Tuesday, January 26, 2010

ಕುಲಾಂತರಿ ತಳಿ ಮತ್ತು ಕುಲಗೆಟ್ಟ ಶಾಂತಾರಾಮ್

ಓದುಗರು ಕ್ಷಮಿಸಬೇಕು, ಮೊದಲನೆಯದಾಗಿ ಈ ಲೇಖನವನ್ನು ಬರೆಯಲ ಪ್ರಮುಖವಾಗಿ ನನಗಿರುವ ಅರ್ಹತೆ ನಾನೊಬ್ಬ ರೈತ. ಎರಡನೆಯದು ಒಬ್ಬ ಜವಾಬ್ದಾರಿಯುತ ಪತ್ರಕರ್ತ. ಆ ಕಾರಣಕ್ಕಾಗಿಯೇ ಈ ‘ಖಾರವಾ ಲೇಖನ’
“ಬಿ.ಟಿ. ವಿರುದ್ಧ ಯಾರೊಬ್ಬ ರೈತರೂ ಮಾತನಾಡುತ್ತಿಲ್ಲ, ಮಾತನಾಡುವವರಿಗೆ ವಿeನದ ಗಂಧ ಗಾಳಿ ಗೊತ್ತಿಲ್ಲ" ಎನ್ನುತ್ತಿರುವ ಅಮೆರಿಕ ‘ದಲ್ಲಾಳಿ ಶಾಂತಾರಾಮ್’ ಪಕ್ಕಾ ‘ರೈತ ವಿರೋಧಿ, ‘ದೇಶ ದ್ರೋಹಿ’ ಎಂಬುದರಲ್ಲಿ ಎರಡು ಮಾತೇ ಇಲ್ಲ. ರೈತರಿಗೆ ಅಥವಾ ರೈತ ಪರವಾಗಿ ನಿಂತಿರುವವರಿಗೆ ‘ವಿಜ್ಞಾನ’ ಗೊತ್ತಿಲ್ಲ ಸರಿ. ಅದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ದಲ್ಲಾಳಿಗೆ ರೈತರಿಗಿರುವಷ್ಟಾದರೂ ಜ್ಞಾನ’ವಿದೆಯೇ ಎಂಬುದನ್ನು ಮೊದಲು ಸಾಭೀತುಪಡಿಸಲಿ. ಆನಂತರ ಈ ದೇಶದ ರೈತರು ಜ್ಞಾನಿಗಳೋ ಅಜ್ಞಾನಿಗಳೋ ಎಂಬುದನ್ನು ತಿಳಿಯೋಣ.
ಸ್ವಾಮಿ ದಲ್ಲಾಳಿ ಮಹಾಶಯರೇ ನೀವು ಮಾತ್ರ ಈ ದೇಶದಲ್ಲಿ ದಲ್ಲಾಳಿಗಳಲ್ಲ ನಿಮ್ಮಂತ ‘ಹುಸಿ ಬೀಜಗಳು ಭಾರತದ ಮೂಲೆ ಮೂಲೆಯಲ್ಲಿವೆ. ನಿಮ್ಮಂಥವರ ಕಾರಣಕ್ಕಾಗಿಯೇ ಅಮಾಯಕ ರೈತರು ನಯವಾದ ನಿಮ್ಮ ವಂಚಕತನಕ್ಕೆ ಬಲಿಯಾಗಿ ಹಗಲಿರುಳು ನರಳಿದ್ದಾರೆ, ನರುಳುತ್ತಲೇ ಇದ್ದಾರೆ...
ನಮ್ಮ ರೈತರು ದಡ್ಡಶಿಖಾಮಣಿಗಳೆಂದು ನೀವು ಭಾವಿಸಿದ್ದರೆ ಅದು ನಿಮ್ಮ ‘ಜ್ಞಾನ’ವನ್ನು ಬಿಂಬಿಸುತ್ತದೆ. ಖಾಸಗಿ ಚಾನೆಲ್‌ಗಳಲ್ಲಿ ಕೂತು ಏಕಮುಖವಾಗಿ ವಾದ ಮಂಡಿಸುವ ಆ ಮೂಲಕ ‘ಸ್ವಯಂಘೋಷಿತ ಜ್ಞಾನಿಗಳು’ ಆಗಿರುವ ನಿಂಥವರು ರೈತರ ಮಧ್ಯೆ ಬಂದು ಉತ್ತರಿಸಿ, ಆಗ ನಿಮ್ಮ ಬಂಡವಾಳ ಬಯಲಾಗುತ್ತದೆ. ತಾನೇ ಜ್ಞಾನಿಯೆಂದು ಬೊಬ್ಬಿಡುತ್ತ ಗುಳ್ಳೆ ನರಿಯಂತೆ ಮಾಡುವ ನಿಮ್ಮಂತವರನ್ನು ಈ ದೇಶದ ರೈತರೇ ಸಾಕಿ ಬೆಳೆಸಿದ್ದು ಎಂಬುದನ್ನ ಮರೆಯಬೇಡಿ. ಕೊನೇ ಪಕ್ಷ ಅವರು ಬೆಳೆದು ನಿಮ್ಮಂತ ಹೆಗ್ಗಣಗಳಿಗೆ ತಿನ್ನಲು ಸುರಿದ ಆಹಾರದ ಋಣಕ್ಕಾದರೂ ಸರಿ ನ್ಯಾಯಯುತವಾಗಿ ಮಾತನಾಡುವುದನ್ನು ಕಲಿಯಿರಿ, ನೀವು ತಿಂದು ತೇಗುವ ಪ್ರತಿಯೊಂದೂ ರೈತ ಬೆಳೆದದ್ದು. ಅದರ ಹಿಂದೆ ಅವನ ಬೆವರಿನ ವಾಸನೆಯಿದೆ. ಅದನ್ನು ಮರೆತು ನಿಮ್ಮ ಸ್ವಾರ್ಥಕ್ಕಾಗಿ ರೈತರನ್ನು ಯಾಕೆ ಬಲಿ ಕೊಡುತ್ತೀರಿ...?
ನೀವು ಹೋದಲ್ಲೆಲ್ಲಾ ಈ ದೇಶದ ರೈತರನ್ನ, ರೈತ ಪರವಾಗಿ ಮಾತನಾಡುವ ಜಾಗೃತ ಮನೋಸ್ಥಿತಿಯವರನ್ನು ಟೀಕಿಸುತ್ತಿದ್ದೀರಿ. ಅದನ್ನು ನೋಡಿ ನೋಡಿ ಒಬ್ಬ ರೈತನಾಗಿ ನನ್ನಿಂದ ಸಹಿಸಲಾಗುತ್ತಿಲ್ಲ. ಹೌದು, ರೈತರಿಗೆ ವಿದ್ಯೆಯಿಲ್ಲ, ಬುದ್ದಿಯಿಲ್ಲ, ಅವರಿಗೆ ವಿeನ ಗೊತ್ತಿಲ್ಲ. ಆದರೆ ನೀವು ಎಲ್ಲವನ್ನೂ ಅರಿತ ಮಹಾಶಯ. ಈ ದೇಶದ ಕೃಷಿ ನೀವು ವಿ(ಕೃತ) ಜ್ಞಾನಿಗಳು ನಾಲ್ಕು ಗೋಡೆಯ ಎಸಿ ಕೋಣೆಗಳಲ್ಲಿ ಕೂತು ಮಾಡಿದಂತೆ ಅಲ್ಲ ಸ್ವಾಮಿ, ತಪಸ್ಸು. ಇದು ಮಳೆ ಮತ್ತು ರೈತನ ನಡುವಿನ ಹಾವು ಏಣಿಯಾಟ ! ಇಲ್ಲಿ ಬಹುತೇಕ ಸಾರಿ ಸೋತು ಸುಣ್ಣವಾದವನು ರೈತನೆ. ಹಾಗಿದ್ದೂ ಅಲ್ಲಿಯೇ ಸೋಲನ್ನುಂಡ್ಡೂ ಸೋಲದೆ ದುಡಿದು, ತನ್ನ ದಣಿವನ್ನೂ ಅರಿಯದೇ ದುಡಿದು ಈ ದೇಶದಲ್ಲಿರುವ ನಿಮ್ಮಂತ ಹೆಗ್ಗಣಗಳನ್ನು ಸಾಕುತ್ತಿದ್ದಾರೆ ರೈತರು. ಆದರೆ ಅನ್ನ ತಿಂದ ಮನೆಗೆ ಕನ್ನ ಹಾಕಿ ‘ನಾನೇ ಬುದ್ದಿವಂತ’ ಎಂದು ಬೊಬ್ಬಿಡುವ ನಿಮ್ಮಂಥವರು ಬುದ್ದಿ ಕಲಿಯುವುದಾದರೂ ಹೇಗೆ !?
ನೀವು ನಿಜಕ್ಕೂ ಮನುಷ್ಯರಾಗಿದ್ದರೆ, ನಿಮಗೆ ಎದೆಗಾರಿಕೆ ಎನ್ನುವದೇ ಇದ್ದರೆ, ನಿಮ್ಮಲ್ಲಿ ಹರಿಯುವುದು ಈ ದೇಶದ ಬಗೆಗಿನ ಅಭಿಮಾನದ ರಕ್ತವೇ ಆಗಿದ್ದರೆ ಒಬ್ಬ ರೈತನಾಗಿ ನಾನು ಹಾಕುವ ಈ ಸವಾಲನ್ನು ಒಪ್ಪಿಕೊಳ್ಳಿ.
“ನಿಮಗೆ ನಾನು ನನ್ನ ಜಮೀನಿನಲ್ಲೇ ‘ಒಂದು ಗುಂಟೆ’ ಜಮೀನು ನೀಡುತ್ತೇನೆ. ಸಾವಯವ ಕೂಡ ಒಂದು ಕೃಷಿ ವಿಧಾನ, ಅದಕ್ಕೂ ಬಿಟಿಗೂ ಸಂಬಂಧವೇ ಇಲ್ಲ, ಬಿಟಿಯಿಂದ ಭೂಮಿಗೆ, ಜೀವ ಸಂಕುಲಕ್ಕೆ ಯಾವುದೇ ನಷ್ಟವಿಲ್ಲ ಎಂಬುದನ್ನು ನಮ್ಮ ನೆಲದ ಮೇಲೆ ಪ್ರಯೋಗಿಸಿ ತೋರಿಸಿ. ವಿಷಯ ಇಷ್ಟೇ... ನಾನು ಕೊಡುವ ಒಂದು ಗುಂಟೆ ಜಮೀನಿನಲ್ಲಿ ನೀವು ಯಾವುದಾರೂ ಗೊಬ್ಬರವನ್ನಾದರೂ ಬಳಸಿ, ಒಂದು ವರ್ಷ ಕಾಲಾವಕಾಶ ತೆಗೆದುಕೊಳ್ಳಿ, ಹೊಲಕ್ಕಿಳಿದು ನಿಮ್ಮ ಕೈಯ್ಯಾರೆ ಕೃಷಿ ಮಾಡಿ, ಅದರಲ್ಲಿ ಸಾಮಾನ್ಯ ರೈತ ಬೆಳೆಯುವಷ್ಟೇ ಬೆಳೆಯನ್ನು ತೆಗೆದು ತೋರಿಸಿ. ಆಗ ನಿಜಕ್ಕೂ ನಿಮಗೆ ಕೃಷಿಯ ಬಗ್ಗೆ ಗಂಧ ಗಾಳಿ ಗೊತ್ತಿದೆ ಎಂದು ತಿಳಿಯುತ್ತೇನೆ."
ಈ ದೇಶದ ರೈತರು ಇಂದು ನಿಮ್ಮಂಥವರಿಗಾಗಿಯೇ ಜೀವನದುದ್ದಕ್ಕೂ ಜೀವ ತೇಯುತ್ತಲೇ ಬಂದಿದ್ದಾರೆ. ಬುದ್ದಿಗೇಡಿ ವಿಜ್ಞಾನಿ , ಮುಟ್ಟಾಳ ಅಕಾರಿಗಳ ಮಾತು ಕೇಳುತ್ತಲೇ ಕೃಷಿ ಭೂಮಿ ದಿನೇ ದಿನೇ ಒಂದೆಡೆ ಕರಗುತ್ತಿದ್ದರೆ ಮತ್ತೊಂದೆಡೆ ಅಮಾಯಕರ ಮೇಲೆ ದೌರ್ಜನ್ಯ ನಡೆಸಿ ಕಸಿದುಕೊಳ್ಳುತ್ತಿದ್ದೀರಿ. ಇದರಿಂದ ರೈತ ಮತ್ತು ಆತನ ಕುಟುಂಬ ಬೀದಿಗೆ ಬೀಳುತ್ತಿದೆ. ಹಾಗೆ ಬಲವಂತವಾಗಿ ಅಥವಾ ಬಣ್ಣದ ಮಾತಿನಿಂದ ಮರುಳು ಮಾಡಿ ಕಸಿದುಕೊಂಡು ನೀಡಿದ ಪರಿಹಾರ ಒಂದು ಹೊತ್ತಿನ ಕೂಳಿಗೂ ಸಾಕಾಗುತ್ತಿಲ್ಲ!!
ರೈತರಿಗೆ ನಿಮ್ಮ ಕಾನೂನು ಗೊತ್ತಿಲ್ಲ, ನಿಮ್ಮ ಬುದ್ದಿವಂತಿಕೆ ತಂತ್ರಗಾರಿಕೆ ಗೊತ್ತಿಲ್ಲ, ಕುತಂತ್ರವಂತೂ ಮೊದಲೇ ತಿಳಿದಿಲ್ಲ. ಅವರು ನಿರ್ಮಲರು, ನಿಮ್ಮಂತೆ ಕಲಬೆರಕಿಗಳಲ್ಲ... ಅವರಿಗೆ ಗೊತ್ತಿರುವುದೊಂದೇ ಕೃಷಿ, ಕೃಷಿ ಮತ್ತು ಕೃಷಿ.... ಭೂಮಿಯನ್ನೇ ತಮ್ಮ ತಾಯಿಯೆಂದು ನಿತ್ಯವೂ ಪೂಜಿಸಿ, ಅದನ್ನೇ ನಂಬಿಕೊಂಡು ಬದುಕುತ್ತಿರುವವರು ನಿಮ್ಮಂತವರ ಕುತಂತ್ರಕ್ಕೆ ಬಲಿಯಾಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಅವರ ಶಾಪ ನಿಮಗೆ ತಟ್ಟದೆ ಇರದು. ನಾವೇ ಬುದ್ದಿವಂತರು, ಪ್ರಭುದ್ಧರು ಜಗತ್ತನ್ನೇ ಜಯಿಸಬಲ್ಲೆವು ಎಂದು ಕೊಬ್ಬಿನಿಂದ ಬೊಬ್ಬಿಟ್ಟರೂ ಪ್ರಕೃತಿ ಮುಂದೆ ನೀವೆಲ್ಲಾ ಬಚ್ಚಾಗಳು.
ಇಂದು ಮಳೆ ಬರುತ್ತದೆ ಎಂದು ನಿಮ್ಮ ವಿeನಿಗಳು ಹೇಳಿದ್ದು, ಅದು ಪತ್ರಿಕೆಗಳಲ್ಲಿ ವರದಿಯಾಗಿದ್ದನ್ನು ಕಂಡು ಹೊಲದಲ್ಲಿ ಬೀಜ ಬಿತ್ತಿ, ಅದು ಬರದಿದ್ದಾಗ ರೈತರು ಪ್ರತೀ ಸಾರಿ ನಿಮಗೆ ಹಿಡಿ ಶಾಪ ಹಾಕಿದ್ದಾರೆ, ಹಾಕುತ್ತಲೇ ಇದ್ದಾರೆ. ಮಳೆ ಬರುವುದಿಲ್ಲ ಎಂದಾಗಲೆಲ್ಲಾ ರೈತರ ಬದುಕಿನಲ್ಲಿ ಸುನಾಮಿಯೇ ಅಪ್ಪಳಿಸಿದೆ. ಆ ಸತ್ಯ, ನಿಮ್ಮ ವಿಜ್ಞಾನದ ಬಂಡವಾಳ ನಿಮ್ಮ ಆತ್ಮ ಸಾಕ್ಷಿಗೂ ಗೊತ್ತು. ಆದರೆ ನೀವು ಆತ್ಮಸಾಕ್ಷಿಯನ್ನು ಮಾರಿಕೊಂಡವರು. ನಮಗೆ ಅದು ಅರ್ಥ ಆಗದು...
ಮತ್ತೊಮ್ಮೆ ಹೇಳುತ್ತೇನೆ ನನ್ನ ಸವಾಲಿಗೆ ರೆಡಿಯಾದರೆ ನೀವು ಯಾವತ್ತಾದರೂ ಸರಿ ಬನ್ನಿ. ನಾನು ಭೂಮಿ ನೀಡಲು ರೆಡಿ. ಇಲ್ಲದಿದ್ದರೆ ಅಮಾಯಕ ರೈತರನ್ನು ಅನಾವಶ್ಯಕವಾಗಿ ಹಾದಿ ತಪ್ಪಿಸುವ ಬದಲು ‘ತೆಪ್ಪಗೆ ಕುಳಿತುಕೊಳ್ಳಿ’. ಇಲ್ಲದಿದ್ದರೆ ಅದರ ಪರಿಣಾಮವನ್ನು ಮುಂದೆ ನೀವೇ ಅನುಭವಿಸುತ್ತೀರಿ... ಇದನ್ನು ಬೆದರಿಕೆ ಎಂದು ಭಾವಿಸಬೇಡಿ, ರೈತರು ನಿಮ್ಮಷ್ಟು ಸಹನಶೀಲರಲ್ಲ, ಪಿತ್ತ ನೆತ್ತಿಗೇರಿದರೆ ಅವರಷ್ಟು ಕೆಟ್ಟವರು ಈ ದೇಶದಲ್ಲಿ ಮತ್ತಾರೂ ಇಲ್ಲ ಹಾಗಾಗಿ ಇದು ಎಚ್ಚರಿಕೆ...

ಜತೆಗೆ ನಿಮಗೆ ಕೆಲವು ಪ್ರಶ್ನೆಗಳಿವೆ. ಸಾಧ್ಯವಾದರೆ ಮನಸ್ಸಾಕ್ಷಿಯಿದ್ದರೆ ಉತ್ತರಿಸಿ...
* ನಿಮಗೆ ಎಂದಾದರೂ ವಿಷ ಕುಡಿದು ಅನುಭವ ಇದೆಯೇ ?
* ಬಿಟಿ ಹತ್ತಿಯನ್ನು ಸದ್ದಿಲ್ಲದೆ ಈ ದೇಶದ ರೈತರ ಮನೆಗೆ ತಳ್ಳಿದ್ದು ನೀವೆ ತಾನೆ ?
*ಬಿಟಿ ಹತ್ತಿ ಬೆಳೆದ ಭೂಮಿ ಯಾಕೆ ಹಂತ ಹಂತವಾಗಿ ಬಂಜರಾಗುತ್ತಿದೆ ?
* ಬ್ರೂಣದಲ್ಲಿದ್ದ ಶಿಶುವಿನ ಲಿಂಗ ಪತ್ತೆ ಹಚ್ಚಿದ ನಿಮ್ಮ ವಿeನದಿಂದ ಇಂದು ಏನಾಗಿದೆ ?
*ಡಿಡಿಟಿ, ಎಂಟೋಸಲಾನ್‌ಗಳನ್ನು ಮಾರುಕಟ್ಟೆಗೆ ಬಿಡುವಾಗ ಅದರ ಅವಗುಣಗಳನ್ನು ಯಾಕೆ ಜನರಿಗೆ ತಿಳಿಸಲಿಲ್ಲ ?
* ಈ ಕ್ರಿಮಿನಾಶಕದಿಂದ ದೇಶದ ಉದ್ದಗಲಕ್ಕೂ ಆದ ದುಷ್ಪರಿಣಾಮವನ್ನು ನೀವು ಹತ್ತಿರದಿಂದ ಕಂಡೀದ್ದೀರಾ?
* ಬದುಕಿನಲ್ಲಿ ಒಮ್ಮೆಯಾದರೂ ಗಾಯದ ಮೇಲೆ ಬರೆ ಎಳೆದುಕೊಂಡಿದ್ದೀರಾ? ಅದರ ನೋವು ಹೇಗಿರುತ್ತದೆ ಗೊತ್ತಾ ?

Thursday, January 21, 2010

ಬ್ರೇಕಿಂಗ್ ನ್ಯೂಸ್ : ರಂಗ ಕರ್ಮಿ ಚಂದೋಡಿ ಲೀಲಾ ನಿಧನ

ಹಿರಿಯ ರಂಗ ಕರ್ಮಿ, ಪದ್ಮಶ್ರೀ ಪ್ರಶಸ್ತಿ ವಿಜೇತೆ ಚಂದೋಡಿ ಲೀಲಾ (೭೨) ಗುರುವಾರ (ಜ.೨೧) ಬೆಂಗಳೂರಿನ ವೋಕಾರ್ಟ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ೧೦ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ಕೆಲ ದಿನಗಳಿಂದ ಹೃದಯ ಸಂಭಂದಿ ಕಾಯಿಲೆಯಿಂದ ಬಳಲುತ್ತಿದ್ದರು...
ಕೆ.ಬಿ.ಆರ್. ನಾಟಕ ಕಂಪನಿಯಲ್ಲಿ ಅವಿರತವಾಗಿ ದುಡಿದ ಅವರು "ಪೊಲೀಸನ ಮಗಳು" ನಾಟಕ ೪೫೦೦ ಪ್ರದಶನ ಕಾಣುವ ಮೂಲಕ ಇತಿಹಾಸ ನಿರ್ಮಿಸಿತ್ತು.

Wednesday, January 20, 2010

ಬಿಟಿ ಮತ್ತು ರೈತರು

ರಾಜ್ಯದಲ್ಲಿ ಮಾತ್ರವಲ್ಲ ಈಗ ದೇಶದೆಲ್ಲೆಡೆ ಬಿಟಿ ಬದನೆ ಬಗ್ಗೆ ಚರ್ಚೆ ನಡೆಯುತ್ತಿದೆ. ರೈತರು ಮಾತ್ರವಲ್ಲ ಈ ದೇಶದ ನೆಲ ಮತ್ತು ರೈತಪರ ಕಾಳಜಿಯುಳ್ಳ ಎಲ್ಲರೂ ಇದನ್ನು ಸಾರಸಗಟಾಗಿ ವಿರೋಸುತ್ತಿದ್ದಾರೆ. ಪಶ್ಚಿಮ ಬಂಗಾಳ ಸೇರಿದಂತೆ ದೇಶದ ೭ ರಾಜ್ಯಗಳು ಈಗಾಲೇ ಈ ಕುಲಾಂತರಿ ತಳಿಗಳನ್ನು ವಿರೋಸಿವೆ. ವಿಶ್ವದ ಶೇ.೮೦ ರಾಷ್ಟ್ರಗಳು ಕೂಡ ಇದನ್ನು ವಿರೋಸಿದ್ದರಿಂದ ಈಗ ಅಮೆರಿಕದ ಕಣ್ಣು ಭಾರತದ ಮೇಲೆ ಬಿದ್ದಿದೆ!
ಇಂಥ ಅಮೆರಿಕದ ಕುತಂತ್ರವನ್ನು ಹಿಂದು ಮುಂದು ನೋಡದೆ ಒಪ್ಪಿಕೊಂಡು ಶೇ.೬೫ ಕುಲಾಂತರಿ ಬೀಜ ಬಳಸಿದ ಅರ್ಜೆಂಟೈನಾ ಮತ್ತು ಪೆರುಗ್ವೆ ದೇಶಗಳಲ್ಲಿ ಈಗ ಇಳುವರಿ ಕಡಿಮೆಯಾಗಿದೆ. ಆದರೆ ಇಷ್ಟೆಲ್ಲಾ ಕುತಂತ್ರವನ್ನು ಇತರ ದೇಶಗಳ ಮೇಲೆ ಹೇರುತ್ತಿರುವ ಅಮೆರಿಕ ಮಾತ್ರ ಸಾವಯವ ಆಹಾರವನ್ನು ಆಮದು ಮಾಡಿಕೊಳ್ಳುತ್ತಿರುವ ದೇಶಗಳಲ್ಲಿ ಪ್ರಮುಖ ಸ್ಥಾನದಲ್ಲಿದೆ. ಎಲ್ಲ ದೇಶಗಳ ಮೇಲೆ ಹೀಗೆ ಬಿಟಿ ಬೀಜಗಳನ್ನು ಬಿತ್ತಲ್ಲು ಹಚ್ಚಿದರೆ ಮುಂದೊಂದು ದಿನ ತಮಗೇ ಸಾವಯವ ಆಹಾರ ಸಿಗುವುದಿಲ್ಲ ಎಂಬ ಸಣ್ಣ ಸತ್ಯ ಕೂಡ ದೊ(ದ)ಡ್ಡಣ ಅಮೆರಿಕಗೆ ತಿಳಿದಿಲ್ಲ. ಇದೇ ವಿಪರ್ಯಾಸ.
ಹೀಗೆ ಆತುರಾತಿರವಾಗಿ ಬಿಟಿ ಬದನೆಯನ್ನು ಭಾರತದ ರೈತರ ಮೇಲೆ ಹೇರಲು ಹುನ್ನಾರ ನಡೆಸಿರುವ ಅಮೆರಿಕ, ಕೇಂದ್ರ ಸರಕಾರದ ಜುಟ್ಟು ಹಿಡಿದು ಕೂತಿದೆ. ಈಗಾಗಲೇ ಭಾರತದ ರೈತರ ಮೇಲೆ ಬಲವಂತವಾಗಿ ಬಿಟಿ ಬದನೆಯನ್ನು ಹೇರಿ ಶೇ.೫೦ರಷ್ಟು ರೈತರ ಭೂವಿಯನ್ನು ಹಾಳುಗೆಡವಿರುವ ಅಮೆರಿಕದ ‘ಸಂಜೆಂಟಾ’, ‘ಮಾನ್ಸಂಟೋ’ದಂಥ ಬಹುರಾಷ್ಟ್ರೀಯ ಕಂಪೆನಿಗಳು ಈಗ ಬಿಟಿ ಬದನೆಯನ್ನು ಮುಂದಿಟ್ಟುಕೊಂಡು ಕೂತಿವೆ.
ಬಿಟಿ ಹತ್ತಿ ಬೆಳೆಯುತ್ತಿರು ರೈತರಲ್ಲಿ ಈಗಾಗಲೇ ಉಬ್ಬಸ, ಚರ್ಮರೋಗದಂತ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು, ಅದರ ಗಾಯ ಇನ್ನೂ ಹಸಿ ಹಸಿಯಾರಿಗುವಾಗಲೇ ಅದರ ಮೇಲೆ ಮತ್ತೊಂದು ಬರೆ ಎಳೆಯಲು ‘ಸಂಜೆಂಟಾ’ ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ. ಇದಕ್ಕೆ ‘ಶಾಂತಾರಾಮ್‌ರಂಥ ಏಜೆಂಟ್’ರನ್ನು ಬಳಸಿಕೊಳ್ಳುತ್ತಿದೆ. ಅದಕ್ಕೆ ಇಂಥವರೆಲ್ಲಾ ವಿeನಿಗಳು ಎಂಬ ಹೆಸರಿನಲ್ಲಿ ಕೋಲೆ ಬಸವನ ರೀತಿ ತಲೆದೂಗುತ್ತಿರುವುದಲ್ಲದೆ ಈ ದೇಶದ ರೈತರನ್ನೂ ತಲೆದೂಗಲು ಹೇಳುತ್ತಿದ್ದಾರೆ.
ಇಲ್ಲಿಯ ರೈತರು ಬೆಳೆದ ಅನ್ನ ತಿಂದು, ನೀರು ಕುಡಿದು ಬೆಳೆದು, ಈ ನೆಲದಲ್ಲಿ ಕಲಿತು ದೊಡ್ಡವರಾಗಿ ಉನ್ನತ ಶಿಕ್ಷಣವನ್ನ ಇನ್ಯಾವುದೋ ಪರದೇಶಿಗಳ ಕೈಲಿ ಕಲಿತು ಅದನ್ನೇ ಮೈಗೂಡಿಸಿಕೊಂಡು ಅವರು ಕೊಟ್ಟ ಪುಡಿಗಾಸನ್ನು ಆರಿಸಿಕೊಳ್ಳುತ್ತಿರುವ ಶಾಂತಾರಾಮ್‌ರಂಥವರು ಜನ್ಮ ನೀಡಿ ಸಾಕಿ ಬೆಳೆಸಿದ ಭೂಮಿಗೇ ವಿಷವಿಕ್ಕಲು ಅಣಿಯಾಗಿದ್ದಾರೆ. ಇಂಥ ‘ದೇಶದ್ರೋಹಿಗಳು’, ‘ಹೃದಯ ಹೀನರು’, ಕಿರಾತಕರಿಗೆ ಅದ್ಯವಾವ ರೀತಿ ಬುದ್ದಿ ಹೇಳಬೇಕೋ ತಿಳಿಯದು.
ಅದಿರಲಿ, ಇಂಥ ಮಾರಕ ಜೀ ವಿರೋ ವಿಚಾರದ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ನಡೆಸುವ ಸಂದರ್ಭದಲ್ಲಿ ಬೆಂಗಳೂರಿಗೆ ಅದೇ ವಿಚಾರದ ಬಗ್ಗೆ ಚರ್ಚೆ ನಡೆಸಲು ಖ್ಯಾತ ವಿಜ್ಞಾನಿ ಡಾ. ಪುಷ್ಪ ಎಂ.ಭಾರ್ಗವ್ ಜ.೨೦ರಂದು ಆಗಮಿಸಿದ್ದರು.
ಇದರ ಬಗ್ಗೆ ಎಲ್ಲ ಮಾಧ್ಯಮಗಳಲ್ಲಿಯೂ ಪ್ರಚಾರ ಮಾಡಲಾಗಿತ್ತು. ‘ಬಿಟಿ ಬದನೆಯ ತೆರೆಮರೆಯ ಸತ್ಯಕಥೆ’ ಕುರಿತ ಭಾಷಣ ಹಾಗೂ ಚರ್ಚೆ’ಯಲ್ಲಿ ಭಾಗವಹಿಸಲು ರೈತರು, ರೈತ ನಾಯಕರಿಗೆ ಮನವಿ ಮಾಡಲಾಗಿತ್ತು. ಜತೆಗೆ ಚರ್ಚೆಗೆ ಮುಂಚಿತವಾಗಿಯೇ ಹೆಸರು ನೋಂದಣಿ ಮಾಡಿಸಲು ತಿಳಿಸಲಾಗಿತ್ತು. ಆದರೆ ಅಲ್ಲಿ ಆಗಿದ್ದೇ ಬೇರೆ. ಕೆಲವೇ ಕೆಲವು ರೈತರು ಮಾತ್ರ ಅಲ್ಲಿಗೆ ಆಗಮಿಸಿದ್ದರು. ಇನ್ನು ಹೆಸರು ನೋಂದಾಯಿಸಿದ ಪ್ರಮುಖ ರೈತರು ಕೂಡ ಚರ್ಚೆ ವೇಳೆ ಕಾರ್ಯಕ್ರಮದಲ್ಲಿರಲಿಲ್ಲ! ಇದು ನಮ್ಮ ರೈತರ, ರೈತನಾಯಕರ ಉತ್ಸಾಹ, ಆಕ್ರೋಶ ಮತ್ತು ಬುದ್ದಿವಂತಿಕೆ...!!
ರೈತರಿಗೆ ರೈತಾಪಿಯ ಜತೆಗೆ ಅದೆಷ್ಟು ಅನಿವಾರ್ಯತೆ, ಹೊಂದಾಣಿಕೆಗಳಿರುತ್ತವೆ ಎಂಬುದು ಗೊತ್ತು. ಆದರೂ ಇಂಥ ಸುಸಂದರ್ಭಗಳಲ್ಲಿ ಒಂದು ದಿನದ ಮಟ್ಟಿಗಾದರೂ ಬಿಡುವು ಮಾಡಿಕೊಂಡು ಭಾಗವಹಿಸುವುದು, ತಮ್ಮ ಪರ ಕಾಳಜಿ ಇರುವವರ, ತಮ್ಮನ್ನು ಬೆಂಬಲಿಸುವವರ ಜತೆ ಕುಳಿತು ಚರ್ಚೆ ನಡೆಸುವ ಉತ್ಸಾಹವನ್ನಾದರೂ ತೋರಬೇಕು. ಅದಾಗದೆ ಹೋದರೆ ಮುಂದೊಂದು ದಿನ ಇಂಥ ಬಹುರಾಷ್ಟ್ರೀಯ ಕಂಪನಿಗಳು, ಏಜೆಂಟರು ರೈತರನ್ನು ತಿಂದು ತೇಗುವುದರಲ್ಲಿ ಸಂಶಯವಿಲ್ಲ.
ಡಾ.ಪುಷ್ಪ ಎಂ.ಭಾರ್ಗವ್ ಹೇಳಿದ್ದೇನು?
ಭಾರತದಲ್ಲಿ ಮಾತ್ರವಲ್ಲ ಇಡೀ ವಿಶ್ವದಲ್ಲಿಯೇ ಆಯಾ ಪ್ರದೇಶಕ್ಕೆ ಅನುಗುಣವಾಗಿ ಆಹಾರ ಪದ್ಧತಿ ರೂಪಿತವಾಗಿದೆ. ಅದರ ಆಧಾರದ ಮೇಲೆಯೇ ಅಲ್ಲಿನ ರೈತರು ಆಹಾರ ಬೆಳೆಯನ್ನು ಬೆಳೆಯುತ್ತಾರೆ. ಅದೆಲ್ಲವೂ ಅಲ್ಲಿನ ಹವಾಗುಣಕ್ಕೆ ಹೊಂದಿಕೊಂಡಿರುತ್ತದೆ. ಅಲ್ಲಿ ಏನು ಬೆಳೆಯಬೇಕು ಎಂಬುದನ್ನು ರೈತರೇ ನಿರ್ಧರಿಸುತ್ತಾರೆ. ಆದರೆ ಈಗ ಲಾಭದಾಸೆಗಾಗಿ ಮಾನ್ಸಾಂಟೋ ಹಾಗೂ ಸಂಜೆಂಟಾದಂತ ಬಹುರಾಷ್ಟ್ರೀಯ ಕಂಪನಿಗಳು ರೈತರ ಮೇಲೆ ವಿಷಕಾರ ಬೀಜಗಳನ್ನು ಬಿತ್ತಲು ಒತ್ತಡ ಹೇರುತ್ತಿವೆ.
ಬಿಟಿ ತಳಿ ಪರಿಸರಕ್ಕೆ ಮಾರಕ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅದನ್ನು ಪರೀಕ್ಷೆ ಮಾಡಲು ಕೂಡ ಭಾರತದಂಥ ದೇಶಗಳಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಲ್ಯಾಬ್‌ಗಳಿಲ್ಲ. ಒಂದು ವೇಳೆ ಪರೀಕ್ಷೆ ಮಾಡಲು ಮುಂದಾದರೂ ಅದರ ಫಲಿತಾಂಶ ಗೊತ್ತಾಗಲು ಕನಿಷ್ಠ ೨೦ ವರ್ಷ ಬೇಕು.
ಹೀಗಾಗಿ ಕೇಂದ್ರ ಸರಕಾರ ರೈತಸ್ನೇಹಿಯಾಗಿ ನಿರ್ಧಾರ ಕೈಗೊಂಡು ಬಿಟಿ ಬದನೆಯನ್ನು ತಿರಸ್ಕರಿಸುವುದು ಒಳಿತು. ಬಿಟಿ ಬದನೆ ಕುರಿತು ಸಾಕಷ್ಟು ಜನರಲ್ಲಿ ಅರಿವಿನ ಕೊರತೆಯಿದೆ. ಮುಖ್ಯವಾಗಿ ರೈತರಲ್ಲಿ ಈ ಕುರಿತ ಜಾಗೃತಿ ಮೂಡಲೇಬೇಕಿದೆ. ಬಿಟಿ ಬದನೆ ಕುರಿತು ಎದುರಾಗುವ ಸಮಸ್ಯೆಯ ಸಂಪೂರ್ಣ ವಿವರ ಇದುವರೆಗೂ ಸಿಕ್ಕಿಲ್ಲ. ದೊರೆತ ಮಾಹಿತಿ ಆಧರಿಸಿ ವಿಶ್ಲೇಷಿಸಿದಾಗ ಇದರಿಂದ ಆಗುವ ದುಷ್ಪರಿಣಾಮವೇ ಹೆಚ್ಚು.
ಜತೆಗೆ ಬಿಟಿ ಎಂದಾಕ್ಷಣ ಅದರ ಹಿಂದೆ ಕೇವಲ ಬೀಜ ಮಾತ್ರವಲ್ಲ ಅರ್ಥಶಾಸ್ತ್ರ, ರಾಜಕೀಯ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಪಿತೂರಿ ಎಲ್ಲವೂ ಅಡಗಿದೆ. ಹೀಗಾಗಿ ಅದೊಂದು ಸುಳ್ಳಿನ ಕಂತೆ. ಭಾರತಕ್ಕೆ ಸ್ವಾತಂತ್ರ್ಯವೇನೊ ಬಂದಿದೆ ಆದರೆ ಇಂಥ ಕಂಪನಿಗಳ ವರ್ತನೆ ಒತ್ತಡಗಳನ್ನು ನೋಡಿದರೆ ಎಲ್ಲಿ ಸ್ವಾತಂತ್ರ್ಯ ಬಂದಿದೆ ಎಂಬ ಪ್ರಶ್ನೆ ಕಾಡುತ್ತದೆ ಎಂದು ವಿeನಿ ಪುಷ್ಪ ಎಂ.ಭಾರ್ಗವ್ ಹೇಳಿದರು. (ಇವು ಪ್ರಮುಖ ಅಂಶಗಳು ಮಾತ್ರ)
ರೈತರೇ ಬನ್ನಿ...
ಅಂದ ಹಾಗೆ ಇದೇ ಬಿಟಿ ಬಗ್ಗೆ ಚರ್ಚೆ ನಡೆಸಲು ಹಾಗೂ ರಾಜ್ಯದ ರೈತರ ಅಭಿಪ್ರಾಯ ಸಂಗ್ರಹಿಸಲು ಜ.೨೫ರ ಸೋಮವಾರ ಕೇಂದ್ರ ಪರಿಸ ಮತ್ತು ಅರಣ್ಯ ಸಚಿವ ಜಯ್‌ರಾಮ್ ರಮೇಶ್ ಆಗಮಿಸಲಿದ್ದಾರೆ.
ಬೆಂಗಳೂರಿ ರೆಸಿಡೆನ್ಸಿ ರಸ್ತೆಯಲ್ಲಿರುವ ಸೈಂಟ್ ಜೋಸೆಂಫ್ ಪಿಯು ಕಾಲೇಜು ಮುಂಭಾಗದಲ್ಲಿರುವ ಗುಡ್ ಶೇಫರ್ಡ್ ಆಡಿಟೋರಿಮ್‌ನಲ್ಲಿ ಶೀಘ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ರೈತರು, ರೈತಪರ ಕಾಳಜಿಯುಳ್ಳವರು ಅಂದು ಸಮಯಕ್ಕಿಂತ ಮುಂಚಿತವಾಗಿಯೇ ಬಂದು ಕುಳಿತರೆ ಒಳ್ಳೆಯದು. ಜತೆಗೆ ತಮ್ಮ ರೈತಪರ ನಿಲುವನ್ನು ಪ್ರಕಟಿಸಿದರೆ ಇನ್ನೂ ಒಳಿತು. ರೈತರದಲ್ಲದವರಿಗೂ ಇದು ರಾಜ್ಯದ ರೈತರ ಅನ್ನದ ಋಣವನ್ನು ತೀರಿಸಲು ಒಂದು ಸುವರ್ಣಾವಕಾಶ !

Saturday, January 16, 2010

ಬನ್ನಿ ಪುಸ್ತಕ ಪರಿಷೆಗೆ

ಇದು ಹೊತ್ತಗೆ ಎತ್ತಿಕೊಳ್ಳುವ ಹೊತ್ತು
ಕಡಲೆ ಪರಿಷೆ ನಡೆಯೋ ಜಾಗ ಬೆಂಗಳೂರಿನ ಬಸವನಗುಡಿ ಇನ್ನೊಂದು ಪರಿಷೆಗೆ ಸಜ್ಜಾಗಿದೆ. ಈ ಬಾರಿ ಕಡಲೆ ಸಿಗಲ್ಲ. ಪುಸ್ತಕ ಸಿಗುತ್ತೆ !
ಇದು ‘ಪುಸ್ತಕ ಪರಿಷೆ’. ಹಿಂದೆ ನಡೆಯದಿದ್ದ ವಿನೂತನ ಪ್ರಯೋಗವಿದು. ಯಾವುದೇ ಪುಸ್ತಕ ಮೇಳ, ಪುಸ್ತಕ ಸಂತೆ ಅಥವಾ ಮಳಿಗೆಗೆ ಕಾಲಿಟ್ಟರೂ ಹಣ ಕೊಟ್ಟೇ ಪುಸ್ತಕ ಖರೀದಿ ಮಾಡಬೇಕು. ಹಳೇ ಪುಸ್ತಕದ ಅಂಗಡಿಗೆ ಕಾಲಿಟ್ಟರೂ ದುಡ್ಡು ಕೊಡದೆ ಒಂದು ಖಾಲಿ ಹಾಳೆಯೂ ಸಿಗುವುದಿಲ್ಲ ! ಅಂಥದ್ದರಲ್ಲಿ ಇಲ್ಲಿ ಪುಕ್ಕಟೆ, ಅದೂ ನಿಮಗೆ ಇಷ್ಟವಾದ ಪುಸ್ತಕ ದೊರೆಯುತ್ತದೆ !
ನಿಜ, ಅದೇ ಇಲ್ಲಿನ ವಿಶೇಷತೆ. ಜ.೧೭ರಂದು ಬಸವನಗುಡಿಯಲ್ಲಿ ‘ಪುಸ್ತಕ ಪರಿಷೆ’ ನಡೆಯಲಿದೆ. ‘ಸೃಷ್ಟಿ ವೆಂಚರ‍್ಸ್’ ಸಂಸ್ಥೆ ಈ ಕಾರ್ಯಕ್ರಮಕ್ಕೆ ಕೈ ಹಾಕಿದೆ. ‘ತಮಗೊಂದು ಪುಸ್ತಕ ಉಚಿತವಾಗಿ ಮತ್ತು ತಮ್ಮಿಂದಷ್ಟು ಪುಸ್ತಕಗಳು ಮೇಳಕ್ಕಾಗಿ’ ಎಂಬ ಘೋಷಣೆಯೊಂದಿಗೆ ನಡೆಸುತ್ತಿರುವ ಈ ಪರಿಷೆಗೆ ಈಗಾಗಲೇ ಸಾಕಷ್ಟು ಅಮೂಲ್ಯ ಪುಸ್ತಕಗಳು ಕೊಡುಗೆಯಾಗಿ ಬಂದಿವೆ. ಪುಸ್ತಕಗಳನ್ನು ಪ್ರೀತಿಸುವವರು, ಕೊಳ್ಳಲು ಹಣವಿಲ್ಲ ಎಂದು ಯೋಚಿಸುವವರೂ ಈ ಪರಿಷೆಗೆ ಆಗಮಿಸಬಹುದು. ಆದರೆ ನಿಮಗಿಷ್ಟವಾದ ಒಂದೇ ಒಂದು ಪುಸ್ತಕವನ್ನು ಮಾತ್ರ ತೆಗೆದುಕೊಂಡು ಹೋಗಬಹುದು.
ಇದು ಓದುಗರ ಅಭಿರುಚಿ ಹೆಚ್ಚಿಸುವ ಜತೆಗೆ ಪುಸ್ತಕಗಳ ಬಗ್ಗೆ ಓದುಗರಲ್ಲಿ ಆಸಕ್ತಿಯನ್ನೂ ಹೆಚ್ಚಿಸಲಿದೆ ಎಂಬುದು ಸುಳ್ಳಲ್ಲ. ಈ ವಿಶೇಷತೆಯಿಂದಾಗಿಯೇ ಈಗಾಗಲೇ ಪರಿಷೆ ಬಗ್ಗೆ ಪುಸ್ತಕಪ್ರಿಯರಲ್ಲಿ ಕುತೂಹಲ ಆರಂಭವಾಗಿದೆ. ಕನ್ನಡದಲ್ಲಿ ಓದುಗರೇ ಇಲ್ಲವಾಗುತ್ತಿದ್ದಾರೆ ಎಂಬ ಅಪವಾದದ ನಡುವೆಯೂ ಪುಸ್ತಕಗಳು ಹರಿದು ಬರುತ್ತಿರುವುದು ಹಾಗೂ ಈ ಬಗ್ಗೆ ಪುಸ್ತಕ ಪ್ರೇಮಿಗಳ ನಡುವೆ ಚರ್ಚೆಯಾಗುತ್ತಿರುವುದು ನೋಡಿದರೆ ಆ ಮಾತು ಸುಳ್ಳು ಎನಿಸದಿರದು. ಪಂಚಭೂತ, ಬಣ್ಣದ ಬಯಲು, ವಿeನ ಶಿಬಿರದಂಥ ಕಾರ್ಯಕ್ರಮ ನಡೆಸಿದ್ದ ‘ಸೃಷ್ಟಿ ವೆಂಚರ‍್ಸ್’ ಈಗ ಈ ಪ್ರಯೋಗಕ್ಕೆ ಕೈ ಹಾಕಿದೆ.
ಇಲ್ಲಿ ಎಲ್ಲ ರೀತಿಯ ಪುಸ್ತಕಗಳೂ ಸಿಗಲಿವೆ. ಇಲ್ಲಿಗೆ ಬರಲು ಯಾವುದೇ ನಿರ್ಬಂಧಗಳಿಲ್ಲ. ಪುಸ್ತಕಪ್ರಿಯನಾಗಿರಬೇಕು ಎಂಬುದೊಂದೇ ಕಟ್ಟಳೆ. ಬರುವಾಗ ಒಂದಾದರೂ ಪುಸ್ತಕ ತನ್ನಿ ಎಂಬುದು ಪ್ರೀತಿಯ ಕಂಡಿಷನ್. ಬರುತ್ತೀರಲ್ವಾ...?

೧೭ರಂದು ಬಸವನಗುಡಿಯಲ್ಲಿಪುಸ್ತಕ ಪರಿಷೆನಡೆಯಲಿದೆ. ‘ಸೃಷ್ಟಿ ವೆಂಚರ್ಸ್ಸಂಸ್ಥೆಯ ಸಾಹಸವಿದು. ‘ತಮಗೊಂದು ಪುಸ್ತಕ ಉಚಿತವಾಗಿ ಮತ್ತು ತಮ್ಮಿಂದಷ್ಟು ಪುಸ್ತಕಗಳು ಮೇಳಕ್ಕಾಗಿಎಂಬುದು ಇದರ ಘೋಷಣೆ.

ಬಸವನಗುಡಿಯಲ್ಲಿ .೧೭ರಂದು ಬೆಳಗ್ಗೆ೧೦ ಗಂಟೆಗೆ ಪುಸ್ತಕ ಪರಿಷೆಯನ್ನು ಸಾಹಿತಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಉದ್ಘಾಟಿಸಲಿದ್ದಾರೆ. ಕನ್ನಡ ಪುಸ್ತಕ ಪ್ರಾಕಾರದ ಅಧ್ಯಕ್ಷ ಡಾ.ಸಿದಟಛಿಲಿಂಗಯ್ಯ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಪರಿಷೆ ನಡೆಯುವ ಸ್ಥಳ: ನಂ.೮೧, ೧ನೇ ಮಹಡಿ,(ಪುಳಿಯೊಗರೆ ಪಾಯಿಂಟ್ ಮೇಲೆ), ..ಟಿ.ರಸ್ತೆ, ಎನ್.ಆರ್.ಕಾಲನಿ, ಬಸವನಗುಡಿ, ಬೆಂಗಳೂರು
-ಭಾಗ್ಯ ನೆಲ್ಲಿಕ್ಕಳಯ
Powered By Blogger