Friday, July 24, 2009

ರಾಜಕೀಯ ಪುಡಾರಿಗಳಾಗುತ್ತಿರುವ ಗುರುಗಳು...!?

ಭಾರತದಲ್ಲಿ ಗುರುವಿಗೆ ತನ್ನದೇ ಆದ ಸ್ಥಾನಮಾನ ನೀಡಲಾಗಿದೆ. ಈ ಸಮಾಜವನ್ನು ಯಾವ ದಿಕ್ಕಿಗೆ ಬೇಕಾದರೂ ಕೊಂಡೊಯ್ಯುವ ‘ತಾಕತ್’ ಇರುವುದು ಅವನೊಬ್ಬನಿಗೆ ಮಾತ್ರ. ಹೌದು, ಗುರು ಒಬ್ಬ ಶಿಲ್ಪಿ, ಕಲಾಕಾರ. ತಾಯಿ ಮಗುವನ್ನು ಹೆತ್ತು ಸಮಾಜಕ್ಕೆ ನೀಡುತ್ತಾಳೆ. ತಾಯಿ ತಾನೆ ಮೊದಲ ಗುರು ಎಂದರೂ ಅನಂತರದ ದಿನಗಳಲ್ಲಿ ಮಕ್ಕಳು ಹೆಚ್ಚು ಕಲಿಯುವುದು ಗುರುವಿನಿಂದ. ಎಳೆಯ ಮಕ್ಕಳೆಂಬ ಕಲ್ಲನ್ನು ಹೇಗೆ ಬೇಕೋ ಹಾಗೆ ಕೆತ್ತಿ, ತಿದ್ದಿ, ತೀಡಿ ಸಮಾಜಕ್ಕೆ ಕೊಡುವ ಅಭೂತಪೂರ್ವ ಕಲೆಗಾರಿಕೆ, ಸದವಕಾಶ ಇರುವುದು ಅವನೊಬ್ಬನಿಗೆ. ಆ ಹಿನ್ನೆಲೆಯಲ್ಲಿಯೇ ಗುರುಕುಲಗಳು ತಲೆ ಎತ್ತಿದ್ದು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅದಿರಲಿ, ಇಲ್ಲಿ ಚರ್ಚಿಸಬೇಕಾದ ವಿಚಾರ ಗುರುಕುಲಗಳ ಬಗ್ಗೆ ಅಲ್ಲ, ಗುರುವಿನ ಬಗ್ಗೆ. ಹಿಂದೆ ಗುರುವಿಗಿದ್ದ ಗೌರವಗಳು ಈಗಿವೆಯಾ...?
ಇಂಥದ್ದೊಂದು ಪ್ರಶ್ನೆಗೆ ಉತ್ತರ ಹುಡುಕಲು ಹೊರಟರೆ ಅದು ಸಿಗುವುದೇ ಕಷ್ಟ. ಹಾಗೇ ಆ ಗೌರವ ಕಡಿಮೆಯಾಗಲು ಕಾರಣವೇನು? ಎಂಬುದಕ್ಕೆ ಮಾತ್ರ ಉತ್ತರ ಒಂದೇ ‘ಗುರು ಬದಲಾಗಿದ್ದಾನೆ’. ಹೌದು, ಗುರುಕುಲಗಳು ಮಾಯವಾದ ಬೆನ್ನಲ್ಲೇ ಗುರುವೂ ಬದಲಾಗಿದ್ದಾನೆ. ಆತನ ಸ್ಥಿತಿಗತಿಗಳೂ ಬದಲಾಗಿವೆ. ಹಿಂದೆ ಗುರುವಿಗೆ ಸಂಬಳವೇ ಇರಲಿಲ್ಲ. ಅಂಥದರಲ್ಲೂ ಗುರುಗಳು ಮಕ್ಕಳಿಗೆ ಶ್ರದ್ಧೆಯಿಂದ ಪಾಠ ಮಾಡುತ್ತಿದ್ದರು. eನವನ್ನು ಧಾರೆ ಎರೆಯುತ್ತಿದ್ದರು. ಈಗ ಒಳ್ಳೆಯ ಶಿಕ್ಷಕರಿಲ್ಲ ಪಾಠ ಮಾಡುತ್ತಿಲ್ಲ ಎಂದಲ್ಲ; ಇದ್ದಾರೆ, ಆದರೆ ಸ್ವರೂಪ ಬದಲಾಗಿದೆ. ಕೈತುಂಬ ಸಂಬಳ ಬರುತ್ತಿದ್ದರೂ ಪಾಠ ಪ್ರವಚನಗಳ ಶೈಲಿ ಹಿಂದಿನಂತಿಲ್ಲ. ಅದಕ್ಕೆ ಕಾರಣ ಹುಡುಕಲು ಹೊರಟರೆ ದೊಡ್ಡ ಪರ್ವತವೇ ಎದುರಾಗುತ್ತದೆ, ಅಷ್ಟೊಂದು ಕಾರಣಗಳಿವೆ.
ಮೊನ್ನೆ ಮೊನ್ನೆಯಷ್ಟೆ ನಡೆದ ಶಿಕ್ಷಕರ ಸಂಘದ ತಾಲೂಕು ಮಟ್ಟದ ಚುನಾವಣೆಗಳನ್ನು ಸ್ವಲ್ಪ ಸೂಕ್ಷ್ಮವಾಗಿ ನೋಡಿದರೆ ಆ ಎಲ್ಲ ಕಾರಣಗಳು ಎದುರಿಗೆ ಧುತ್ತೆಂದು ಬೀಳುತ್ತವೆ. ಶಿಕ್ಷಕರು ಹಿಂದೆ ಪಾಠದ ಜತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುತ್ತಿದ್ದರು. ಆದರೆ ಈಗ ಪಾಠದ ಜತೆಗೆ ರಾಜಕೀಯ ! ಮೊದಲ ಆದ್ಯತೆ ರಾಜಕೀಯಕ್ಕೆ ನಂತರ ಪಾಠಕ್ಕೆ(!?) ಎಂಬಂತಾಗಿದೆ. ಸಂವಿಧಾನದಲ್ಲಿ ಶಿಕ್ಷಕರಿಗೆ ಎಲ್ಲ ರೀತಿಯ ಸವಲತ್ತುಗಳನ್ನೂ ನೀಡಲಾಗಿದೆ. ಅವರ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಂಘದ ನಿರ್ಮಾಣಕ್ಕೆ ಅವಕಾಶ ನೀಡಿದೆ. ಆದರೆ ಈಗ ಅದರ ಹೆಸರಿನಲ್ಲಿ ಪಾಠ ನಿಧಾನವಾಗಿ, ಸಂಘದ (ರಾಜಕೀಯ) ಚಟುವಟಿಕೆಗಳೇ ಪ್ರಧಾನವಾಗಿವೆ.
ಯಾವುದೇ ರಾಜಕೀಯ ನಾಯಕರಿಗೂ ಸಾಟಿಯಿಲ್ಲದಂತೆ ತಾಲೂಕು ಮಟ್ಟದ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಹಣ, ಹೆಂಡ ಹಂಚಿಕೆ ಮಾಡಿದ್ದಾರೆ. ಬಾಡೂಟ ಹಾಕಿಸಿ, ‘ಹಬ್ಬ’ ಮಾಡಿದ್ದಾರೆ. ಸಮಾಜ ಶಿಕ್ಷಕರಿಗೆ ಅಪಾರ ಗೌರವ ನೀಡುತ್ತದೆ. ಅದನ್ನು ಉಳಿಸಿಕೊಳ್ಳುವ ಸಲುವಾಗಿ ಹಿಂದೆ ಶಿಕ್ಷಕರು ಹರ ಸಾಹಸ ಮಾಡುತ್ತಿದ್ದರು. ಪ್ರತಿ ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡುತ್ತಿದ್ದರು. ಆದರೆ ಈಗ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಸಾರಾಯಿ ಅಂಗಡಿಗಳ ಕೌಂಟರ್‌ಗಳಲ್ಲಿಯೇ ಬಹಿರಂಗವಾಗಿ ಕುಡಿದು, ಕುಣಿದು ಕುಪ್ಪಳಿಸುವ ಹಂತಕ್ಕೆ ಬಂದಿದ್ದಾರೆ ಎಂದರೆ ಇಡೀ ಸಮಾಜವೇ ತಲೆ ತಗ್ಗಿಸುವ ವಿಚಾರ.
ಈಗತಾನೆ ಶಾಲೆಗಳು ಆರಂಭವಾಗಿವೆ. ಮಕ್ಕಳು ರಜೆಯ ಗುಂಗಿನಲ್ಲಿಯೇ ಇದ್ದಾರೆ. ಅವರನ್ನು ಪಠ್ಯದೆಡೆಗೆ ಕೈ ಹಿಡಿದು ಕರೆತರುವ ಜವಾಬ್ದಾರಿ ಶಿಕ್ಷಕರದ್ದು. ಆದರೆ ಈಗ ಶಿಕ್ಷಕರು ಚುನಾವಣೆಯಲ್ಲಿ ಫುಲ್ ಬಿಸಿ! ಈಗತಾನೆ ತಾಲೂಕು ಮಟ್ಟದ ಚುನಾವಣೆ ನಡೆದಿದೆ. ಇನ್ನೂ ಜಿಲ್ಲೆ ಹಾಗೂ ರಾಜ್ಯ ಮಟ್ಟದ ಚುನಾವಣೆ ಬಾಕಿ ಇದೆ!! ಹೀಗಾದರೆ ಪಾಠ ಪ್ರವಚನಗಳ ಗತಿ ಏನು? ಈ ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಬಹುದೊಡ್ಡ ಜವಾಬ್ದಾರಿ ಹಾಗೂ ಅಂಥ ಸೌಭಾಗ್ಯ ಸಿಗುವುದು ಶಿಕ್ಷಕನಿಗೆ ಮಾತ್ರ. ಏಕೆಂದರೆ ಅವರಿಗೆ ಮಕ್ಕಳು ಸಿಗುವಷ್ಟು ಹೊತ್ತು ಪೋಷಕರಿಗೂ ಸಿಗುವುದಿಲ್ಲ. ಆದರೆ ಈಗ ಶಿಕ್ಷಕರು ಮಾಡುತ್ತಿರುವುದಾದರೂ ಏನು? ಪ್ರತಿ ತಾಲೂಕಿನಲ್ಲೂ ಒಬ್ಬೊಬ್ಬ ಮುಖಂಡರ ಹೆಸರಿನಲ್ಲಿ ಗುಂಪು ಗುಂಪಾಗಿ ರಾಜಕೀಯ...
ರಾಜ್ಯದಲ್ಲಿ ಪ್ರೌಢ ಶಾಲೆಯ ೬೪,೨೫೫ ಶಿಕ್ಷಕರಿದ್ದಾರೆ. ಪ್ರಾಥಮಿಕ ಶಾಲೆಯ ೨,೩೮,೯೦೯ ಶಿಕ್ಷಕರಿದ್ದಾರೆ. ಇವುಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪೈಕಿ ಪ್ರತಿ ಐವತ್ತು ಶಿಕ್ಷಕರಿಗೆ ಒಬ್ಬರಂತೆ ಎಲ್ಲ ತಾಲೂಕುಗಳಿಂದಲೂ ೬ ಮಂದಿ ಶಿಕ್ಷಕರಂತೆ ಒಟ್ಟು ೪೦೦೦ ಶಿಕ್ಷಕರು ತಾಲೂಕು ಪ್ರತಿನಿಗಳಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಎಲ್ಲ ತಾಲೂಕಿನ ಪ್ರತಿನಿಗಳು ಸೇರಿ ಜಿಲ್ಲೆಗೆ ೬ ಮಂದಿ ಪದಾಕಾರಿಗಳನ್ನು ಆಯ್ಕೆ ಮಾಡುತ್ತಾರೆ. ಅನಂತರ ರಾಜ್ಯ ಸಂಘಕ್ಕೆ ೬ ಮಂದಿ ಪದಾಕಾರಿಗಳನ್ನು ಆಯ್ಕೆ ಮಾಡಲಾಗುವುದು. ಆದರೆ ಇದಕ್ಕೆ ನಡೆಯುವ ಹೋರಾಟ, ರಾಜಕೀಯ, ತಂತ್ರಗಾರಿಕೆಗಳನ್ನು ನೋಡಿದರೆ ನಮ್ಮ ರಾಜಕೀಯ ಪಕ್ಷಗಳ ನಾಯಕರೂ ನಾಚಿಕೊಂಡಾರು!
ಈ ಚುನಾವಣೆಯಲ್ಲಿ ಇನ್ನೊಂದು ಗಮನಿಸಬೇಕಾದ ಅಂಶವೆಂದರೆ ಪ್ರತಿ ತಾಲೂಕಿನಲ್ಲಿಯೂ ೧೦೦ ರಿಂದ ೧೫೦ ಕುಲಗೆಟ್ಟ ಮತಗಳು ಕಂಡು ಬಂದಿವೆ. ಕೋಲಾರ ಜಿಲ್ಲೆಯೊಂದರಲ್ಲಿಯೇ ೬೦೦೪ ಶಿಕ್ಷಕರಲ್ಲಿ ೪೬೦ ಮತಗಳು ಕುಲಗೆಟ್ಟಿವೆ. (ಇದೇ ಅತಿ ಹೆಚ್ಚು) ಆದರೆ ಇದಕ್ಕೆ ರಾಜ್ಯ ಸರಕಾರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸವರಾಜ ಗುರಿಕಾರ್ ಅವರು ‘ರಾಜ್ಯದ ಗಡಿ ಪ್ರದೇಶ ಹಾಗೂ ಇತರ ಭಾಷಾ ಶಾಲೆ ಶಿಕ್ಷಕರಿಗೆ ಕನ್ನಡದ ಅರಿವಿನ ಕೊರತೆಯಿದೆ. ಆ ಕಾರಣಕ್ಕೆ ಈ ರೀತಿಯ ಸಮಸ್ಯೆಯಾಗಿದೆ ಎನ್ನುತ್ತಾರೆ. ಅದೇನೇ ಇರಲಿ. ಇದು ಶಿಕ್ಷಕರ eನ ಮಟ್ಟವನ್ನೂ ಎತ್ತಿ ತೋರಿಸುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.
ಇದು ಪ್ರಜಾಪ್ರಭುತ್ವ. ಇಲ್ಲಿ ಎಲ್ಲರಿಗೂ ಹಕ್ಕುಗಳಿವೆ. ಅವುಗಳನ್ನು ರಕ್ಷಿಸಿಕೊಳ್ಳಲೇಬೇಕು. ಹಾಗಂತ ಸ್ವಾತಂತ್ರ್ಯ ಸ್ವೇಚ್ಛಾಚಾರಕ್ಕಲ್ಲ. ಅಕಾರ ದರ್ಪಕ್ಕಲ್ಲ. ಶಿಕ್ಷಕರ ವರ್ತನೆಗಳು ಮಕ್ಕಳಿಗೆ ಆದರ್ಶ. ಅವರು ಹಸಿ ಗೋಡೆಗಳಂತೆ. ಯಾವುದನ್ನಾದರೂ ಸಲೀಸಾಗಿ ಸ್ವೀಕರಿಸುತ್ತಾರೆ. ಅವರ ಮುಂದಿರುವ ಆದರ್ಶ ಜೀವಿ ಒಬ್ಬನೇ, ಅದು ಶಿಕ್ಷಕ. ಆದರೆ ಇದನ್ನು ಮರೆತ ಇಂದಿನ ಬಹುತೇಕ ಶಿಕ್ಷಕರು ದೇಶ ಕಟ್ಟುವ ಉತ್ತಮ ಪ್ರಜೆಗಳನ್ನು ಸೃಷ್ಟಿಸುವ ಬದಲು ‘ಹೊಲಸು ರಾಜಕೀಯ’ಕ್ಕೆ ಹುರಿಯಾಳುಗಳನ್ನು ತಯಾರು ಮಾಡುತ್ತಿರುವಂತೆ ಕಾಣುತ್ತದೆ.
ಶಿಕ್ಷಕ ಹುದ್ದೆ ಕೇವಲ ಉದ್ಯೋಗವಲ್ಲ, ಅದೊಂದು ವಿಶೇಷ ಕರ್ತವ್ಯ. ಉತ್ತಮ ವ್ಯಕ್ತಿಗಳನ್ನು ಈ ದೇಶಕ್ಕೆ ತಯಾರು ಮಾಡುವ ಸುವರ್ಣಾವಕಾಶ. ಜಗತ್ತಲ್ಲಿ ಯಾರಿಗೂ ಸಿಗದ ಅಪರೂಪದ ಅವಕಾಶ. ಅದನ್ನು ಬಹುತೇಕರು ಮರೆತ ಹಾಗೆ ಕಾಣುತ್ತದೆ. ಇಂಥ ಅನುಮಾನಗಳಿಗೆ ಮೊನ್ನೆ ನಡೆದ ಚುನಾವಣೆ ಬಹಳಷ್ಟು ಕಡೆ ಎಡೆ ಮಾಡಿಕೊಟ್ಟಿದೆ.
ಜವಾಬ್ದಾರಿ ಮರೆತು ವರ್ತಿಸುವ ಶಿಕ್ಷಕರೇ ಇತ್ತೀಚೆಗೆ ಹೆಚ್ಚಾಗುತ್ತಿರುವುದರಿಂದ ಅವರ ಮೇಲೆ ಅನೇಕ ಆರೋಪಗಳು ಕೇಳಿಬರುತ್ತಲೇ ಇವೆ. ಅತ್ಯಾಚಾರವೂ ಸೇರಿದಂತೆ ಅನೇಕ ಕಳಂಕವನ್ನು ಹೊತ್ತ ಶಿಕ್ಷಕರು ರಾಜ್ಯ ಹಾಗೂ ರಾಷ್ಟ್ರಾದ್ಯಂತ ಕಾಣುತ್ತಿದ್ದಾರೆ. ಅವು ಗುಟ್ಟಾಗಿಯೂ ಉಳಿದಿಲ್ಲ. ಮಾಧ್ಯಮಗಳಲ್ಲಿ ಇಂಥ ಸುದ್ದಿಗಳು ಆಗಾಗ ಪ್ರಕಟವಾಗುತ್ತಲೇ ಇದ್ದರೂ ಕೆಲವು ಶಿಕ್ಷರು ಮಾತ್ರ ತಮ್ಮ ವರ್ತನೆಗಳನ್ನು ತಿದ್ದಿಕೊಳ್ಳುವ ಗೋಜಿಗೇ ಹೋಗುತ್ತಿಲ್ಲ. ಇದು ಈ ಕಾಲದ ಬಹುದೊಡ್ಡ ದುರಂತ.
ಶಿಕ್ಷಕರಿಗೆ ಸಮಸ್ಯೆಗಳಿವೆ ನಿಜ, ಆದರೆ ಅವುಗಳನ್ನು ಸರಕಾರದ ಅಥವಾ ಮೇಲಕಾರಿಗಳ ಮುಂದಿಟ್ಟು ಬಗೆಹರಿಸಿಕೊಳ್ಳಬಹುದು. ಆದರೆ ಅದಕ್ಕೆಂದು ಪಾಠ ಪ್ರವಚನಗಳನ್ನು, ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಿ ಬೇಜವಾಬ್ದಾರಿಯಿಂದ ವರ್ತಿಸುವುದು ತರವಲ್ಲ.
ಯಥಾ ಗುರು ತಥಾ ಶಿಷ್ಯ ಎಂಬುದನ್ನು ಮರೆಯದೆ ಶಿಕ್ಷಕರು ವರ್ತಿಸುವುದನ್ನು ಕಲಿತರೆ ಈ ಸಮಾಜಕ್ಕೆ ಒಳ್ಳೆಯದು. ಇಲ್ಲದಿದ್ದರೆ ಅವರೇ ಸೃಷ್ಟಿಸಿದ ಬಲೆಯಲ್ಲಿ ಅವರೇ ಆಹುತಿಯಾಗುವುದು ನಿಶ್ಚಿತ.

Thursday, June 25, 2009

ಸಂಗೀತ ನಿರ್ದೇಶಕ ಹಂಸಲೇಖ ಜೊತೆ ಹಾಗೆ ಸುಮ್ಮನೆ...

ಕನ್ನಡ ಚಿತ್ರ ರಂಗದ ದಿಗ್ಗಜ, ಸಂಗೀತ ನಿರ್ದೇಶಕಹಂಸಲೇಖ ಅವರ ಜೊತೆ ಹಾಗೆ ಸುಮ್ಮನೆ ಮಾತಿಗಿಳಿದಾಗ... ಕೇಳಿದ ಕೆಲವು ಪ್ರಶ್ನೆಗಳು, ಅವುಗಳಿಗೆ ತುಂಬಾ ಜಾಣತನದಿಂದ ಅವ್ರು ನೀಡಿದ ಉತ್ತರಗಳು ಇಲ್ಲಿವೆ. ನೀವು ಹಾಗೆ ಸುಮ್ಮನೆ ಕಣ್ಣಾಯಿಸಿ....

.ಕನ್ನಡ ಚಿತ್ರರಂಗದಲ್ಲಿ ಸಾಹಿತ್ಯಕಳವುಹೆಚ್ಚಾಗಿದ್ದೇಕೆ ?
*ಈಗ ಹೊಸ ಟ್ರೆಂಡ್ ಶುರುವಾಗಿದೆ. ಜಯಂತ ಕಾಯ್ಕಿಣಿ, ನಾಗೇಂದ್ರ ಪ್ರಸಾದ್‌ರಂಥ ಉತ್ತಮ ಸಾಹಿತಿಗಳು ಅತ್ಯುತ್ತಮ ಗೀತೆ ಬರೆಯುತ್ತಿದ್ದಾರೆ. ಕದ್ದು ಸಾಹಿತ್ಯ ಬರೆಯುವವರು ಸಾಹಿತಿಗಳೇ ಅಲ್ಲ, ಟೆಕ್ನಿಷಿಯನ್ಸ್. ಬೇರೆ ಯಾವುದೋ ಕಾರಣಕ್ಕೆ ಬಂದವರು. ಆದರೆ ಅದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯ. ರೀಮೇಕ್ ಹಾಗೂ ಕದಿಯುವ ಸಾಹಿತ್ಯವನ್ನು ಮೊದಲಿನಿಂದಲೂ ನಾನು ವಿರೋಸಿದ್ದೇನೆ.
.ಹಿಂದಿನ ಹಂಸಲೇಖ ಎಲ್ಲೋದರು ?
*ಇಲ್ಲ, ನಾನು ಇನ್ನೂ ನನ್ನ ಟ್ರೆಂಡ್‌ನಲ್ಲಿದ್ದೇನೆ. ಕೆಲವರು ಹೊಸ ಟ್ರೆಂಡ್‌ನಲ್ಲಿದ್ದಾರೆ. ಆಗ ಪ್ರೇಮ, ಯುಗಳ ಗೀತೆಗಳೇ ಹೆಚ್ಚಾಗಿದ್ದವು. ರವಿಚಂದ್ರನ್ ಹಾಗೂ ನನ್ನದು ಒಂದು ಕಮರ್ಷಿಯಲ್ ಕಾಂಬಿನೇಷನ್ ಅಷ್ಟೇ. ಅನಂತರವೂ ‘ನೆನಪಿರಲಿ’ವರೆಗೆ ಒಳ್ಳೆ ಗೀತೆ ನೀಡಿದ್ದೇನೆ, ಜನ ಒಪ್ಪಿದ್ದಾರೆ. ಆ ಕಾರಣಕ್ಕಾಗಿಯೇ ನಾನು ಇನ್ನೂ ಚಿತ್ರರಂಗದಲ್ಲಿ ಜೀವಂತವಾಗಿದ್ದೇನೆ.
.ಈಗಿನ ಕನ್ನಡ ಸಿನಿಮಾರಂಗ ಹೇಗೆನಿಸುತ್ತದೆ ?
*ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ಇದು ಪುಣ್ಯ ಕಾಲ; ಜತೆಗೆ ಅಂಜಿಕೆ ಹುಟ್ಟಿಸುವ ಕಾಲ! ಚಿತ್ರರಂಗ ಸ್ವಂತ ಕಾಲ ಮೇಲೆ ನಿಲ್ಲಲು ಹಣ ಬೇಕಿತ್ತು. ಅದನ್ನು ಕಳೆದ ಏಳೆಂಟು ವರ್ಷಗಳಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ತಂದು ಸುರಿದಿದ್ದಾರೆ. ಆ ಮೂಲಕ ನೆಲೆ ಒದಗಿಸಿಕೊಟ್ಟಿದ್ದಾರೆ. ಆದರೆ ಅವರಿಗೆ ಗುಣಮಟ್ಟ ನೀಡಲು ಆಗಿಲ್ಲ. ಅದು ಅವರ ಕೆಲಸವೂ ಅಲ್ಲ. ಪ್ರಯೋಗಗಳಿಗೆ ಇದು ಪರ್ವ ಕಾಲ. ಭಾರತದ ಏಳು ರಾಜ್ಯಗಳಲ್ಲಿ ಪ್ರಾದೇಶಿಕ ಚಿತ್ರರಂಗ ನೆಲಕಚ್ಚಿದೆ. ಆದರೆ ಕನ್ನಡದಲ್ಲಿ ನೆಲೆ ನಿಂತಿದೆ. ಅದೊಂದೇ ಅವರಿಂದ ಆದ ಉಪಯೋಗ.
.ಪಾಶ್ಚಾತ್ಯ ಸಂಸ್ಕೃತಿ ಚಿತ್ರ ಸಾಹಿತ್ಯದ ಮೇಲೆಷ್ಟು ಪರಿಣಾಮ ಬೀರಿದೆ ?
*ನಮ್ಮ ಬಂಗಾರವನ್ನು ನಾವೇ ನವೀಕರಿಸಬೇಕು, ಎಸೆಯಬಾರದು. ಜಾಗತಿಕ ಪ್ರತಿರೋಧವನ್ನು ಎದುರಿಸುವ ಎದೆಗಾರಿಕೆ, ಲಯ ನಮ್ಮಲ್ಲಿ ಹುಟ್ಟಬೇಕು. ನಮ್ಮ ದೇಸೀತನ ದೊಡ್ಡದಾಗಿ ಎದ್ದೇಳಬೇಕು. ಬುದ್ಧಿವಂತ ನಿರ್ದೇಶಕರು ನಾಯಕರ ಮಾತು ಕೇಳದೆ, ಕಥೆಯ ಮತ್ತು ಹೃದಯದ ಮಾತು ಕೇಳಬೇಕು. ಆಗ ಮತ್ತೊಂದು ಸುವರ್ಣಯುಗ ಬರುವುದರಲ್ಲಿ ಅಚ್ಚರಿಯಿಲ್ಲ.
.ದೇಸೀ ವಿದ್ಯಾಸಂಸ್ಥೆ ಸ್ಥಾಪನೆಯ ಉದ್ದೇಶ ?
*ಇದು ನನ್ನ ಪಾರ್ಟ್ ಆಫ್ ಜಾಬ್. ಕಲೆ ಇಷ್ಟು ವರ್ಷ ನನಗೆ ಗೌರವ, ಪುರಸ್ಕಾರ ತಂದುಕೊಟ್ಟಿದೆ. ಅದನ್ನು ಈಗ ಶಿಕ್ಷಣದ ಮೂಲಕ ಮರಳಿಸಬೇಕಿದೆ. ನಮ್ಮ ವಿ.ವಿಗಳು ೫೦ ವರ್ಷಗಳಿಂದ ದೇಸೀ ವಿಮರ್ಶಕರು, ಪಂಡಿತರನ್ನು ಸೃಷ್ಟಿಸಿವೆ. ಆದರೆ ದೇಸೀ ಕಲಾವಿದರನ್ನು ಹುಟ್ಟು ಹಾಕಿಲ್ಲ. ದೇಸೀಯತೆ ನಮ್ಮ ರಕ್ತದಲ್ಲಿದೆ. ಆದ್ದರಿಂದ ಶಿಕ್ಷಣದ ಮೂಲಕ ಕಲೆ, ಕಲೆ ಮೂಲಕ ಶಿಕ್ಷಣ ನೀಡಿ ದೇಸೀಯ ಕಲಾವಿದರನ್ನು ಹುಟ್ಟು ಹಾಕುವ ಸಲುವಾಗಿ ಈ ವಿದ್ಯಾಸಂಸ್ಥೆ ಸ್ಥಾಪಿಸಿದ್ದೇನೆ.

Thursday, June 18, 2009

ಶಿಕ್ಷರೆ ಇದು ಸರಿಯ...?

ಮಕ್ಕಳಿಗೆ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಹಾಗೂ ಗುಣವಂತರಾಗಲು ಬುದ್ದಿ ಹೇಳಬೇಕಾದ ಶಿಕ್ಷಕರೇ ಈಗ ಬುದ್ದಿ ಹೇಳಿಸಿಕೊಳ್ಳುವಂತಾಗಿದ್ದಾರೆ. ಮೊನ್ನೆ ನಡೆದ ಶಿಕ್ಷಕರ ಸಂಘದ ಚುನಾವಣೆಯೇ ಅದಕ್ಕೆ ಪ್ರತ್ಯಕ್ಷ ನಿದರ್ಶನ... ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷರಾದ ಬಸವರಾಜ ಗುರಿಕಾರ್, ಅವರ ಜತೆ ನಡೆಸಿದ ಸಂದರ್ಶನ ನಿಲ್ಲಿದೆ... ಅವರು ಏನೆನ್ನುತ್ತಾರೆ ನೀವೇ ನೋಡಿ...

೧.ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗುಂಪು ರಾಜಕೀಯವೇಕೆ?
*ಗುಂಪುಗಾರಿಕೆಯಿಲ್ಲ, ಇದು ಚುನಾವಣೆಗಾಗಿ ಮಾತ್ರ. ಪ್ರತಿ ತಾಲೂಕಿನಿಂದ ಐವತ್ತು ಶಿಕ್ಷಕರಿಗೆ ಒಬ್ಬರಂತೆ ತಾಲೂಕು ಪ್ರತಿನಿಗಳನ್ನು ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಈಗ ಚುನಾವಣೆ ನಡೆದಿದೆ. ಮುಂದೆ ಜಿಲ್ಲೆ ಹಾಗೂ ರಾಜ್ಯ ಮಟ್ಟಕ್ಕೆ ಪದಾಕಾರಿಗಳ ಆಯ್ಕೆ ನಡೆಯುತ್ತದೆ. ಚುನಾವಣೆ ಮುಗಿದ ನಂತರ ಎಲ್ಲ ಶಿಕ್ಷಕರೂ ಒಂದೇ ರೀತಿ. ಶಿಕ್ಷಕರ ಮೊದಲ ಪ್ರಾಧಾನ್ಯತೆ ಪಾಠ. ಹೀಗಾಗಿ ಚುನಾವಣೆ ಸಮಯದಲ್ಲಿ ಅದು ಮೇಲು ನೋಟಕ್ಕೆ ಹಾಗೆ ಕಾಣುತ್ತದೆ.
೨.ಶಿಕ್ಷಕರ ಇತ್ತೀಚಿನ ನಡವಳಿಕೆಗಳು ಹೇಗನಿಸುತ್ತವೆ?
*ಶಿಕ್ಷಕರು ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಆದರೆ ಅವರಿಗೆ ಸೌಲಭ್ಯಗಳಿಲ್ಲ. ಶಾಲೆಗಳಲ್ಲಿ ಕುಡಿಯುವ ನೀರಿನ ಸವಲತ್ತುಗಳಿಲ್ಲ, ನಲ್ಲಿ ಸಂಪರ್ಕ ಇದ್ದರೂ ನೀರು ಬರುವುದಿಲ್ಲ. ಇದರಿಂದ ಶೌಚಾಲಯಗಳು ಉಪಯೋಗಕ್ಕೆ ಬರುತ್ತಿಲ್ಲ. ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರಕಾರ ಗಮನಹರಿಸಬೇಕು. ಪ್ರತಿ ಶಾಲೆಗೊಂದರಂತೆ ಬೋರ್‌ವೆಲ್ ಕೊರೆಸುವುದು ಒಳಿತು. ಸ್ಥಳೀಯ ಮಟ್ಟದಲ್ಲಿ ಶೇ.೧ರಷ್ಟು ಮಾತ್ರ ಸಣ್ಣಪುಟ್ಟ ಸಮಸ್ಯೆಗಳಿವೆ. ಅವುಗಳನ್ನು ಸಂಘ ಬೆಂಬಲಿಸುವುದಿಲ್ಲ. ಆದರೆ ಅವುಗಳನ್ನೇ ಮುಂದಿಟ್ಟುಕೊಂಡು ಕೆಲವರು ಶಿಕ್ಷಕ ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಸಲ್ಲದು.
೩.ಪ್ರಾಥಮಿಕ ಶಿಕ್ಷಕರ ಇತ್ತೀಚಿನ ಸಮಸ್ಯೆಗಳೇನು?
*ಶಿಕ್ಷಕ ಕೂಡ ಸಾಮಾನ್ಯ ಪ್ರಜೆ, ನಮಗೂ ನಮ್ಮದೇ ಆದ ಸಮಸ್ಯೆಗಳಿವೆ. ಆದರೆ ಅವುಗಳನ್ನು ಮರೆತು ಮಕ್ಕಳು ದೇವರೆಂದು ಭಾವಿಸಿ ಪಾಠ ಮಾಡುತ್ತೇವೆ. ಆದರೆ ಇತ್ತೀಚೆಗೆ ಬೋಧನೆ ಮಾಡುವ ಶಿಕ್ಷಕನಿಗೆ ಅದಕ್ಕಿಂತ ಬೇರೆ ಕೆಲಸಗಳೇ ಹೆಚ್ಚಾಗುತ್ತಿವೆ. ಸರಕಾರ ೪ನೇ ದರ್ಜೆಯ ಸಿಬ್ಬಂದಿಯನ್ನು ನೇಮಕ ಮಾಡಿಲ್ಲ. ಇದರಿಂದ ಎಲ್ಲ ಕೆಲಸಗಳನ್ನು ಶಿಕ್ಷಕರೇ ಮಾಡಿಕೊಳ್ಳಬೇಕಿದೆ. ಕಾಗದ ಪತ್ರ ತಯಾರಿಕೆ ಸೇರಿದಂತೆ ಇತರ ಕೆಲಸಗಳೇ ಹೆಚ್ಚು ಹೊರೆಯಾಗುತ್ತಿವೆ. ಇದೆಲ್ಲದರ ನಡುವೆ ಶಿಕ್ಷಕ ತನ್ನ ಚೌಕಟ್ಟನ್ನು ಮೀರದೆ ಪಾಠ ಹೇಳಿಕೊಡುತ್ತಿದ್ದಾನೆ. ಇಲ್ಲಿ ಪೋಷಕರೂ ಮಕ್ಕಳ ಮೇಲ್ವಿಚಾರಣೆ ನೋಡಿಕೊಳ್ಳಬೇಕು. ಎಸ್‌ಡಿಎಂಸಿಗಳಿಂದ ಅನುಕೂಲಗಳಾಗಿವೆ. ಆದರೆ ಕೆಲವೆಡೆ ಹಸ್ತಕ್ಷೇಪವೂ ಇದೆ. ಅದು ನಿಲ್ಲಬೇಕು. ಶಿಕ್ಷಕರನ್ನು ಬೇರೆ ಕೆಲಸಗಳಿಂದ ವಿಮುಕ್ತಿಗೊಳಿಸಿ, ಮುಕ್ತವಾಗಿ ಪಾಠ ಮಾಡಲು ಅವಕಾಶ ನೀಡಬೇಕು.
೪.ಸಂಯುಕ್ತ ಪ್ರೌಢ ಶಾಲಾ ವ್ಯವಸ್ಥೆಯನ್ನು ರದ್ದುಗೊಳಿಸಲು ಕಾರಣ ?
*ಅದು ತುಂಬಾ ಅವೈeನಿಕ ವ್ಯವಸ್ಥೆ. ಪ್ರೌಢಶಾಲೆ ವಿದ್ಯಾರ್ಥಿಗಳು, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಒಂದೇ ಕಡೆ ವಿದ್ಯಾಭ್ಯಾಸ ಮಾಡಬೇಕಿತ್ತು. ಇದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು. ಅದನ್ನು ರದ್ದುಗೊಳಿಸುವ ಮೂಲಕ ಮಕ್ಕಳ ಶಿಕ್ಷಣದ ಹಾದಿಯನ್ನು ಸುಗಮಗೊಳಿಸಿದ್ದೇವೆ.
೫.ನಿಮ್ಮ ಇದೂವರೆಗಿನ ಅಕಾರವಯ ಕೆಲಸ ತೃಪ್ತಿ ತಂದಿದೆಯೇ?
*ಹೌದು, ನೆರೆಯ ರಾಜ್ಯಗಳಲ್ಲಿ ಹಾಗೂ ಕೇಂದ ಸರಕಾರಿ ಪ್ರಾಥಮಿಕ ಶಿಕ್ಷಕರಿಗೂ ರಾಜ್ಯ ಶಿಕ್ಷರಿಗೂ ಬಹಳ ವ್ಯತ್ಯಾಸವಿತ್ತು. ಸರಕಾರದ ಮೇಲೆ ಒತ್ತಡ ಹೇರಿ ನನ್ನ ಅವಯಲ್ಲಿ ೫ನೇ ವೇತನ ಆಯೋಗದಂತೆ ಆರಂಭಧ ವೇತನವನ್ನು ೬,೮೦೦ ರೂ.ಗಳಿಂದ ಹಾಗೂ ಅಂತಿಮ ವೇತನವನ್ನು ೧೩,೦೦೦ರೂ. ವರೆಗೆ ಹೆಚ್ಚಿಸಲು ಶ್ರಮಿಸಿದ್ದೇವೆ. ೨೦೦ರೂ. ವಿಶೇಷ ವೇತನ ಜಾರಿಗೊಳಿಸಲು ವ್ಯವಸ್ಥೆ ಮಾಡಿದ್ದೇವೆ. ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ೭೪೧೬ ಹುದ್ದೆಗಳು ಮಂಜೂರು ಮಾಡಿಸಿದ್ದೇವೆ.

Tuesday, June 2, 2009

ಎಲ್ಲಿದೆಯೋ ನ್ಯಾಯ....? ಅಣ್ಣಾ...

ಬೆಂಗಳೂರಿನಲ್ಲಿ ಅದೇ ಹಳೇ ಪ್ರವೃತ್ತಿ ಮುಂದುವರಿದಿದೆ. ಹೈಟೆಕ್ ಸಿಟಿ, ಐಟಿ ಬಿಟಿ ಕೇಂದ್ರ ಎಂದೆಲ್ಲ ನಮ್ಮನ್ನು ನಾವೇ ಬೆನ್ನು ತಟ್ಟಿಕೊಳ್ಳುತ್ತಿದ್ದರೂ ಇಲ್ಲಿ ಇನ್ನೂ ಮೂಲ ಸವಲತ್ತುಗಳು ದೊರೆಯುವುದು ಕನಸಾಗಿಯೇ ಉಳಿದಿದೆ. ಇದಕ್ಕೆ ಪ್ರಮುಖ ಕಾರಣ ಜನಪ್ರತಿನಿಗಳು ಎಂದು ನೇರವಾಗಿಯೇ ಹೇಳಬಹುದು.
ಮೊನ್ನೆ ಮಾಯಾನಗರದಲ್ಲಿ ಬಿದ್ದ ಮಳೆಗೆ ತಾಯಿಯ ಕೈ ಅಂಚಿನಲ್ಲಿದ್ದ ಎಳೆಯ ಕರುಳ ಕುಡಿಯೊಂದು ಕಣ್ಣೆದುರೇ ಲಿಂಗರಾಜಪುರದ ಮೋರಿಯಲ್ಲಿ ಕೊಳಚೆ ನೀರುಪಾಲಾಗಿದೆ! ಆ ಹೆತ್ತಮ್ಮನ ಆರ್ತನಾಧ ಮುಗಿಲು ಮುಟ್ಟಿದೆ. ಆದರೆ ಮೂರು ದಿನವಾದರೂ ಆ ಮಗುವನ್ನು ಹುಡುಕುವಲ್ಲಿ ಇಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಗೆ ವಿಫಲವಾಗಿದೆ.
ಸ್ಥಳೀಯ ಜನರು ಮಗುವಿಗಾಗಿ ನಡೆಸಿದಷ್ಟೂ ಶೋಧವನ್ನು ನುರಿತ, ಪರಿಣಿತ ಅಕಾರಿಗಳು ನಡೆಸದಿರುವುದು, ಸ್ಥಳಕ್ಕೆ ತೆರಳಿ ಹೆತ್ತ ಕರುಳಿಗೆ ಸಾಂತ್ವನ ಹೇಳಲೂ ಪುರುಸೊತ್ತಿಲ್ಲದ ಮುಖ್ಯಮಂತ್ರಿ ಹಾಗೂ ಸಚಿವರ ನಡವಳಿಕೆ ನಿಜಕ್ಕೂ ನಾಚಿಕೆಗೇಡು. ‘ಅಕಾರದ ಕೊಳಕು ಚರಂಡಿ’ಯಲ್ಲಿ ಅಸ್ತಿತ್ವಕ್ಕಾಗಿ ಒದ್ದಾಡುತ್ತಿರುವ ಜನಪ್ರತಿನಿಗಳಿಗೆ ಮುಗ್ದ ಮಗು ಅಭಿಷೇಕ್‌ನ ಸಾವಾಗಲಿ, ಅವನ ತಾಯಿಯ ಕರುಳಿನ ಕೂಗಾಗಲಿ ಎಲ್ಲಿ ಕೇಳಿಸುತ್ತದೆ?
ಮೊನ್ನೆ ಮೊನ್ನೆಯಷ್ಟೇ ‘ದಾಖಲೆ ಪ್ರಮಾಣದ ತೆರಿಗೆ ಸಂಗ್ರಹ’ ಮಾಡಿದ್ದೇವೆ ಎಂದು ಬೀಗುತ್ತ ಪ್ಯಾಲೇಸ್ ಗ್ರೌಂಡ್‌ನಲ್ಲಿ ಕಂಠಪೂರ್ತಿ ಮಾಡು ತಿಂದು, ಕುಡಿದು, ತೇಗಿರುವ ಅಕಾರಿಗಳಿಗೆ ಇನ್ನೂ ಅದರ ಕಮಟು ಇಳಿದಿಲ್ಲ; ಅಮಲಿನ್ಲಿಯೇ ತೇಲಾಡುತ್ತಿದ್ದಾರೆ. ಅದಕ್ಕಾಗಿಯೇ ಒಂದಿಡೀ ದಿನ ಚರಂಡಿಯಲ್ಲಿ ಕುಳಿತು ಮಗು ಸಿಗಲಿಲ್ಲ ಎಂದು ಎದ್ದು ಬಂದು ಕೈ ತೊಲೆದುಕೊಂಡರು. ಅನಾಹುತಗಳು ನಡೆದಾಗೆಲ್ಲ ನೆಪ ಮಾತ್ರಕ್ಕೆ ಪರಿಹಾರ ಘೋಷಿಸುವುದೊಂದೇ ‘ಸಾಧನೆ’ ಎಂದುಕೊಂಡಿರುವ ಅಕಾರಿಗಳು, ಜನಪ್ರತಿನಿಗಳಿಗೆ ಜನರೇ ಬುದ್ದಿ ಕಲಿಸಬೇಕು.
ಮಾನವೀಯತೆ ಮರೆತ ಸಿಎಂ:
ಮಗು ಚರಂಡಿಯಲ್ಲಿ ತೇಲಿ ಹೋಗಿದೆ ಎಂಬ ಬ್ರೇಕಿಂಗ್ ನ್ಯೂಸ್ ಎಲ್ಲ ಟಿವಿ ಚಾನೆಲ್‌ಗಳಲ್ಲೂ ನಿರಂತರವಾಗಿ ಪ್ರಸಾರವಾಗುತ್ತಲೇ ಇದೆ. ಆದರೆ ಮುಖ್ಯಮಂತ್ರಿ ಮಾತ್ರ ‘ಯಾತ್ರೆ’ಯಲ್ಲಿದ್ದಾರೆ! ಊರಿಗೆಲ್ಲಾ ಬೆಂಕಿ ಬಿದ್ದಾಗ ಅವನ್ಯಾವನೋ ಪಿಟೀಲು ಕೊಯ್ಯುತ್ತಿದ್ದನಂತೆ ಹಾಗೆ ಮುಖ್ಯಮಂತ್ರಿ ಎನಿಸಿಕೊಂಡ ‘ದೊರೆ’ ಬಿ.ಎಸ್.ಯಡಿಯೂರಪ್ಪ ಸಾಯಿಬಾಬಾ ಜತೆ ದರ್ಭಾರಿನಲ್ಲಿದ್ದರು. ಪತ್ನಿ ಸತ್ತಾಗಲೇ ಕಣ್ಣೀರು ಸುರಿಸದ ಕರುಣೆಯಿಲ್ಲದ ವ್ಯಕ್ತಿ ಕರುನಾಡಿಗೆ ಮುಖ್ಯಮಂತ್ರಿ(ಕೆಲವರು ಅವನೇ ಕೊಂದಿದ್ದು ಎನ್ನುತ್ತಾರೆ!?).
ಪರಿಹಾರವೇ ಎಲ್ಲವನ್ನೂ ನಿವಾರಿಸಿ ಬಿಡುತ್ತದಾ? ಒಂದು ಮುಗ್ದ ಮಗುವಿನ ಸಾವಿನ ಬೆಲೆ ಕೇಲವ ಒಂದು ಲಕ್ಷ ರೂಪಾಯಿಗೆ ಮಾತ್ರ ಸೀಮಿತವಾ? ಇದೇ ಒಬ್ಬ ಜನಪ್ರತಿನಿಗಿರುವ ನಿಜವಾದಾ ಲಕ್ಷಣವಾ...? ಕಳಕಳಿಯಾ...?

Tuesday, May 26, 2009

ಮಗ್ಗಲು ಬದಲಿಸಲಿ ಅಭಿವೃದ್ಧಿಯ ಪರಿಕಲ್ಪನೆ

ಅಭಿವೃದ್ಧಿ! ಈ ಪದ ಕೇಳಿದಾಗಲೆಲ್ಲ ಜನ ಬೆಚ್ಚಿ ಬೀಳುವಂತಾಗುತ್ತಿದೆ. ಎಲ್ಲವನ್ನೂ ಅನುಮಾನದಿಂದ ನೋಡುವ ಪರಿಪಾಠ ಬೆಳೆಯುತ್ತಿದೆ. ಸರಕಾದಿಂದ ಯಾವುದೇ ಅಭಿವೃದ್ಧಿ ಯೋಜನೆಗಳೇ ಜಾರಿಯಾಗುವುದು ಬೇಡ ಎನ್ನು ಮಟ್ಟಿಗೆ ಭಯ ಜನ ಸಾಮಾನ್ಯರನ್ನು ಕಾಡುತ್ತಿದೆ.
ಇವತ್ತು ಯಾವುದೇ ಸರಕಾರಗಳು ಅಸ್ತಿತ್ವಕ್ಕೆ ಬರಲಿ ಅಭಿವೃದ್ಧಿಯ ಮಂತ್ರ ಜಪಿಸುತ್ತವೆ. ಅದನ್ನೇ ಬಂಡವಾಳ ಮಾಡಿಕೊಂಡು ಅಕಾರದ ಗದ್ದುಗೆ ಏರುತ್ತವೆ. ಆದರೆ ಒಬ್ಬೊಬ್ಬರು ಒಂದು ರೀತಿಯ ಮುಖವಾಡ ಧರಿಸುತ್ತಾರೆ ಅಷ್ಟೆ. ಕಾರಣ ಇಷ್ಟೆ , ಎಲ್ಲರೂ ಏಳಿಗೆಯನ್ನು ಬಯಸುತ್ತಾರೆ. ತಮ್ಮ ಈ ‘ಮಂತ್ರ’ಕ್ಕೆ ತಲೆದೂಗಲೇಬೇಕು ಎಂಬುದು. ಆದರೆ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಆಗುತ್ತಿರುವುದಾದರೂ ಏನು? ಒಮ್ಮೆ ತುಂಬಾ ಸೂಕ್ಷ್ಮವಾಗಿ ತುಲನೆ ಮಾಡಿ ನೋಡಿದರೆ ಪ್ರeವಂತರಾದ ಎಂಥವರಿಗೂ ಭಯ ಕಾಡದೆ ಇರದು.
ರಾಜ್ಯ ಅಥವಾ ಕೇಂದ್ರ ಸರಕಾರ ಒಂದೇ ಒಂದು ಸಣ್ಣ ರಸ್ತೆಯ ಅಭಿವೃದ್ಧಿಕೆ ಕೈ ಹಾಕಿದರೆ ಅಲ್ಲಿ ನೂರಾರು ಮರಗಳ ಮಾರಣ ಹೋಮ ನಿಶ್ಚಿತ. ಇನ್ನು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳನ್ನು ಕೈಗೆತ್ತಿಕೊಂಡರೆ ಪರಿಸ್ಥಿತಿ ಊಹಿಸಲಸಾಧ್ಯ. ಒಂದು ಮರದ ಕೊಂಬೆಯನ್ನು ಕಡಿಯಲು ಗುತ್ತಿಗೆದಾನಿಗೆ ಪರವಾನಗಿ ನೀಡಿದರೆ ಇಲ್ಲಸಲ್ಲದ ಸಬೂಬು ಹೇಳಿ ಅವನು ಇಡೀ ಮರವನ್ನೇ ಕಡಿದು ಮನೆಗೆ ಸಾಗಿಸಿಬಿಡುತ್ತಾನೆ. ಆದರೆ ಅದರ ಬಗ್ಗೆ ಯಾರೊಬ್ಬರೂ ತಲೆ ಕೆಡಿಸಿಕೊಳ್ಳುವುದಿಲ್ಲ.
ಸರಕಾರಗಳಿಗೆ ಅಭಿವೃದ್ಧಿ ಎಂದರೆ ಗೊತ್ತಿರುವುದು ಒಂದೇ ಪರಿಸರವನ್ನು ನಾಶ ಮಾಡಿ ಕಾಂಕ್ರೀಟ್ ಕಾಡು ನಿರ್ಮಾಣ ಮಾಡುವ ಕಲೆ. ಇದರಲ್ಲಿ ಈಗ ಎಲ್ಲ ಮಂತ್ರಿ ಮಹೋದಯರೂ ಕಲಾಕಾರರು. ಕಾರಣ ಮೇಲು ನೋಟಕ್ಕೆ ಅಲ್ಲಿ ಅಭಿವೃದ್ಧಿಯ ಹೆಸರಿದ್ದರೂ ಒಳಗಡೆ ಸ್ವಾರ್ಥ ಭರತನಾಟ್ಯವಾಡುತ್ತಿರುತ್ತದೆ. ಯಾವುದೇ ಅಭಿವೃದ್ಧಿಗೆ ಕೈ ಹಾಕಿದರೂ ಅಲ್ಲಿ ಮರಗಳನ್ನು ಕಡಿಯಲೇ ಬೇಕೆಂಬುದು ಇವರ ಮೂಲ ಮಂತ್ರ. ಕಾಮಗಾರಿಯಿಂದ ಶೇಕಡಾವಾರು ಹಣ ಬರುವುದು ಒಂದೆಡೆಯಾದರೆ ಮರ ಕಡಿಯುವವರು, ಸಿಮೆಂಟ್, ಇಟ್ಟಿಗೆ, ಕಬ್ಬಿಣ ಮುಂತಾದ ಅಗತ್ಯ ಮೂಲ ವಸ್ತುಗಳ ಸರಬರಾಜು ಮಾಡುವ ಗುತ್ತಿಗೆದಾರರಿಂದ ಮಾಮೂಲಿ ವಸೂಲಿ ಮಾಡುವುದು ಇವರ ಎರಡಂಶದ ಕಾರ್ಯಕ್ರಮ. ಇದೆಲ್ಲ ಅವರಿಗೆ ವರ‘ದಾನ’.
ಯಾವುದೇ ಸರಕಾರ ಅಥವಾ ಮಂತ್ರಿಗಳು ಅಭಿವೃದ್ಧಿ ಯೋಜನೆಗೆ ಕೈ ಹಾಕಿದರೆ ಅವರ ಜೇಬು ತುಂಬುವುದು ಶತಸಿದ್ಧ. ಆದರೆ ಅಸಲಿಗೆ ಅಭಿವೃದ್ಧಿ ಎಂದರೇನು ಎಂಬ ಪರಿಕಲ್ಪನೆಯೇ ಯಾರಿಗೂ ಇಲ್ಲ. ಮಾತಿಗಿಳಯುವ ಮುನ್ನ ಮರಗಳ ಮಾರಣ ಹೋಮ ಮಾಡುತ್ತಾರೆ. ಆದರೆ ಯಾರೊಬ್ಬರೂ ಒಂದೇ ಒಂದು ಸಣ್ಣ ಗಿಡವನ್ನು ಬೆಳೆಸಲು ಯೋಜನೆ ರೂಪಿಸುವುದಿಲ್ಲ!
ರಾಜ್ಯದಲ್ಲಿ ಈ ಬಾರಿ ಶೇ.೪೦ ಕಬ್ಬು ಉತ್ಪನ್ನ ಕುಸಿತ ಕಂಡಿದೆ. ಅದರ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ. ದೇಶದಲ್ಲಿ ೩೦ ಕೋಟಿ ಜನರಿಗೆ ಮಾನ ಮುಚ್ಚಿಕೊಳ್ಳಲು ಬಟ್ಟೆಯಾಗಲಿ, ಹೊಟ್ಟೆಗೆ ಹಿಟ್ಟಾಗಲಿ ಇಲ್ಲ. ೧೫ಸಾವಿರ ಮಹಿಳೆಯರು ಪ್ರತೀ ವರ್ಷ ವರದಕ್ಷಣೆಯೆಂಬ ಕ್ರೂರಮೃಗಕ್ಕೆ ಬಲಿಯಾಗುತ್ತಲೇ ಇದ್ದಾರೆ. ೧೬ ಕೋಟಿ ದಲಿತರು ಮಾನವ ಗೌರವ ವಂಚಿತ ಬದುಕು ಸಾಗಿಸುತ್ತಿದ್ದಾರೆ. ೨ ಲಕ್ಷ ಮಂದಿ ತಮಗೆ ಅನ್ಯಾಯವಾಗಿದ್ದರೂ ದುಬಾರಿ ನ್ಯಾಯದಿಂದಾಗಿ ನ್ಯಾಯ ವಂಚಿತರಾಗಿ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಸಾವಿರಾರು ಬುಟಕಟ್ಟು ಸಮುದಾಯಗಳ ಗ್ರಾಮಗಳಿಗೆ ಮೂಲ ಸೌಲತ್ತುಗಳೇ ಇಲ್ಲ. ಇಂಥ ಯಾವುದೇ ವಿಚಾರಗಳು ನಮ್ಮ ಸರಕಾರಗಳಿಗೆ, ಮಂತ್ರಿಗಳಿಗೆ ಅಭಿವೃದ್ಧಿ ಎನಿಸುವುದೇ ಇಲ್ಲ.
ಇಂಥ ನಿಲುವುಗಳು ಒಂದೆಡೆಯಾದರೆ ಅಭಿವೃದ್ಧಿಯ ಹೆಸರಿನಲ್ಲಿ ಇದ್ದ ಸವಲತ್ತುಗಳನ್ನೂ ಕಸಿದುಕೊಂಡು ಅಮಾಯಕರನ್ನು ಬೀದಿಗೆ ಬಿಸಾಕುವ ವ್ಯವಸ್ತೆ ಇನ್ನೊಂದೆಡೆ. ಇವುಗಳಿಂದಾಗಿ ಜನ ಸಾಮಾನ್ಯರು ನಲುಗುತ್ತಿದ್ದರೂ ಅವುಗಳನ್ನು ಕೇಳುವವರಿಲ್ಲ.
ಈ ಸರಕಾರಿ ವ್ಯವಸ್ಥೆ ರೂಪಿಸುವ ಯಾವುದೇ ಯೋಜನೆಗಳಿಗೆ ಜನ ಸಾಮಾನ್ಯರಿಂದ ವಿರೋಧ ವ್ಯಕ್ತವಾಗದೆ ಇರುವುದು ಇಲ್ಲವೇ ಇಲ್ಲ. ಆದರೂ ಜನಪ್ರತಿನಿಗಳಿಗೆ ಇಂಥ ‘ಅಭಿವೃದ್ಧಿ’ ಬೇಕು!! ಈ ವಿಚಾರದ ಬಗ್ಗೆ ಮಾತನಾಡುವಾಗ ಮೊನ್ನೆಮೊನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಜನ ತಮ್ಮ ಪಕ್ಷವನ್ನು ಬೆಂಬಲಿಸಲಿಲ್ಲ ಎಂಬ ಕಾರಣಕ್ಕೆ ‘ನಾನು ಬೆಂಗಳೂರು ಅಭಿವೃದ್ಧಿಗೆ ಎಷ್ಟೊಂದು ಶ್ರಮಿಸಿದೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡಿದೆ. ಸಾಕಷ್ಟು ಕಡೆ ಆಧಾಯ ಬರುವಂತೆ ಮಳಿಗೆಗಳನ್ನು ನಿರ್ಮಾಣ ಮಾಡಿದೆ. ಆದರೆ ಜನ ನನ್ನನ್ನು ಮರೆತರು. ಅದು ತುಂಬಾ ನೋವುಂಟು ಮಾಡಿದೆ’ ಎಂದು ಅಳಲು ತೋಡಿಕೊಂಡಿದ್ದು ನೆನಪಾಗುತ್ತದೆ. ಒಬ್ಬ ರಾಜಕಾರಣಿಯ ದೃಷ್ಟಿಯಲ್ಲಿ ನಗರದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡುವುದು ಅಭಿವೃದ್ಧಿ! ಆದರೆ ಜನ ಸಾಮನ್ಯನ ದೃಷ್ಟಿಯಲ್ಲಿ? ಈ ಪ್ರಶ್ನೆಗೆ ಉತ್ತರ ಹುಡುಕುವವರೆ ಇಲ್ಲವಾಗಿದೆ.
ಶತಮಾನಗಳ ಹಿಂದೆ ಶಿವಮೊಗ್ಗದಲ್ಲಿ ಲಿಂಗನಮಕ್ಕಿ, ಚಕ್ರ ಸಾವೆ ಹಕ್ಲು ಡ್ಯಾಂಗಳನ್ನು ಕಟ್ಟಲು ಸರಕಾರ ಹತ್ತಾರು ಕುಗ್ರಾಮಗಳನ್ನು ಒಕ್ಕಲೆಬ್ಬಿಸಿತು. ಅದಕ್ಕೆ ವಿರೋಧ ವ್ಯಕ್ತಪಡಿಸಿದವರಿಗೆಲ್ಲ ಪರಿಹಾರದ ಆಮಿಷ ತೋರಿಸಿತು. ಕೊನೆಗೂ ಸರಕಾರವೇ ಗೆದ್ದಿತು. ಅಲ್ಲಿನ ಮಲೆನಾಡ ಜನ ತಾವು ಆಡಿ ಬೆಳೆದ, ಮನೆ, ಹೊಲ, ಪರಿಸರವನ್ನೆಲ್ಲ ಬಿಟ್ಟು ಬಂದರು. ಇವತ್ತು ಅದು ಹಿನ್ನೀರಿನಲ್ಲಿ ಮುಳುಗಡೆಯಾಗಿದೆ. ಆದರೆ ಇವತ್ತಿಗೂ ಪರಿಹಾರವೆಂಬುದು ಮರೀಚಿಕೆ. ಕೊನೆಗೂ ಸೂತಿದ್ದು ಜನರೆ.
ಬೆಂಗಳೂರು ಸಮೀಪದ ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವಾಗಲೂ ವ್ಯಾಪಕ ವಿರೋಧ ವ್ಯಕ್ತವಾಯಿತು. ಆದರೆ ಅಲ್ಲೂ ಜನ ಸೋತರು. ಅಲ್ಲಿ ಕೂಡ ಬಹುತೇಕ ಜನರಿಗೆ ಪರಿಹಾರ ಕನಸಾಗಿಯೇ ಉಳಿದಿದೆ.
ಪಶ್ಚಿಮ ಬಂಗಾಳದ ನಂದಿ ಗ್ರಾಮದಲ್ಲಿ ಇದೇ ವಿಚಾರದ ವಿರುದ್ಧ ಜನ ಗೆಲ್ಲಲು ತಿಂಗಳಾನುಗಟ್ಟಲೆ ಹೋರಾಟ ಮಾಡಿದ್ದಲ್ಲದೆ ಕೊನೆಗೆ ಹಿಂಸಾ ಮಾರ್ಗಕ್ಕೆ ಇಳಿಯಬೇಕಾಯಿತು. ಅಷ್ಟು ದೂರದ ಮಾತೇಕೆ ರಾಜ್ಯದ ಶಿವಮೊಗ್ಗ, ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಆಗಿದ್ದು ಇದೇ. ಜನ ಎಷ್ಟೇ ವಿರೋಸಿದರೂ ಜನಪ್ರತಿನಿಗಳು ಮಾತ್ರ ತಮ್ಮ ಪಟ್ಟು ಬಿಡುವುದೇ ಇಲ್ಲ. ಅವರಿಗೆಲ್ಲ ಇದು ‘ಅಭಿವೃದ್ಧಿ’.
ಈಗ ಕೋಲಾರದಲ್ಲಿ ತೋಟಗಾರಿಕೆ ವಿವಿ ಸ್ಥಾಪನೆ ವಿಚಾರದಲ್ಲಿ ಆಗುತ್ತಿರುವುದೂ ಅದೇ. ೫೦೦ ಎಕರೆ ವಿಸ್ತೀರ್ಣವಿರುವ ಶ್ರೀನಿವಾಸಪುರದ ಹೊಗಳಗೆರೆ ಫಾರಂನ್ನು ವಿವಿ ಸ್ಥಾಪನೆಗಾಗಿ ಗುರುತಿಸಿದ್ದರೂ ಜಿಲ್ಲಾ ಕೇಂದ್ರಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದೆ ಎಂಬ ಕಾರಣಕ್ಕೆ ಕೇವಲ ೪೦ ಎಕರೆ ಇರುವ ಹಲಸು ತಳಿ ಅಭಿವೃದ್ಧಿ ಕ್ಷೇತ್ರದಲ್ಲಿಯೇ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸರಕಾರ ಚಿಂತನೆ ನಡೆಸುತ್ತಿದೆ. ಯಥಾ ಪ್ರಕಾರ ಇಲ್ಲೂ ಜನ ಬೀದಿಗಿಳಿದಿದ್ದಾರೆ.
ಡ್ಯಾಂ, ನದಿಜೋಡಣೆ, ವಿದ್ಯುತ್ ಉತ್ಪಾದನಾ ಘಟಕ, ವಿಶೇಷ ವಿತ್ತ ವಲಯ, ಕೇಗಾರಿಕೆ ಕೇಂದ್ರ ಹೀಗೆ ಯಾವುದೇ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಂಡರೂ ಸರಕಾರದ ಕೈ ಹೋಗುವುದು ರೈತರ ಜಮೀನಿಗೇ. ಹೀಗಾಗಿಯೇ ಈಗ ಆಹಾರೋತ್ಪಾದನೆ ಹಾಗೂ ಆಹಾರ ಉತ್ಪನ್ನಗಳ ಖರ್ಚಿನಲ್ಲಿ ಸಾಕಷ್ಟು ಏರುಪೇರಾಗಿ ಬೆಲೆಗಳು ಗಗನಕ್ಕೇರಿವೆ.
ಅಭಿವೃದ್ಧಿ ಎಂದರೆ ಕೇವಲ ಮರ ಕಡಿಯುವುದು, ರೈತರು, ಬುಡಕಟ್ಟು ಜನರಂಥ ಅಮಾಯಕರನ್ನು ಒಕ್ಕಲೆಬ್ಬಿಸಿ ಅವರ ಆಸ್ತಿಪಾಸ್ತಿಗಳನ್ನು ನುಂಗಿ ನೀರುಕುಡಿಯುವುದೇ ಆದರೆ ಇದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳುವುದಾದರೂ ಹೇಗೆ? ಯಾವುದೇ ಒಂದು ಅಭಿವೃದ್ಧಿಯಿಂದ ಜನಸಾಮಾನ್ಯರು ನೆಮ್ಮದಿಯಿಂದ, ನಿಶ್ಚಿಂತರಾಗಿ ಬದುಕುವಂತಾಗಬೇಕೆ ಹೊರತು, ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬೀಳುವಂತಾಗಬಾರದು.
ಈ ಪರಿಕಲ್ಪನೆ ಹೀಗೆಯೇ ಮುಂದುವರಿದರೆ ಉಸಿರಾಟಕ್ಕಾಗಿ ಬೇರೊಂದು ಕೃತಕ ಮಾರ್ಗ ಕಂಡುಕೊಳ್ಳಬೇಕಾದ ಪರಿಸ್ಥಿತಿಯನ್ನು ನಾವೇ ತಂದುಕೊಳ್ಳಬೇಕಾಗುತ್ತದೆ. ಹಸಿರು ಗಿಡ ಮರಗಳನ್ನು ಕೇವಲ ಚಿತ್ರಗಳಲ್ಲಿ ಮಾತ್ರ ಮುಂದಿನ ಪೀಳಿಗೆ ನೋಡುವಂಥ ಭಯಾನಕ ಪರಿಸ್ಥಿತಿಯನ್ನು ನಾವು ಸೃಷ್ಟಿಸಿಕೊಂಡಂತಾಗುತ್ತದೆ. ಹೀಗಾಗಿ ಈ ಪರಿಕಲ್ಪನೆಯನ್ನೇ ಬದಲಿಸುವ ತುರ್ತು ಅಗತ್ಯವಿದೆ. ನೀವೇನಂತೀರಿ....?

Monday, April 20, 2009

ಎಚ್ಚರ ಮತದಾರರೆ ಎಚ್ಚರ!!

ಮತದಾರ ಪ್ರಭವೇ ನಮನ,
ನಿನಗೊಂದು ಖಾಸಗಿ ಪತ್ರ ಬರೆಯುವ ತುರ್ತು ಅಗತ್ಯವಿದೆ. ಚುನಾವಣೆ ಎದುರಾಗಿದೆ. ಹಣ ಕೋಡಿಯಾಗಿ ಹರಿಯುತ್ತಿದೆ. ಅದನ್ನು ಕೊಳ್ಳೆ ಹೊಡೆದವರ್‍ಯಾರು ? ಅದೆಲ್ಲ ಯಾರ ಹಣ ಎಂಬುದು ನಮ್ಮ ಚುನಾವಣೆ ಅಕಾರಿಗಳಿಗೆ ಸಷ್ಟವಾಗಿ ಗೊತ್ತು. ಆದರೆ ಯಾವುದೂ ಬಹಿರಂಗವಾಗಿಲ್ಲ.
ಇದೂವರೆಗೆ ಕರ್ನಾಟಕದಲ್ಲೇ ೧೬ ಕೋಟಿ ರೂ. ಅಕೃತವಾಗಿ ಪೊಲೀಸರ ವಶಕ್ಕೆ ಸಿಕ್ಕಿದೆ (ಅನಕೃತವಾಗಿ ?)೨.೭೫ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ಹಾಗೂ ಇತರ ವಸ್ತುಗಳು ಪತ್ತೆಯಾಗಿವೆ. ಇವೆಲ್ಲವೂ ಮತದಾರರಾದ ನಿಮ್ಮನ್ನು ಓಲೈಸಲು, ತಮ್ಮ ಕಡೆ ಸೆಳೆದುಕೊಳ್ಳಲು.
ಇವರೆಲ್ಲಾ ಇಂದು ನಿಮ್ಮ ಮನೆ ಬಾಗಿಲಿಗೆ ನಾಯಿಗಳಂತೆ, ಬಿಕ್ಷುಕರಂತೆ ಅಲೆಯುತ್ತಿದ್ದಾರೆ. ಅವರು ಕೊಡುವ ಹಣ, ಹೆಂಡ ಮತ್ತಿತರೆ ವಸ್ತುಗಳನ್ನು ಒಮ್ಮೆ ನೀವು ಪಡೆದರೆ ಮತ್ತೆ ಅವರು ನಿಮ್ಮನ್ನು ಮೂಸಿಯೂ ನೋಡುವುದಿಲ್ಲ. ನೆನಪಿರಲಿ ಅವರು ಗೆದ್ದ ನಂತರ ‘ನಾನು ನಿನಗೆ ಮತ ನೀಡಿದ್ದೇನೆ, ನನ್ನದೊಂದು ಕೆಲಸ ಆಗಬೇಕು’ ಎಂದು ಹೋದರೆ ‘ನೀನೊಬ್ಬನೇ ಮತ ನೀಡಿಲ್ಲ ಹೋಗಲ್ಲೋ...’ ಎಂದು ಉತ್ತರಿಸುತ್ತಾರೆ! ಇದು ಅಕ್ಷರಶಃ ಸತ್ಯ. ಈಗಾಲೇ ಇಂತ ಹಸಿ ಕಹಿಗಳನ್ನು ಅನೇಕರು ಅನುಭವಿಸಿದ್ದಾರೆ. ಆದರೆ ಬಹಿರಂಗವಾಗಿಲ್ಲ.
ಅಭ್ಯರ್ಥಿಗಳ ಪರವಾಗಿ ಪುಡಾರಿ ರಾಜಕಾರಣಿಗಳು ನೀಡುವ ಹಣ, ಹೆಂಡ ಮತ್ತಿತರ ವಸ್ತುಗಳನ್ನು ಒಮ್ಮೆ ನೀವು ಮುಟ್ಟಿದರೆ ಈಗ ಅವರಿಗೆ ಬಂದಿರುವ ಪಾಡು (ಮನೆ ಬಾಗಿಲ ವರೆಗೆ ಅಲೆಯುವುದು) ನಾಳೆ ನಿಮಗೆ ಬರುತ್ತದೆ. ಮನುಷ್ಯನ್ನಾಗಿ ಕೊಂಚವೂ ಸ್ವಾಭಿಮಾನಿಗಳಾಗಿರದಿದ್ದರೆ ಹೇಗೆ? ಈಗಾಲೇ ಕಹಿ ಅನುಭವ ಅನುಭವಿಸಿದವರು ಅವರಿಗೆ ತಿರುಗು ಬಾಣ ನೀಡಿ.
ಜನವಾಗಿಯೂ ಹಣವಿಲ್ಲದೆಯೂ ನಿಮಗಾಗಿ, ನಿಮ್ಮ ಏಳಿಗೆಗಾಗಿ ಸೇವೆ ಮಾಡಲು ಮನೆ ಬಾಗಿಲಿಗೆ ಬರುವ ಜನ ಸೇವಕರಿಗೆ(ನಾಯಕರಿಗಲ್ಲ!) ಅಮೂಲ್ಯವಾದ ಮತ ನೀಡಿ.
ಬಿಜೆಪಿಗಂತೂ ಬೇಡವೇ ಬೇಡ:
ರಾಜ್ಯದಲ್ಲಿ ಈಗಾಗಲೇ ಬಿಜೆಪಿ ಅಕಾರದ ರುಚಿ ಉಂಡಿದೆ. ಅದರ ಫಲವಾಗಿ ಹಾವೇರಿಯಲ್ಲಿ ಅಮಾಯಕ ರೈತರು ಗೋಲಿಬಾರ್‌ಗೆ ತುತ್ತಾಗಿದ್ದಾರೆ. ರಾಜ್ಯಾದ್ಯಂತ ರೈತರು ಬೀಜ ಗೊಬ್ಬರಕ್ಕಾಗಿ ಹಗಲು ರಾತ್ರಿ ಬೀದಿಯಲ್ಲಿ ಕಳೆದು ಬಸವಳಿದಿದ್ದಾರೆ. ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಯುವತಿಯರು ಬೀದಿಯಲ್ಲಿ ಹಲ್ಲೆ ಮಾಡಿಸಿಕೊಂಡಿದ್ದಾರೆ. ಸಮಾಜದಲ್ಲಿ ಜಾತಿ, ಮತ, ಧರ್ಮಗಳ ನಡುವೆ ಬೇಧವೆಂಬ ಬೆಂಕಿ ಹಚ್ಚಿ ಅದರ ಝಳದಲ್ಲಿ ಬೇಳೆ ಬೇಯಿಸಿಕೊಳ್ಳುವ ಚಡ್ಡಿಗಳಿಗೆ ಖಂಡಿತಾ ಮತ ನೀಡಬೇಡಿ.
ಭಯೋತ್ಪಾದನೆಗೆ ಯಾವುದೇ ಮತದ ಹಣೆಪಟ್ಟಿಯಿಲ್ಲ, ಮುಂಬೈನಲ್ಲಿ ಮುಸ್ಲೀಮರು ಧಾಳಿ ನಡೆಸಿದರೆ ಮಲೆಗಾಂವ್‌ನಲ್ಲಿ ಹಿಂದೂಗಳು ದಾಳಿ ನಡೆಸಿದ್ದಾರೆ. ಈ ಎರಡೂ ಘಟನೆಗಳಲ್ಲಿ ಸತ್ತವರು ಮಾತ್ರ ಅಮಾಯಕ, ಮುಗ್ದ ನಾಗರಿಕರು. ಇಲ್ಲಿ ಎಲ್ಲ ಧರ್ಮೀಯರೂ ಇದ್ದಾರೆ. ಹಿಂದೂ ಹಾಗೂ ಮುಸ್ಲೀಮರ ಹೆಸರು ಹೇಳಿಕೊಂಡು ರಕ್ತ ಹರಿಸುವ ಇವರೆಲ್ಲಾ ರಾಕ್ಷಸರೆ!! ಇನ್ನೊಂದು ಖಟು ಸತ್ಯ ಎಂದರೆ ಈ ಎರಡೂ ರೀತಿ ಭಯೋತ್ಪಾದಕರಿಗೂ ‘ಲಿಂಕ್’ ಇದ್ದೇ ಇದೆ!!
ಇವರೆಲ್ಲಾ ರಾಜಕೀಯ ಧಾಳಗಳು. ಬಿಜೆಪಿಯಲ್ಲಿ ಎಂಥ ಒಳ್ಳೆಯ ಅಭ್ಯರ್ಥಿ ನಿಂತರೂ ಅದು ಮುಟ್ಟುವುದು ಕೊನೆಗೆ ರಕ್ತ ಸಿಕ್ತ ಪಾತ್ರೆಯನ್ನೆ... ಗೀಗಾಗಿ ಬಿಜೆಪಿಗೆ ಮತ ನೀಡುವುದು ಬೇಡ. ಉಳಿದಂತೆ ನಿಮ್ಮ ನಿಮ್ಮ ಪ್ರದೇಶದಲ್ಲಿ ಯಾವುದೇ ವ್ಯಕ್ತಿಗಾದರೂ ಅವನ ಗುಣಾವಗುಣಗಳನ್ನು ತುಲನೆ ಮಾಡಿ, ಪರಾಮರ್ಶಿಸಿ ಮತ ನೀಡಿ... ನೆನಪಿರಲಿ ಆಮಿಷಕ್ಕೆ ಬಲಿಯಾಗದಿರಿ.

Tuesday, April 7, 2009

ಅಭ್ಯರ್ಥಿಗಳಿಗಿಲ್ಲ ಆರ್ಥಿಕ ಹಿಂಜರಿತ...!

ಬೆಂಗಳೂರು : ಆರು ತಿಂಗಳಿನಿಂದೀಚೆಗೆ ಭಾರತ ಮಾತ್ರವಲ್ಲ ಇಡೀ ವಿಶ್ವದ ಮೇಲೆ ಆರ್ಥಿಕ ಹಿಂಜರಿತದ ಎಫೆಕ್ಟ್ ಆಗಿದೆ. ಆದರೆ ಅದು ಲೋಕಸಭೆ ಚುನವಾಣೆಯ ಮೇಲೆ ಮಾತ್ರ ಯಾವುದೇ ಪರಿಣಾಮ ಬೀರಿಲ್ಲ!
ಹೌದು, ಆರ್ಥಿಕ ಕುಸಿತರಿಂದ ಮುಂಬೈ, ಹೊಸದಿಲ್ಲಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ದೊಡ್ಡ ಶ್ರೀಮಂತರೇ ಬೀದಿಪಾಲಾಗಿದ್ದಾರೆ. ಕೆಲವರು ಕುಟುಂಬ ಸಮೇತರಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಈ ಸ್ವಯಂ ಘೋಷಿತ ಶ್ರೀಮಂತರಿಗೆ ಮಾತ್ರ ಆ ಬಿಸಿ ತಟ್ಟಿಲ್ಲ.
ಭಾರತ ಮೇಲ್ನೋಟಕ್ಕೆ ಬಡ ದೇಶವಾಗಿ ಕಾಣುತ್ತಿದೆಯೇ ಹೊರತು ಒಳಗಡೆ ಭಾರೀ ಶ್ರೀಮಂತ ದೇಶ. ಆದರೆ ಒಳ ಸೇರಿರುವ ಕಪ್ಪು ಹಣ ಮಾತ್ರ ಬೆಳಕಿಗೆ ಬರುತ್ತಲೇ ಇಲ್ಲ. ಹೊಸದಿಲ್ಲಿಯಲ್ಲಿರುವ ರಾಷ್ಟ್ರೀಯ ಪಕ್ಷಗಳ ಕಚೇರಿಗೆ ಹೋಗಿ ನಿಂತು ನೋಡಿದರೆ ಚುನಾವಣೆಗೆ ನಿಲ್ಲಲು ಅಥವಾ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕೋಟಿ ಕೋಟಿ ಹಣವನ್ನು ಚೀಲಗಳಲ್ಲಿ, ಸೂಟ್‌ಕೇಸ್‌ಗಳಲ್ಲಿ ತಂದು ಸುರಿಯುವುದನ್ನು ಪ್ರತ್ಯಕ್ಷವಾಗಿ ಕಾಣಬಹುದು.
ಇದು ಕೇವಲ ಬಿಜೆಪಿ, ಕಾಂಗ್ರೆಸ್‌ನಂಥ ರಾಷ್ಟ್ರೀಯ ಪಕ್ಷಗಳಿಗೆ ಮಾತ್ರ ಸೀಮಿತವಾಗಿಲ್ಲ. ಯಾವ ಪ್ರಾದೇಶಿಕ ಪಕ್ಷಗಳ ನಾಯಕರು ಕೂಡ ಆರ್ಥಿಕ ಕುಸಿತದ ಬಿಸಿಗೆ ಕರಗಿಲ್ಲ. ಅದಕ್ಕೆ ಪ್ರತ್ಯಕ್ಷ ನಿದರ್ಶನ ನೀಡಲು ಕೇವಲ ಕರ್ನಾಟಕವೊಂದೇ ಸಾಕು. ಚುನಾವಣೆ ಘೋಷಣೆಯಾದ ಕೆಲವೇ ದಿನಗಳಲ್ಲಿ ರಾಜ್ಯ ಚುನಾವಣೆ ಆಯೋಗ ಈಗಾಗಲೇ ಯಾವುದೇ ದಾಖಲೆಯಿಲ್ಲದ ೧.೨೫ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.
ಚುನಾವಣೆ ಆರೋಗದ ಹದ್ದಿನ ಕಣ್ಣಿಗೂ ಮಣ್ಣೆರಚಿ ನಮ್ಮ ಕರುನಾಡಿನ ಜನಪ್ರತಿನಿಗಳ ವಿರುದ್ಧ ೧೦,೫೭೪ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಅಂಥವರ ವಿರುದ್ಧ ೫೨೫೧ಪ್ರಕರಣ ದಾಖಲಿಸಲಾಗಿದೆ. ರಾಜ್ಯ ಚುನಾವಣಾಕಾರಿಗಳು ಅಷ್ಟೆಲ್ಲಾ ಪ್ರಚಾರ ಮಾಡಿ ಅಬ್ಬರದ ಪ್ರಚಾರ ಮಾಡಬೇಡಿ ಎಂದರೂ ಬ್ಯಾನರ್, ಬಂಟಿಂಗ್ಸ್ ಹಾಗೂ ಪೋಸ್ಟರ್ ಅಂಟಿಸಿರುವ ವಿಚಾರಕ್ಕೆ ಸಂಬಂಸಿದಂತೆ ೫೪ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಜ್ಯದಲ್ಲಿ ಮದ್ಯ ನಿಷೇಧ ಮಾಡಿದ್ದರೂ ೯೫ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದು ೮೩೪ ಪ್ರಕರಣಗಳನ್ನು ದಾಕಲಿಸಿಕೊಳ್ಳಲಾಗಿದೆ.
ಇಷ್ಟಾದರೂ ಚುನಾವಣೆಗೆ ರ್ಸ್ಪಸಿದ ಅಭ್ಯರ್ಥಿಗಳು ತಮ್ಮ ಕಾಯಕರ್ತರ ಮೂಲಕ ಪ್ರತೀ ಹಳ್ಳಿ ಹಳ್ಳಿಗಳಲ್ಲಿ ಹಣ, ಹೆಂಡ ಶೇಖರಿಸಿಟ್ಟಿದ್ದಾರೆ. ಮನೆ ಮನೆಗೂ ಹಂಚುತ್ತಿದ್ದಾರೆ. ಜತೆಗೆ ಮತಗಳನ್ನು ತಮ್ಮ ಕಡೆ ಸೆಳೆಯಲು ಅವರಿಗೆ ಸೀರೆ, ಪಂಚೆ ಹಾಗೂ ಗೃಹ ಬಳಕೆಯ ವಸ್ತುಗಳನ್ನು ತಂದು ವಿತರಿಸಿದ್ದಾರೆ, ವಿತರಿಸುತ್ತಿದ್ದಾರೆ.
ಆರ್ಥಿಕ ಕುಸಿತದಿಂದ ಇಂಗ್ಲೆಂಡ್‌ನಲ್ಲಿ ೩೫ಸಾವಿರ ಕಂಪನಿಗಳು ದಿವಾಳಿಯಾಗಿವೆ. ಇದರಿಂದ ಅಲ್ಲಿನ ೧.೨೫ಲಕ್ಷ ಶ್ರೀಮಂತರು ಬೀದಿಗೆ ಬಂದಿದ್ದಾರೆ. ಭಾರತದಲ್ಲಿ ಕೂಡ ಉದ್ಯಮಿಗಳ ಹಾಗೂ ಜನ ಸಾಮಾನ್ಯರ ಮೇಲೆ ಆರ್ಥಿಕ ಕುಸಿತದಿಂದ ಭಾರೀ ನಷ್ಟವಾಗಿದೆ. ಕಾರ್ಮಿಕ ವರ್ಗ ಕೂಡ ಇದರಿಂದ ಕಂಗಾಲಾಗಿದೆ. ಆದರೆ ಇಲ್ಲಿನ ಜನ ಪ್ರತಿನಿಗಳಿಗೆ ಮಾತ್ರ ಆದರ ಯಾವುದೇ ಎಫೆಕ್ಟ್ ಇಲ್ಲ.
ರಾಜ್ಯಸಭೆಯ ಅರ್ಧದಷ್ಟು ಹಾಗೂ ಲೋಕಸಭೆಯ ಮೂರನೇ ಒಂದರಷ್ಟು ಸದಸ್ಯರು ಬಾರೀ ಶ್ರೀಮಂತರೆ. ಇವರೆಲ್ಲರೂ ಕಪ್ಪು , ಬಿಳುಪು ಹಣ ಇಟ್ಟುಕೊಂಡು ದರ್ಬಾರು ಮಾಡುವವರೆ. ಜನ ಪ್ರತಿನಿಗಳು ತೆರಿಗೆ ಇಲಾಖೆಗೆ ಲೆಕ್ಕಪತ್ರ ಸಲ್ಲಿಸುತ್ತಾರಾದರೂ ಕಪ್ಪು ಹಣದ ಬಗ್ಗೆ ಯಾವುದೇ ಲೆಕ್ಕ ಇರುವುದಿಲ್ಲ. ಅದನ್ನು ಕೇಳುವವರೂ ಇಲ್ಲ. ಹೀಗಾಗಿ ಇವರ್‍ಯಾರಿಗೂ ಆರ್ಥಿಕ ಕುಸಿತದಿಂದ ಯಾವುದೇ ತೊಂದರೆಯಾಗಿಲ್ಲ. ಆ ಕಾರಣಕ್ಕಾಗಿಯೇ ಮತದಾರರನ್ನು ಇವರು ತಮ್ಮ ನೋಟಿನ ಮೊನೆಯಲ್ಲಿಯೇ ಕುಣಿಸುತ್ತಿದ್ದಾರೆ. ಮತಗಳನ್ನು ಕೊಂಡುಕೊಳ್ಳುತ್ತಿದ್ದಾರೆ.
Powered By Blogger