೂಮಳೆ ಚೆಲ್ಲುತ್ತದೆ. ಹೀಗೆ ಒಬ್ಬೊಬ್ಬರ ಮನದಲ್ಲು ಒಂದೊಂದು ಭಾವನಾ ಲಹರಿ ಪಾರಿಜಾತವಾಗಿ ಹಾರಾಡುತ್ತದೆ.
ನನ್ನ ಕೈಗೆ ಸಿಕ್ಕ ಆ ಕಿರು ಹೊತ್ತಿಗೆಯ ಹೆಸರು “ವಚನ ತಾಂಬೂಲ". ಮದುವೆಗೆ ಬರುವ ಎಲ್ಲರಿಗೂ ಸಾಮಾನ್ಯವಾಗಿ ಅಡಕೆ, ಎಲೆ, ಸುಣ್ಣ ಅಥವಾ ಒಂದು ಕಾಯಿಯನ್ನು ಉಡುಗೊರೆಯಾಗಿ ನೀಡುವುದು ಸಾಮಾನ್ಯ. ಇದು ಸಾಮಾನ್ಯ ವರ್ಗದ ಕುಟುಂಬಗಳ ಕಾರ್ಯವೈಖರಿ. ಆದರೆ ಶ್ರೀಮಂತರ ಮಾತು ಬೇರೆ ಬಿಡಿ.
ಕೃಷಿ ಕ್ಷೇತ್ರದಲ್ಲಿ ಇದೊಂದು ಹೊಸ ಆವಿಷ್ಕಾರ. ಒಂದೆಡೆ ಹಸಿರು ಮಾಯವಾಗುತ್ತಿದ್ದರೆ ಈಗಿನ ದುನಿಯಾಗೆ ಅನುಕೂಲವಾಗುವ ಹಾಗೆ ಹಸಿರು ಬೆಳೆಸುವ ಹೊಸ ಆವಿಷ್ಕಾರಕ್ಕೆ ಕೇಂದ್ರ ನಾರು ಮಂಡಳಿ ಕೈ ಹಾಕಿದೆ. ಆಧುನಿಕತೆಗೆ ಎಷ್ಟೇ ಒಗ್ಗಿಕೊಂಡಿದ್ದರೂ ಮನುಷ್ಯನಿಗೆ ಹಸಿರಿನಿಂದ ದೂರ ಇರುವ ಸಾಮರ್ಥ್ಯವೇ ಇಲ್ಲ ಎಂಬುದು ನಿಶ್ಚಿತ. ಅದನ್ನು ಮನಗಂಡಿರುವ ಇಲ್ಲಿನ ಸಂಶೋಧಕರು ಆಧುನಿಕ ಜಗತ್ತಿಗೆ ಸರಿ ಹೊಂದುವಂಥ ‘ಹುಲ್ಲಿನ ಹಾಸಿಗೆ’ ತಯಾರಿಸಿದ್ದಾರೆ!
ನುಕೂಲಗಳು:
ಲು ತಾಂತ್ರ್ರಿಕವಾಗಿ ಜೋಡಿಸಿಕೊಂಡು (ನೀಡಲ್ ಫಿಲ್ಟ್ ಮಾಡಿ) ಒಂದು ಸ್ಥಳದಲ್ಲಿ ಅದನ್ನು ಸಮನಾಗಿ ಹರಡಿಕೊಳ್ಳಬೇಕು. ಅದರ ಮೇಲೆ ಜಿಯೋಟೆಕ್ಸೆಲ್ಸ್ ( ತಿಳಿ ಮಣ್ಣಿನಾಕಾರದ ನಾರು ಪುಡಿ) ಅದರ ಮೇಲೆ ಪಿಥ್(ಸಂಸ್ಕರಿಸಿದ ನಾರು ಪುಡಿ) ಹಾಕಿ, ಸ್ವಲ್ಪ ನೀರು ಚಿಮುಕಿಸಬೇಕು. ಅದರಲ್ಲಿ ನಿಮಗೆ ಯಾವ ಹುಲ್ಲು ಬೇಕೋ ಆ ಹುಲ್ಲಿನ ಬೀಜ ಬಿತ್ತಬೇಕು, ಇಲ್ಲವೇ ಬೇರು ಹೊಂದಿರುವ ಹುಲ್ಲಿನ ಚೂರುಗಳನ್ನು ನೆಟ್ಟರೂ ಸಾಕು. ಅನಂತರ ಇದಕ್ಕೆ ಪ್ರತಿನಿತ್ಯ ನೀರು ಚಿಮುಕಿಸುತ್ತಿರಬೇಕು. ಹೀಗೆ ಮಾಡಿದರೆ ಕೇವಲ ಒಂದೂವರೆ ತಿಂಗಳಿನಲ್ಲಿ ನಿಮಗೆ ಹುಲ್ಲಿನ ಹಾಸಿಗೆ ತಯಾರಾಗುತ್ತದೆ. ಹುಲ್ಲಿನ ಬೇರುಗಳು ಕೂಡ ಭದ್ರವಾಗುತ್ತವೆ. ಆಗ ನೀವು ಯಾವ ಆಕಾರಕ್ಕೆ ಬೇಕೋ ಆ ಆಕಾರಕ್ಕೆ ಸಲೀಸಾಗಿ ಕಟ್ ಮಾಡಿ ಅದನ್ನು ನಿಮಗೆ ಬೇಕಾದ ಸ್ಥಳಗಳಲ್ಲಿ ಜೋಡಿಸಿಕೊಳ್ಳಬಹುದು.
ಇವತ್ತು ದೇವರ ಹೆಸರು ಹೇಳಿಕೊಂಡು ಅದೆಷ್ಟೋ ಮಂದಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ದೇವರಿದ್ದಾನೋ ಇಲ್ಲವೋ ಬೇರೆ ವಿಚಾರ, ಆದರೆ ಅವನ ಹೆಸರು ಹೇಳಿಕೊಂಡು ಬದುಕುವವರು ಮಾತ್ರ ‘ಸೊಂಪಾಗಿದ್ದಾರೆ’. ಮೊನ್ನೆ ಸಣ್ಣದೊಂದು ಪ್ರವಾಸಕ್ಕೆಂದು ಬೇರೆ ಕಡೆಗೆ ಹೋಗಿದ್ದೆ. ಆ ಸ್ಥಳದಲ್ಲಿ ಒಬ್ಬ ಆತ್ಮೀಯ ಗೆಳೆಯನಿದ್ದ. ಅವನ ಮನೆಗೆಂದು ಹೋದಾಗ ಅವನು ತನ್ನ ಹಬ್ಬದ ದಿನವಾಗಿದ್ದರಿಂದ ತನ್ನ ಎಳೆಯ ಮಕ್ಕಳಿಗೆ ಪ್ರಸಾದ ತರಬೇಕೆಂದು ಒಂದು ‘ಭವ್ಯ ದೇವಸ್ಥಾನ’ಕ್ಕೆ ಕರೆದುಕೊಂಡು ಹೋಗಿದ್ದ.
ಕ್ಕಳ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಲು ಅವನು ರಶೀದಿ ಖರೀದಿಸಿದ. ಆರಂಭದಲ್ಲೇ ಅವನು ಹೇಳಿದ ಮಾತು ಅಲ್ಲಿ ಸುಳ್ಳಾಗಿತ್ತು. ಅಷ್ಟೆಲ್ಲಾ ಹೇಳಿದ ಅವನೇ ಹೋಗಿ ಹಣ ಕೊಟ್ಟು ವಿಶೇಷ ಪೂಜೆ ಮಾಡಿಸಿದ್ದ. ದೇವಸ್ಥಾನ ಸುಂದರ ಹಾಗೂ ಪ್ರಶಾಂತವಾಗಿದ್ದರಿಂದ ಸ್ವಲ್ಪ ಸುತ್ತಾಡುತ್ತಿದೆ. ಅವನು ಪ್ರಸಾದಕ್ಕಾಗಿ ಸರದಿ ಸಾಲಿನಲ್ಲಿ ನಿಂತಿದ್ದ. ಅಲ್ಲಿ ನವಗ್ರಹ ದೇವತೆಗಳು, ಅನ್ನಪೂರ್ಣೇಶ್ವರಿ, ವಿಘ್ನ ನಿವಾರಕ ಗಣೇಶ, ಶಿವ ಪಾರ್ವತಿ, ಶಾರದೆ ಹೀಗೆ ಎಲ್ಲ ಬಗೆಯ ದೇವಾನು ದೇವತೆಗಳಿದ್ದರು!
. ತಕ್ಷಣ ‘ಅವರನ್ನು ಕರ್ಕೊಂಡು ಬನ್ನಿ...’ ಎಂದು ಕಳುಹಿಸಿದರು.
ಕುಟುಂಬ ಸಮೇತ ಶಿವಮೊಗ್ಗಕ್ಕೆ ಹೊರಡಲೆಂದು ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಾಗ ಸರಿ ಸುಮಾರು ೧೦ ಗಂಟೆ. ರಾಷ್ಟ್ರದಾದ್ಯಂತ ಈಗ ಹಂದಿ ಜ್ವರ(ಎಚ್೧ಎನ್೧)ದ್ದೇ ಸುದ್ದಿ. ಸುಖಾ ಸುಮ್ಮನೆ ಸಾಯುವುದು ಎಂದರೆ ಯಾರಿಗೆ ತಾನೆ ಭಯ ಆಗುವುದಿಲ್ಲ? ಅದಕ್ಕೇ ರೈಲ್ವೆ ನಿಲ್ದಾಣಕ್ಕೆ ಬರುವ ಕೆಲವರು ಮುಖಕ್ಕೆ ಮಾಸ್ಕ್(ಮುಖಗವಸು) ಹಾಕಿಕೊಂಡಿದ್ದರು.
ನ ವಿಚಿತ್ರವಾಗಿ ನೋಡುತ್ತಿದ್ದರು. ಹತ್ತಿರ ಹೋದರೆ ಬೆದರಿದ ಹೋರಿಗಳಂತಾಡುತ್ತಿದ್ದರು !
ಕ್ಕೆ ಮದ್ದಿದೆ. ಅದು ಬರದಂತೆ ತಡೆಯಲು ಕೆಲವೇ ಮುಂಜಾಗೃತ ಕ್ರಮಗಳನ್ನು ಅನುಸರಿಸಿದರೆ ಸಾಕು, ಜತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಎಲ್ಲ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿವೆ. ಆದರೂ ಈ ರೀತಿಯ ಭಯವೇಕೆ? ಒಂದು ರೀತಿಯಲ್ಲಿ ಈ ಭಯಕ್ಕೆ ಮಾಧ್ಯಮಗಳೂ ಕಾರಣವೇ? ಎಂಬ ಅನುಮಾನ ನಿಜಕ್ಕೂ ಕಾಡುತ್ತಿದೆ. ವೈದ್ಯರು ‘ಇದೇನೂ ಅಂಥ ಭಯಾನಕ ಕಾಯಿಲೆ ಅಲ್ಲ, ಇದಕ್ಕೆ ಚಿಕಿತ್ಸೆ ಇದೆ’ ಎನ್ನುತ್ತಾರೆ. ಇಷ್ಟಾದರೂ ಮೀಡಿಯಾಗಳು ಹಂದಿ ಜ್ವರ ಭಯಾನಕ ಎನ್ನುವಂತೆ ಬಿಂಬಿಸಿ ನಿತ್ಯವೂ ವರದಿ ಮಾಡುತ್ತಿವೆ. ಇಲ್ಲಿ ಎಡವುತ್ತಿರುವುದು ಎಲ್ಲಿ ಎಂಬ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಸರಕಾರಗಳು ಕೂಡ ಸದ್ದಿಲ್ಲದೆ ಬಂದ ಈ ಕಾಯಿಲೆಗೆ ಮದ್ದು ಹಾಗೂ ಸೂಕ್ತ ಚಿಕಿತ್ಸೆಗೆ ವೈದ್ಯರ ನೇಮಕ ಮಾಡುವ ಬದಲು ‘ನಮ್ಮ ರಾಜ್ಯದಲ್ಲಿ ಇನ್ನೂ ಯಾರೂ ಸತ್ತಿಲ್ಲ, ಜ್ವರದ ತೀವ್ರತೆ ಇಲ್ಲ.’ಎಂದು ಹೇಳಿ ಆರಂಭದಲ್ಲಿ ಕೈ ತೊಳೆದುಕೊಂಡವು. ಆದರೆ ಈಗ ?
ರು ೧೯೩೯ರ ಜನವರಿ೭ರ ಸಂಚಿಕೆಯಲ್ಲಿ ‘ಗರ್ಭಿಣಿಯರು ವಾರಕ್ಕೆ ಎರಡ್ಮೂರು ಬಾರಿ ನೀರಾ ಸೇವಿಸಿದರೆ ಹುಟ್ಟುವ ಮಗು ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯಪೂರ್ಣವಾಗಿ ಹಾಗೂ ಸೌಂದರ್ಯಯುತವಾಗಿ ಹುಟ್ಟುತ್ತವೆ’ ಎಂದು ಬರೆದಿದ್ದರು.
ನೀರಾ ಚಳವಳಿ ಆರಂಭವಾದ ನಂತರ ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ವಿಶ್ವವೇ ಬೆರಗಾಗುವ ರೀತಿಯಲ್ಲಿ ನೀರಾದಿಂದ ಸಕ್ಕರೆ ತಯಾರಿಸುವ ಪ್ರಶಿಕ್ಷಣ ತರಬೇತಿ ನೀಡಲಾಯಿತು. ಆದರೆ ಅನಂತರ ಅದಕ್ಕೆ ಮಾರುಕಟ್ಟೆ ಸಮಸ್ಯೆ ಹಾಗೂ ಸರಕಾರದ ನಿರುತ್ಸಾಹ ಎದುರಾಯಿತು. ಅಂದಿನಿಂದ ತೆಂಗು ಬೆಳೆಗಾರರು ಮತ್ತೆ ಅತಂತ್ರವಾದರು.
ಹಾಗೂ ಸಾಧ್ಯತೆ:
My Dear Friend,
ತು ಕೇಳುತ್ತಲೇ ನಿನ್ನ ತುಂಟತನ, ನಿರ್ಮಲ ನಗು, ವಿಚಾರಲಹರಿಗಳಿಗೆ ತಲೆ ದೂಗುತ್ತಲೇ ಇದ್ದವನು ನಾನು. ನೀ ಹೇಳದೆ, ಕೇಳದೆ, ಒಂದು ಮಾತೂ ಉಲಿಯದೆ ನಾಪತ್ತೆಯಾಗೊದೆ? ಅಂದಿನಿಂದ ನಾನು ಧ್ವನಿಯಿಲ್ಲದ ಕೋಗಿಲೆಯಾಗಿದ್ದೆ. ಅಂದವಿಲ್ಲದ ಅರಗಿಣಿಯಾಗಿದ್ದೆ. ರೆಕ್ಕೆಪುಕ್ಕಗಳೆಲ್ಲ ಇದ್ದೂ ಕುಣಿಯಲಾಗದ ನವಿಲಾಗಿದ್ದೆ.
ರಾಜ್ಯದಲ್ಲಿ ನಾರು ಉದ್ಯಮ ನಲುಗುತ್ತಿದೆ. ನರಳುವಿಕೆಯಲ್ಲೇ ಇದು ಮೇಲೆದ್ದು ನಳನಳಿಸುತ್ತಾ ದೇಶದಲ್ಲಿಯೇ ಮೂರನೇ ಸ್ಥಾನ ಗಿಟ್ಟಿಸಿಕೊಂಡಿದೆ.
ಸಾಧ್ಯ. ಈ ನೀತಿ ಮಾತ್ರ ಸರಕಾರಗಳಿಗೆ ಅರ್ಥವಾಗುತ್ತಲೇ ಇಲ್ಲ.
ಭಾರತದಲ್ಲಿ ಗುರುವಿಗೆ ತನ್ನದೇ ಆದ ಸ್ಥಾನಮಾನ ನೀಡಲಾಗಿದೆ. ಈ ಸಮಾಜವನ್ನು ಯಾವ ದಿಕ್ಕಿಗೆ ಬೇಕಾದರೂ ಕೊಂಡೊಯ್ಯುವ ‘ತಾಕತ್’ ಇರುವುದು ಅವನೊಬ್ಬನಿಗೆ ಮಾತ್ರ. ಹೌದು, ಗುರು ಒಬ್ಬ ಶಿಲ್ಪಿ, ಕಲಾಕಾರ. ತಾಯಿ ಮಗುವನ್ನು ಹೆತ್ತು ಸಮಾಜಕ್ಕೆ ನೀಡುತ್ತಾಳೆ. ತಾಯಿ ತಾನೆ ಮೊದಲ ಗುರು ಎಂದರೂ ಅನಂತರದ ದಿನಗಳಲ್ಲಿ ಮಕ್ಕಳು ಹೆಚ್ಚು ಕಲಿಯುವುದು ಗುರುವಿನಿಂದ. ಎಳೆಯ ಮಕ್ಕಳೆಂಬ ಕಲ್ಲನ್ನು ಹೇಗೆ ಬೇಕೋ ಹಾಗೆ ಕೆತ್ತಿ, ತಿದ್ದಿ, ತೀಡಿ ಸಮಾಜಕ್ಕೆ ಕೊಡುವ ಅಭೂತಪೂರ್ವ ಕಲೆಗಾರಿಕೆ, ಸದವಕಾಶ ಇರುವುದು ಅವನೊಬ್ಬನಿಗೆ. ಆ ಹಿನ್ನೆಲೆಯಲ್ಲಿಯೇ ಗುರುಕುಲಗಳು ತಲೆ ಎತ್ತಿದ್ದು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅದಿರಲಿ, ಇಲ್ಲಿ ಚರ್ಚಿಸಬೇಕಾದ ವಿಚಾರ ಗುರುಕುಲಗಳ ಬಗ್ಗೆ ಅಲ್ಲ, ಗುರುವಿನ ಬಗ್ಗೆ. ಹಿಂದೆ ಗುರುವಿಗಿದ್ದ ಗೌರವಗಳು ಈಗಿವೆಯಾ...?
ಕನ್ನಡ ಚಿತ್ರ ರಂಗದ ದಿಗ್ಗಜ, ಸಂಗೀತ ನಿರ್ದೇಶಕಹಂಸಲೇಖ ಅವರ ಜೊತೆ ಹಾಗೆ ಸುಮ್ಮನೆ ಮಾತಿಗಿಳಿದಾಗ... ಕೇಳಿದ ಕೆಲವು ಪ್ರಶ್ನೆಗಳು, ಅವುಗಳಿಗೆ ತುಂಬಾ ಜಾಣತನದಿಂದ ಅವ್ರು ನೀಡಿದ ಉತ್ತರಗಳು ಇಲ್ಲಿವೆ. ನೀವು ಹಾಗೆ ಸುಮ್ಮನೆ ಕಣ್ಣಾಯಿಸಿ....