ಉತ್ತರ ಕರ್ನಾಟಕದ ಮಂದಿ ‘ನೆರೆಯ ತೊರೆ’ಯಲ್ಲಿ ತೇಲಿ ಹೋಗುತ್ತಿದ್ದಾರೆಂಬ ಕಾರಣಕ್ಕೆ ಕರ್ನಾಟಕದ ಉದ್ದಗಲಕ್ಕೂ ಮಾನವೀಯತೆ, ಮಮಕಾರ ಧಾರಾಕಾರವಾಗಿ ಹರಿಯುತ್ತಿದೆ. ಅದರ ಜತೆಗೆ ಕೋಟಿ ಕೋಟಿ ರೂ. ಹಣ ಕೂಡ ಕೋಡಿಯಾಗಿ ಉತ್ತರ ದಿಕ್ಕಿಗೆ ಹರಿಯುತ್ತಲೇ ಇದೆ. ಜತೆಗೆ ದವಸ, ಧಾನ್ಯ, ಬಟ್ಟೆ, ದಿನಸಿ ವಸ್ತುಗಳು, ಸಿದ್ಧ ಆಹಾರಗಳು ಕೂಡ ಲೋಡುಗಟ್ಟಲೆ ಸಾಗುತ್ತಿದೆ...
ಕೆಲವರು ದಾನವನ್ನು ನೇರವಾಗಿ ಹೋಗಿ ತಮಗೆ ಸಿಕ್ಕ ಅಮಾಯಕ ಜನರಿಗೆ ತಲುಪಿಸಿ, ಅವರ ಕಷ್ಟ ನಷ್ಟಗಳನ್ನು ಕೇಳಿ ‘ಭರವಸೆಯ ಬೆಳಕು’ ನೀಡಿ ಬರುತ್ತಿದ್ದಾರೆ (ಅದರಲ್ಲೂ ಕೆಲವರು ಕೇವಲ ಮಂತ್ರಾಲಯಕ್ಕೆ ತೆರಳಿ ಪುನೀತರಾಗುತ್ತಿದ್ದಾರೆ!). ಇನ್ನು ಕೆಲವರು ಸರಕಾರಕ್ಕೆ, ಕೆಲವು ಸಂಘ ಸಂಸ್ಥೆಗಳಿಗೆ, ಮಾಧ್ಯಮ ಕೇಂದ್ರಗಳಿಗೆ ತಲುಪಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಗೊಂಡ ‘ನಿಧಿ ಸಂಗ್ರಹ ಯಾತ್ರೆ’ಯಲ್ಲಿ ಬೆಂಗಳೂರಿನ ಒಂದೆರಡು ಗಲ್ಲಿಗಳಲ್ಲಿ (ಕೇವಲ ಮೂರು ದಿನ ಪಾದಯಾತ್ರೆ ಮಾಡಿದ್ದಕ್ಕೆ) ಬರೊಬ್ಬರಿ ೭೦೦ ಕೋಟಿ ರೂ. ಹಣ ಸಂಗ್ರಹವಾಗಿದೆ.
ಕೇಂದ್ರ ಸರಕಾರದಿಂದ ಈಗಾಗಲೇ ೧೫೨ ಕೋಟಿ ರೂ. ಗಳನ್ನು ನೆರೆ ಸಂತ್ರಸ್ತರ ಪರಿಹಾರ ನಿಗೆ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರಕಾರ ಕೂಡ ೩೦೦೦ಕ್ಕೂ ಹೆಚ್ಚು ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಆದರೆ ಇದೆಲ್ಲ ಮೇಲ್ನೋಟಕ್ಕೆ ಕಾಣುವ ಸತ್ಯ! ರಾಜ್ಯ ಸರಕಾರವೇ ಸಾಮಾನ್ಯ ಖಾತೆ ಭೂಮಿಗೆ ಎಕರೆಗೆ ೮೦೦ ರೂ., ನೀರಾವರಿ ಜಮೀನಿನ ಎಕರೆ ಬೆಳೆಗೆ ೧೬೦೦ರೂ., ತೋಟಗಾರಿಕೆ ಬೆಳೆ ನಾಶಕ್ಕೆ ಎಕರೆಗೆ ೨೬೦೦ ರೂ. ಪರಿಹಾರ ನೀಡಲಾಗುವುದೆಂದು ಆದೇಶಿಸಿದೆ. ಇದರ ಜತೆಗೆ ಸಂಪೂರ್ಣ ಮನೆ ಕಳೆದುಕೊಂಡವರಿಗೆ ೫೦೦೦ರೂ. ನೀಡುವುದಾಗಿ ಸರಕಾರ ಘೋಷಣೆ ಮಾಡಿದೆ. ಇದೆಲ್ಲ ಯಾವ ಪುರುಷಾರ್ಥಕ್ಕೆ ? ಸರಕಾರ ನೀಡುವ ಸಾವಿರಾರು ರೂ. ಹಣದಿಂದ ಕಳೆದು ಹೋದ ಬದುಕನ್ನು ಒಬ್ಬ ರೈತ ಅಥವಾ ಸಾಮಾನ್ಯ ಪ್ರಜೆ ಮತ್ತೆ ಕಟ್ಟಿಕೊಳ್ಳಲು ಸಾಧ್ಯವೆ ?
ರಾಜ್ಯದಲ್ಲಿ ನೆರೆ ಹಾವಳಿಯಿಂದ ಈಗಾಲೇ ೨೦ ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸರಕಾರವೇ ಘೋಷಿಸಿದೆ. ಇಷ್ಟಾದರೂ ಪರಿಹಾರ ನೀಡುತ್ತಿರುವುದು ಮಾತ್ರ ಪುಡಿಗಾಸು ! ‘ಮಠ, ಮಂದಿರಗಳ ಏಳಿಗೆ’ಗೆ ಹಿಂದು ಮುಂದು ನೋಡದೆ ನೂರಾರು ಕೋಟಿ ರೂ. ನೀಡಿದ ರಾಜ್ಯ ಸರಕಾರಕ್ಕೆ ಸಮಾಜದ ಹಿತ ಕಾಯುವ ದೂರದೃಷ್ಟಿ ಮೊದಲೇ ಇರಲಿಲ್ಲ. ಈಗ ಪ್ರಕೃತಿ ವಿಕೋಪ ಸಂಭವಿಸಿದ ನಂತರ ಅದನ್ನು ಸರಿದೂಗಿಸಲು ನೇರವಾಗಿ ಜನರ ಬಳಿ ಬಂದು ‘ದಾನ ಮಾಡಿ’ ಎಂದು ಬೇಡುವುದರ ಜತೆಗೆ ಹಲವು ಕಸರತ್ತುಗಳನ್ನು ನಡೆಸಿದೆ. ನಡೆಸುತ್ತಲೂ ಇದೆ.
ಇಷ್ಟಾದರೂ ಈಗಾಲೇ ರಾಜ್ಯ ಸರಕಾರದ ಬೊಕ್ಕಸಕ್ಕೆ ಹತ್ತಿರತ್ತಿರ ಸಾವಿರ ಕೋಟಿ ರೂ. ಹಣ ಜನ ಸಾಮಾನ್ಯರಿಂದ ಸಂಗ್ರಹವಾಗಿದೆ. ಆದರೆ ಅದಕ್ಕೆಲ್ಲಾ ಲೆಕ್ಕವೇ ಇಲ್ಲ. ಸಾಧ್ಯವಾದರೆ ಅದೆಲ್ಲವನ್ನು ಪಾರದರ್ಶಕವಾಗಿ ಲೆಕ್ಕ ನೀಡಲಿ. ನಿರ್ಗತಿಕರಿಗೆ ಹಣ ನೀಡಲು ಇನ್ನೂ ಕೆಲವರು ಹಿಂದು ಮುಂದು ನೋಡುತ್ತಿದ್ದಾರೆ. ಕಾರಣ ಸರಕಾರದ ಬೊಕ್ಕಸಕ್ಕೆ ಹೋದ ಹಣ ಸ್ಮಶಾನಕ್ಕೆ ಹೋದ ಹೆಣ ಎರಡೂ ವಾಪಸ್ ಬರುವುದಿಲ್ಲ. ಅದರಿಂದ ಯಾವುದೇ ಪ್ರಯೋಜನವೂ ಇಲ್ಲ ಎಂಬ ಭಯ, ಗಾಬರಿ ಅವರನ್ನು ಕಾಡುತ್ತಿದೆ.
ರಾಜ್ಯದಲ್ಲಿ ಮಾನವೀಯತೆಗೆ ಬರವಿಲ್ಲ. ಆದರೆ ಅದರ ನೆಪದಲ್ಲಿ ಹರಿಯುವ ಹಣ ನೇರವಾಗಿ ಸಂತ್ರಸ್ತರಿಗೆ ತಲುಪುವುದೋ ಇಲ್ಲವೋ ಎಂಬ ಆತಂಕ ರಾಜ್ಯದ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ನೆರವು ನೀಡಲು ಎಲ್ಲ ಮಾಧ್ಯಮಗಳು(ಮುದ್ರಣ ಹಾಗೂ ದೃಶ್ಯ) ಪ್ರತ್ಯೇಕವಾಗಿ ಹಣ, ದವಸ ಧಾನ್ಯ, ನಿತ್ಯ ಬಳಕೆಯ ಸಾಮಗ್ರಿಗಳನ್ನು ಸಂಗ್ರಹಿಸುತ್ತಲೇ ಇವೆ. ಅವುಗಳನ್ನು ಪ್ರಾಮಾಣಿಕವಾಗಿ ತಲುಪಿಸುತ್ತಲೇ ಇವೆ. ಈ ವಿಚಾರ ರಾಜ್ಯದ ಪ್ರತಿಯೊಬ್ಬರಿಗೂ ಗೊತ್ತು. ಆದರೂ ರಾಜ್ಯ ಬಿಜೆಪಿ ಸರಕಾರ ಪ್ರತಿನಿತ್ಯ ಲಕ್ಷಾಂತರ ರೂ. ಮೌಲ್ಯದ ಜಾಹೀರಾತುಗಳನ್ನು ಎಲ್ಲ ಮಾಧ್ಯಮಗಳಿಗೆ ನೀಡುತ್ತಲೇ ಇದೆ.
ಸಾಲದ್ದಕ್ಕೆ ಪ್ರತಿಯೊಂದು ಇಲಾಖೆಯ ಸಚಿವರೂ ತಮ್ಮ ಮುಖಚಿತ್ರವನ್ನು ಒಳಗೊಂಡ ಹಾಗೂ ಇಲಾಖೆಯ ಅಕಾರಿಗಳ ಹೆಸರನ್ನು ಹೊಂದಿದ ಜಾಹೀರಾತನ್ನು ನೀಡುತ್ತಲೇ ಇವೆ. ಇದಕ್ಕೆ ಒಂದು ರಾಜ್ಯ ಮಟ್ಟದ ದಿನಪತ್ರಿಕೆಗೆ ಅಥವಾ ದೃಶ್ಯ ಮಾಧ್ಯಮಕ್ಕೆ ಒಂದು ದಿನಕ್ಕೆ ಲಕ್ಷಾನುಗಟ್ಟಲೆ ಹಣ ನೀಡಬೇಕು. ಆದರೆ ಆ ಹಣ ಯಾರ ಮನೆಯದು !? ಪ್ರತಿನಿತ್ಯ ಹೀಗೆ ಸರಕಾರಿ ಬೊಕ್ಕಸದಿಂದ ಅನಾವಶ್ಯಕವಾಗಿ ಮಾಧ್ಯಮ ಕೇಂದ್ರಗಳಿಗೆ ಜಾಹೀರಾತು ಹೆಸರಿನಲ್ಲಿ ಹಣ ಸರಬರಾಜು ಮಾಡುವ ಮೂಲಕ ಬಿಜೆಪಿ ಸರಕಾರ ಮಾಧ್ಯಮಗಳ ಜತೆಗೆ ಅಮೂರ್ತ ಸ್ವರೂಪದ ‘ಸ್ನೇಹ ಸಂಬಂಧ’ ಬೆಳೆಸಿಕೊಳ್ಳಲು ಹವಣಿಸುತ್ತಿದೆ ಎಂಬುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.
ಪ್ರತಿನಿತ್ಯ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿದಾಗೆಲ್ಲ ಒಂದಲ್ಲಾ ಒಂದು ರೀತಿ ನೆರೆ, ಪರಿಹಾರದ ಬಗ್ಗೆಯೇ ಮಾತನಾಡುತ್ತಿದ್ದಾರೆ. ಹೀಗಿರುವಾಗಿ ಅದಕ್ಕೆ ಲಕ್ಷಾಂತರ ಮೌಲ್ಯದ ಜಾಹೀರಾತು ಅಗತ್ಯವೇ ? ಪತ್ರಿಕಾಗೋಷ್ಠಿಯಲ್ಲಿಯೇ ಈ ವಿಚಾರವನ್ನು ಹೇಳಿದರೆ ಮಾಧ್ಯಮಗಳು ಅದನ್ನು ಪ್ರಕಟಿಸುವುದಿಲ್ಲ ಎನ್ನುತ್ತವೆಯೇ? ಅವರೂ ಕೂಡ ತಮ್ಮದೇ ಆದ ರೀತಿ ನಿ ಸಂಗ್ರಹಣೆ ಮೂಲಕ ಮಾನವೀಯತೆ ಮೆರೆಯುತ್ತಿರುವುದು ಮುಖ್ಯಮಂತ್ರಿಯ ಗಮನಕ್ಕೆ ಬಂದೇ ಇಲ್ಲವೆ ?
ಕೇವಲ ಪ್ರಚಾರ ಪಡೆಯುವ ಹುನ್ನಾರವನ್ನಿಟ್ಟುಕೊಂಡು ‘ಪೇಪರ್ ಟೈಗರ್’ಗಳಾಗಲು ಸರಕಾರದ ಸಚಿವರು, ಶಾಸಕರು, ಹಿರಿಯ ಅಕಾರಿಗಳು ಯತ್ನಿಸಿದರೆ ಅದರ ಪರಿಣಾಮ ಆಗುವುದು ಜನ ಸಾಮಾನ್ಯರ ಮೇಲೆ ಎಂಬ ಸಣ್ಣ ಸತ್ಯವನ್ನು ಅವರು ಮನಗಾಣಬೇಕಿದೆ. ಅನಾವಶ್ಯಕವಾಗಿ ಜಾಹೀರಾತಿಗಾಗಿ ಸುರಿಯುವ ಲಕ್ಷಾಂತರ ರೂ. ಹಣವನ್ನು ಅದೇ ನಿರ್ಗತಿಕ, ಬಡಬಗ್ಗರ ಬದುಕಿನ ಏಳಿಗೆಗೆ, ಅವರಿಗೆ ‘ಬೆಳಕು ನೀಡಲು’ ಉಪಯೋಗಿಸಿದರೆ ಕನಿಷ್ಠ ಒಂದಷ್ಟು ಮಂದಿಯಾದರೂ ನೆಮ್ಮದಿ ಕಂಡುಕೊಂಡಾರು... ಆದರೆ ಯಾರದ್ದೋ ದುಡ್ಡು ಯಲ್ಲಮನ ಜಾತ್ರೆ ಎಂಬಂತೆ ಜನಪ್ರತಿನಿಗಳು ಬರೀ ಪ್ರಚಾರ, ಮೋಜು ಮಸ್ತಿಗೆ ನಿಂತರೆ ಜನರೇ ಬುದ್ದಿ ಕಲಿಸಿಯಾರು ಎಚ್ಚರವಿರಲಿ... ನೊಂದವರು ನೋವಿನ ನಿಟ್ಟುಸಿರ ಬಿಸಿ ತಟ್ಟದೆ ಇರದು.
Wednesday, October 14, 2009
Friday, October 2, 2009
ಉತ್ತರ ತತ್ತರ: ಸರಕಾರಕ್ಕಾಗಲಿಲ್ಲ ಎಚ್ಚರ...!
ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇಡೀ ಉತ್ತರ ಕರ್ನಾಟಕ ತತ್ತರಗೊಂಡಿದೆ. ಆದರೆ ವಿಧಾನಸೌಧದಲ್ಲಿ ಮಾತ್ರ ಒಬ್ಬರೇ ಒಬ್ಬ ಸಚಿವರೂ ಇಲ್ಲ! ಎಲ್ಲರೂ ಸುತ್ತೂರು ಮಠದಲ್ಲಿ ‘ವ್ಯಾಯಾಮ’ ಮಾಡುತ್ತ, ಚಿಂತನ ಬೈಠಕ್ ನಡೆಸಿಕೊಂಡಿದ್ದರು. ಇದ್ದಕ್ಕಿಂದ್ದಂತೆ ವರುಣ ಮಂತ್ರಾಲಯದ ಒಳಗೆ ನುಗ್ಗಿದ್ದಾನೆ. ಆಗ ಸಚಿವೋದಯರೆಲ್ಲಾ ವಿಧಾನಸೌಧದ ಕಡೆ ಮುಖ ಮಾಡಿ ನಿಂತಿದ್ದಾರೆ!!ಬಳ್ಳಾರಿ, ಬಿಜಾಪುರ, ಕೊಪ್ಪಳ, ರಾಯಚೂರು, ಬೆಳಗಾವಿ, ಧಾವಣಗೆರೆ, ಚಿತ್ರದುರ್ಗ, ದಾರವಾಡ, ಗದಗ ಜಿಲ್ಲೆಗಳಲ್ಲಿ ಮೂರು ದಿನಗಳಿಂದಲೂ ನಿರಂತರವಾಗಿ ಆಕಾಶಕ್ಕೆ ತೂತು ಬಿದ್ದಿದೆಯೇನೋ ಎಂಬಂತೆ ಮಳೆ ಸುರಿಯುತ್ತಲೇ ಇದೆ. ಅಲ್ಲಿಯ ಜನರಿಗೆ ವರುಣ ಯಮನಂತೆ ಗೋಚರಿಸುತ್ತಿದ್ದಾನೆ. ಮಾಧ್ಯಮಗಳು ಮೇಲಿಂದ ಮೇಲೆ ಅವುಗಳ ಬಗ್ಗೆ ವರದಿ ಮಾಡುತ್ತಲೇ ಇವೆ. ಆದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಹೋದ್ಯೋಗಿ ಮಂತ್ರಿಗಳ ‘ಚಿಂತನ ಬೈಠಕ್’ ಮುಗಿದಿರಲಿಲ್ಲ.
ಇವರಿಗೆಲ್ಲ ಜನತೆಯ ಕಷ್ಟ ಕಾರ್ಪಣ್ಯಗಳಿಗಿಂತ ಮೋದಿಯ ‘ಪಾಠ ’ವೇ ಮುಖ್ಯವಾಗಿತ್ತು. ಪ್ರತಿಯೊಂದನ್ನೂ ರಾಜಕೀಯದ ನಾಸಿಕದಿಂದಲೇ ಮೂಸಿ ನೋಡುವ ಜನಪ್ರತಿನಿಗಳಿಗೆ ಜನತೆಯ ಆರ್ಥನಾದ ಮಾತ್ರ ಕೇಳಲೇ ಇಲ್ಲ. ಮೊದಲ ದಿನವೇ ಬಿಜಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ೨೨ಮಂದಿ ಸಾವಿಗೀಡಾದರು. ಆದರೆ ಅದು ಮುಖ್ಯಮಂತ್ರಿಗಳ ಹಾಗೂ ರಾಜ್ಯಸರಕಾರದೊಳಗಿರುವ ಮಂತ್ರಿ ಮಹೋದಯರ ಹೃದಯವನ್ನು ಕರಗಿಸಲಿಲ್ಲ. ಏಕೆಂದರೆ ಅವರೆಲ್ಲ ಜನ‘ಸಾಮಾನ್ಯರು’.
ಪ್ರತಿಪಕ್ಷದ ನಾಯಕರು ಇದನ್ನು ಗಮನಿಸಿ ಮುಖ್ಯಮಂತ್ರಿಗಳನ್ನು ಮಾತಿನ ಮೂಲಕ ತಿವಿದರೂ ಯಡಿಯೂರಪ್ಪ ಮಾತ್ರ ಎಚ್ಚೆತ್ತುಕೊಳ್ಳಲೇ ಇಲ್ಲ. ಪ್ರತಿಪಕ್ಷಗಳ ಮಾತನ್ನು ಕೇವಲ ಟೀಕೆ ಎಂತಲೇ ನೋಡುವ ಜಾಯಮಾನದ ಯಡಿಯೂರಪ್ಪ ಮಾತ್ರ ‘ಪ್ರತಿಪಕ್ಷದವರ ತಟ್ಟೆಯಲ್ಲಿ ಆನೆಯೇ ಬಿದ್ದಿದೆ. ಅದನ್ನು ಎತ್ತಿಕೊಳ್ಳಲಿ’ ಎಂದು ಕೇಂದ್ರದ ಕಡೆ ಕೈ ತೋರಿಸಿ ಪ್ರತಿ ಟೀಕೆ ಮಾಡಿದರೆ ಹೊರತು, ಜನ ಸಾಮಾನ್ಯರ ರಕ್ಷಣೆಗೆ ಮುಂದಾಗಲೇ ಇಲ್ಲ. ಅದರ ಫಲವಾಗಿ ಮಳೇ ಶುರುವಾದ ಮೂರೇ ದಿನಕ್ಕೆ ಇಡೀ ಉತ್ತರ ಕರ್ನಾಟಕದಲ್ಲಿ ೧೦೯ ಮಂದಿ ಕೊನೆಯುಸಿರೆಳೆದಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ರಾಜ್ಯದ ರೈತರ, ಜನ ಸಾಮಾನ್ಯರ ಬಗ್ಗೆ ಇರುವ ‘ಕಾ
ಳಜಿ’ !!ಅಂದರೆ ಸಿಎಂ ಹೋಗಿ ಮಳೆ ನಿಲ್ಲಿಸುತ್ತಾರೆ ಎಂದಲ್ಲ. ಕೊನೇ ಪಕ್ಷ ಅದಕ್ಕೆ ಸ್ಪಂದಿಸಿ ನಡುಗಡೆಗಳಲ್ಲಿ, ನೀರಿನಲ್ಲಿ ಸಿಕ್ಕಿಕೊಂಡವರನ್ನು ತಮ್ಮ ನಿರ್ದೇಶನದ ಮೂಲಕ ರಕ್ಷಿಸಬಹುದು. ನಿರಾಶ್ರಿತರಿಗೆ ಎಲ್ಲಾದರೂ ಸುರಕ್ಷಿತ ಸ್ಥಳದಲ್ಲಿ ಆಶ್ರಯ ನೀಡಬಹುದು. ಆದರೆ ಆ ಸಣ್ಣ ಕೆಲಸವನ್ನೇ ಮಾಡಲು ಇವರಿಗೆ ಮನಸಿರಲಿಲ್ಲ.
ಸರಕಾರದ ಮೇಲೆ ಟೀಕೆ ಸಾಮಾನ್ಯ. ಆದರೆ ಅದರಲ್ಲೂ ಒಂದು ಕಾಳಜಿ ಇರುತ್ತದೆ ಎನ್ನುವುದನ್ನೇ ಮರೆತ ಸಿಎಂ, ಥೇಟ್ ತೊಗಲಕ್ ರೀತಿ ವರ್ತಿಸುತ್ತಿರುವುದು ಮಾತ್ರ ನಿಜಕ್ಕೂ ನಾಚಿಕೆಗೇಡು. ನಿತ್ಯವೂ ಉತ್ತರ ಕರ್ನಾಟಕ ತತ್ತರಗೊಳ್ಳುತ್ತಿದ್ದು, ಸಾವು, ನೋವು ಸಂಭವಿಸುತ್ತಲೇ ಇದೆ. ಆದರೂ ಅತ್ತ ಕಡೆ ತಿರುಗಿ ಕೂಡ ನೋಡಲಿಲ್ಲ. ಸಾರ್ವಜನಿಕರ ಆಸ್ತಿಪಾಸ್ತಿ ಹಾಳಾದರೆ, ಅವರ ಸಾಕು ದನ, ಕುರಿಗಳು ಸಾವಿಗೀಡಾದರೆ, ಜನ ಬೀದಿಗೆ ಬಂದರೆ ಇವರಿಗೆ ನಷ್ಟ, ಕಷ್ಟ ಎನಿಸುವುದೇ ಇಲ್ಲ.
ಮಾತೆತ್ತಿದರೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಯಡಿಯೂರಪ್ಪ ರಾಜ್ಯಸರಕಾರದಿಂದ ಜನ ಸಾಮಾನ್ಯರ ಏಳಿಗೆಗೆ ಏನೆಲ್ಲಾ ಮಾಡಿದ್ದಾರೆ ಎಂದು ಪಟ್ಟಿ ಮಾಡಲಿ. ಪ್ರತಿಯೊಂದನ್ನು ‘ರಾಜಕೀಯ ಲಾಭ’ದ ದೃಷ್ಟಿಯಿಂದಲೇ ನೋಡುವ ಹಳದಿ ಕಣ್ಣಿನ ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ಬಿಜೆಪಿ ಅಕಾರಕ್ಕೆ ಬರಲು ತಮ್ಮನ್ನು ಕೈ ಹಿಡಿದಿದ್ದರು ಅದೇ ಉತ್ತರ ಕರ್ನಾಟಕದ ಮಂದಿ ಎನ್ನುವುದನ್ನು ಮರೆತಂತಿದೆ.
ಅಕಾರಕ್ಕೇರುವಾಗ
ರೈತರ ಹೆಸರಿನಲ್ಲಿ ಪ್ರಮಾಣ ವಚನ ಮಾಡಿದರು. ಅದೇ ಸಮಯದಲ್ಲಿ ಬರ ಬಂದು ರೈತರು ಸಂಕಷ್ಟದಲ್ಲಿದ್ದಾರೆಂದು ಮಾಧ್ಯಮಗಳು ಆಕ್ರೋಶ ವ್ಯಕ್ತಪಡಿಸಿದಾಗ ‘ಇನ್ನು ಜನ ಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುವುದೇ ನನ್ನ ಕೆಲಸ. ಹಾರ ತುರಾಯಿಗಳನ್ನು ನನಗೆ ಹಾಕಬೇಡಿ, ಅಂಥ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಬೇಡಿ’. ಎಂದ ಸಿಎಂ ಗೆ ಈಗ ತಾವು ಹೇಳಿದ ಮಾತು ಮರೆತುಹೋದಂತಿದೆ. ಆ ಕಾರಣಕ್ಕೇ ಜಲಪ್ರಳಯದಿಂದ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದರೂ ಯಡಿಯೂರಪ್ಪ ಮಾತ್ರ ಡಾಬಸ್ಪೇಟೆಯಲ್ಲಿ ಬೆಳ್ಳಿ ಕಿರೀಟ ತೊಟ್ಟುಕೊಂಡು, ಸನ್ಮಾನ ಮಾಡಿಸಿಕೊಳ್ಳಲು ಬೆಂಗಳೂರಿನಿಂದ ತೆರಳಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿದೆಯಾ...?ನೆರೆಯ ಆಂಧ್ರ ಪ್ರದೇಶದಲ್ಲೂ ಕೂಡ ಪ್ರವಾಹ ಬಂದಿದೆ. ಆದರೆ ಅಲ್ಲಿನ ಸರಕಾರ ಸ್ಪಂದಿಸಿದ ರೀತಿಗೂ ಕರ್ನಾಟಕದ ಬಿಜೆಪಿ ಸರಕಾರ ಸ್ಪಂದಿಸಿದ ರೀತಿ ಎರಡನ್ನೂ ನೋಡಿದರೆ ಇದು ನಿಜಕ್ಕೂ ಮಾನವೀಯತೆ ಮರೆತ ಸರಕಾರ ಎಂದು ಎನಿಸದಿರದು.
೨೦೦೮-೦೯ನೇ ಸಾಲಿನಲ್ಲಿ ಸಿಆರ್ಎಫ್ ಯೋಜನೆಯಡಿ ೯೯.೫೫ ಕೋಟಿ ರೂ. (ರಾಜ್ಯದ ಪಾಲು ೩೩.೧೮ಕೋಟಿ.), ಎನ್ಸಿಸಿಎಫ್ ಅನುದಾನ ೧೦೯.೯೧ ಕೋಟಿ ರೂ. (ರಾಜ್ಯದ ಪಾಲು ೭೭.೩೩ ಕೋಟಿ ರೂ.) ಸೇರಿ ಪ್ರಕೃತಿ ವಿಕೋಪ ಪರಿಹಾರ ನಿಯಡಿ ೩೨೧.೮೩ ಕೋಟಿ ರೂ. ಬಳಕೆ ಮಾಡಬೇಕಿದೆ. ೨೦೦೯-೧೦ನೇ ಸಾಲಿನಲ್ಲಿ ಸಿಆರ್ಎಫ್, ಎನ್ಸಿಸಿಎಪ್ ೧೫೩.೫೧ ಕೋಟಿ ರೂ. ಬಳಕೆಯಾಗಬೇಕಿದೆ.
ಆದರೆ ಈ ಹಣದಲ್ಲಿ ಒಂದು ಪೈಸೆ ಕೂಡ ಬಳಕೆ ಮಾಡಿಕೊಂದಿಲ್ಲ. ಆದರೆ ಕೇಂದ್ರದ ಕಡೆ ಕೈ ತೋರಿಸಿ ಪ್ರತಿಪಕ್ಷದ ನಾಯಕರಂತೆ ವರ್ತಿಸುವುದು ಇನ್ನೂ ನಿಂತಿಲ್ಲ. ಇದು ನಿಜಕ್ಕೂ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ವರ್ತಿಸುವವರ ಲಕ್ಷಣವೇ?ಮಂತ್ರಾಲಯದಲ್ಲಿ ಸ್ವಾಮೀಜಿಯೊಬ್ಬರು ಜಲ ಪ್ರವಾಹಕ್ಕೆ ಸಿಕ್ಕು ೨ನೇ ಮಹಡಿ ಏರಿ ಕುಳಿತಿದ್ದಾರೆ ಎಂಬ ಸುದ್ದಿ ಬಂದ ನಂತರ ಹೋಗಿ ದಿಢೀರ್ ಸಭೆ ಕರೆದು ಬೆಂಗಳೂರಿನಿಂದ ಎರಡು ಹೆಲಿಕ್ಯಾಪ್ಟರ್ ಕಳುಹಿಸಿದ್ದಾರೆ ಮುಖ್ಯಮಂತ್ರಿ. ಇವರಿಗೆ ಸ್ವಾಮೀಜಿಗಳು ಮಾತ್ರ ಮನುಷ್ಯರಂತೆ ಕಾಣಿಸುತ್ತಾರೆಯೇ? ಜನ ಸಾಮಾನ್ಯರದ್ದು ಕೂಡ ಜೀವ ಎಂದು ಒಮ್ಮೆಯೂ ಅನ್ನಿಸುವುದಿಲ್ಲವೆ ? ಹೋರಾಟದ ಹಾದಿಯಲ್ಲೇ ಬೆಳದು ಬಂದ ಮುಖ್ಯಮಂತ್ರಿ ಯಡಿಯೂರಪ್ಪ , ಈ ರೀತಿ ಅಮಾನವೀಯವಾಗಿ ವರ್ತಿಸುವ ಬದಲು ಗೌರವಯುತವಾದ ಆ ಸ್ಥಾನಕ್ಕೆ ರಾಜೀನಾಮೆ ಗೀಚಿ, ತಾವೇ ಒಂದು ‘ಮಠ’ ಕಟ್ಟಿ ಅಲ್ಲಿಗೆ ತಾವೇ ಸ್ವಾಮೀಜಿಯಾಗಿ ಕುಳಿತುಕೊಳ್ಳುವುದು ಒಳ್ಳೆಯದು. ಆಗಲಾದರೂ ಕೆಲವರಿಗೆ ಒಳ್ಳೆಯದಾದರೂ ಆಗಬಹುದು...
Thursday, September 10, 2009
ಪುಸ್ತಕ ಪ್ರೀತಿ ಸಾರಿದ ಮದುವೆ
ಸಾಮಾನ್ಯವಾಗಿ ‘ಮದುವೆ’ ಎಂಬ ಮಧುರ ಪದ ಕೇಳುತ್ತಿದ್ದ ಹಾಗೆಯೇ ಬಹಳಷ್ಟು ಜನರ ಮೈ ರೋಮಾಂಚನಗೊಳ್ಳುತ್ತದೆ. ಮತ್ತೆ ಕೆಲಸವರ ಮನ ಮುಂಜಾನೆಯ ಮಂಜಿನ ಹಾಗೆ ತಂಪಾಗುತ್ತದೆ. ಮತ್ತೆ ಕೆಲವರಿಗೆ ಕನಸುಗಳು ಗರಿಗೆದರುತ್ತವೆ. ಮನಸಿನ ಹಾಸಿಗೆಯಲ್ಲಿ ಹೂಮಳೆ ಚೆಲ್ಲುತ್ತದೆ. ಹೀಗೆ ಒಬ್ಬೊಬ್ಬರ ಮನದಲ್ಲು ಒಂದೊಂದು ಭಾವನಾ ಲಹರಿ ಪಾರಿಜಾತವಾಗಿ ಹಾರಾಡುತ್ತದೆ.ಆದರೆ ಮದುವೆ ಜೀವನದ ಒಂದು ಮಧುರ ಕ್ಷಣ ನಿಜ, ಆದರೆ ಅದು ಆಡಂಭರವಾಗಿಯೇ ಇರಬೇಕು ಎಂದು ಬಹಳಷ್ಟು ಜನ ಇಷ್ಟಪಡುತ್ತಾರೆ. ಮದುವೆಗೆ ಬಂದವರಿಗೆ ಒಳ್ಳೊಳ್ಳೆ ಉಡುಗೊರೆ ಕೊಡಬೇಕು ಎಂದು ಸಾಮಾನ್ಯ ವರ್ಗದವರೂ ಅಂದುಕೊಳ್ಳುವುದು ಸಾಮಾನ್ಯ. ಇನ್ನು ಉಳ್ಳವರಂತೂ ಅದೇ ತಮ್ಮ ಶ್ರೀಮಂತಿಕೆಯ ತೋರಿಕೆಗೆ ‘ಸಾಕ್ಷಿ’ಯಾಗಲಿ ಎಂದುಕೊಳ್ಳುತ್ತಾರೆ.
ಜೀವನದ ಆ ಸುಮಧುರ ಗಳಿಗೆಯನ್ನು ಜೀವನ ಪೂರ್ತಿ ತಾವು ಮಾತ್ರವಲ್ಲ, ಇತರರೂ ನೆನಪಿನಲ್ಲಿಟ್ಟುಕೊಂಡು ಬದುಕುವಂತೆ ಸ್ಪೂರ್ತಿ ನೀಡುವ ಮಂದಿ ಬಹಳ ವಿರಳ. ಅಂಥವರ ಸಾಲಿನಲ್ಲಿದ್ದಾರೆ ಸ್ನೇಹಿತ ಕೆ.ವಿ.ಧರಣೇಶ್. ಸದ್ಯಕ್ಕಿವರು ‘ವಿಜಯ ಕರ್ನಾಟಕ’ದಲ್ಲಿ ಪೇಜಿನೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೊನ್ನೆ ಹಾಗೇ ಸುಮ್ಮನೆ ಕೈಗೆ ಸಿಕ್ಕ ಒಂದು ಚಿಕ್ಕ ಹೊತ್ತಿಗೆಯನ್ನು ಕಣ್ಣಾಯಿಸಿದಾಗ ನಿಜಕ್ಕೂ ಆಶ್ಚರ್ಯ ! ಆ ಕಾರಣಕ್ಕಾಗಿಯೇ ಸುಮಾರು ೯ ವರ್ಷಗಳ ಹಿಂದಿನ ಘಟನೆಯೊಂದನ್ನು ಇಲ್ಲಿ ಮೆಲುಕು ಹಾಕುತ್ತಿದ್ದೇನೆ.
ನನ್ನ ಕೈಗೆ ಸಿಕ್ಕ ಆ ಕಿರು ಹೊತ್ತಿಗೆಯ ಹೆಸರು “ವಚನ ತಾಂಬೂಲ". ಮದುವೆಗೆ ಬರುವ ಎಲ್ಲರಿಗೂ ಸಾಮಾನ್ಯವಾಗಿ ಅಡಕೆ, ಎಲೆ, ಸುಣ್ಣ ಅಥವಾ ಒಂದು ಕಾಯಿಯನ್ನು ಉಡುಗೊರೆಯಾಗಿ ನೀಡುವುದು ಸಾಮಾನ್ಯ. ಇದು ಸಾಮಾನ್ಯ ವರ್ಗದ ಕುಟುಂಬಗಳ ಕಾರ್ಯವೈಖರಿ. ಆದರೆ ಶ್ರೀಮಂತರ ಮಾತು ಬೇರೆ ಬಿಡಿ.ಇಲ್ಲಿ ಧರಣೇಶ್ ಕೂಡ ಶ್ರೀಸಾಮಾನ್ಯ ಕುಟುಂಬದಿಂದಲೇ ಬಂದವರು. ಆದರೆ ೨೦೦೦ನೇ ಇಸ್ವಿ ಸೆಪ್ಟಂಬರ್ ೬ರಂದು ಚಿತ್ರದುರ್ಗದಲ್ಲಿ ನಡೆದ ತಮ್ಮ ಮದುವೆಯಲ್ಲಿ ಇವರು ಉಡುಗೊರೆ ನೀಡಿದ್ದು ಇದೇ ‘ವಚನ ತಾಂಬೂಲ’ವನ್ನು... ನಿಜಕ್ಕೂ ನಾವೆಲ್ಲಾ ಈಗ ಪುಸ್ತಕ ಪ್ರೀತಿ ಕಡಿಮೆಯಾಗುತ್ತಿದೆ. ಸಿನಿಮಾ, ದೂರದರ್ಶನ ಹಾಗೂ ಪಾಶ್ಚಾತ್ಯೀಕರಣದ ಸಾಂಸ್ಕೃತಿಕ ದಾಳಿಗೆ ಸಿಕ್ಕಿ ಯುವಜನತೆ ದಿಕ್ಕು ತಪ್ಪುತ್ತಿದೆ ಎಂದೆಲ್ಲಾ ಬೊಬ್ಬೆ ಹೊಡೆಯುತ್ತೇವೆ. ಆದರೆ ಅದರ ಉಳಿವಿಗೆ ಮಾಡಬೇಕಾದದ್ದು ಏನು ? ಎಂಬುದನ್ನು ಒಂ
ಈ ಕಿರು ಹೊತ್ತಿಗೆಯಲ್ಲಿ ಆರಂಭದಲ್ಲಿಯೇ ಮುರುಘ ರಾಜೇಂದ್ರ ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಮಹಾಸ್ವಾಮೀಜಿಯ ಲೋಕ ಸಂದೇಶವಿದೆ. ಬಸವ ತತ್ತ್ವದ ಸೂತ್ರಗಳಿವೆ. ಚನ್ನಬಸವಣ್ಣ, ಶರಣೆ ಸತ್ಯಕ್ಕ, ಶರಣೆ ಆಯ್ದಕ್ಕಿ ಲಕ್ಕಮ್ಮ, ಬಸವಣ್ಣ, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ, ಷಣ್ಮುಖ ಶಿವಯೋಗಿಗಳು, ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ಮೊಗ್ಗೆಯ ಮಾಯಿದೇವರು, ಅಲ್ಲಮ ಪ್ರಭುದೇವರು, ಸರ್ವಜ್ಞನವರ ವಚನಗಳನ್ನು ಮುದ್ರಿಸಿ ಕಿರು ಹೊತ್ತಿಗೆ ಮಾಡಿ, ಎಲ್ಲರಿಗೆ ಹಂಚಲಾಗಿದೆ. ಇದು ನಿಜಕ್ಕೂ ಅರ್ಥಪೂರ್ಣ ನಿಲುವು. ಅಂದ ಹಾಗೆ ಅವರ ಕೈ ಹಿಡಿದಿದ್ದು ಸಿ.ಜೆ.ಪದ್ಮಾ. ಪುಸ್ತಕ ಪ್ರೀತಿಯನ್ನು ಸದ್ದಿಲ್ಲದೆ ಪಸರಿಸಿದ ಈ ದಂಪತಿ ಶೀಘ್ರದಲ್ಲಿಯೇ ದಶಮಾನೋತ್ಸವ ಆಚರಿಸಲಿದ್ದಾರೆ... ಅವರಿಗೆ ಮತ್ತೊಂದು ಹ್ಯಾಟ್ಸ್ ಆಫ್...
Sunday, September 6, 2009
ಬಂದಿದೆ ರೆಡಿಮೇಡ್ ‘ಹಸಿರು ಹಾಸಿಗೆ’
ಕೃಷಿ ಕ್ಷೇತ್ರದಲ್ಲಿ ಇದೊಂದು ಹೊಸ ಆವಿಷ್ಕಾರ. ಒಂದೆಡೆ ಹಸಿರು ಮಾಯವಾಗುತ್ತಿದ್ದರೆ ಈಗಿನ ದುನಿಯಾಗೆ ಅನುಕೂಲವಾಗುವ ಹಾಗೆ ಹಸಿರು ಬೆಳೆಸುವ ಹೊಸ ಆವಿಷ್ಕಾರಕ್ಕೆ ಕೇಂದ್ರ ನಾರು ಮಂಡಳಿ ಕೈ ಹಾಕಿದೆ. ಆಧುನಿಕತೆಗೆ ಎಷ್ಟೇ ಒಗ್ಗಿಕೊಂಡಿದ್ದರೂ ಮನುಷ್ಯನಿಗೆ ಹಸಿರಿನಿಂದ ದೂರ ಇರುವ ಸಾಮರ್ಥ್ಯವೇ ಇಲ್ಲ ಎಂಬುದು ನಿಶ್ಚಿತ. ಅದನ್ನು ಮನಗಂಡಿರುವ ಇಲ್ಲಿನ ಸಂಶೋಧಕರು ಆಧುನಿಕ ಜಗತ್ತಿಗೆ ಸರಿ ಹೊಂದುವಂಥ ‘ಹುಲ್ಲಿನ ಹಾಸಿಗೆ’ ತಯಾರಿಸಿದ್ದಾರೆ!ಆಶ್ಚರ್ಯ ಆಗುತ್ತಿದೆಯೇ ? ನಿಜ, ಇದು ರೆಡಿಮೇಡ್ ಹಸಿರು ಹಾಸಿಗೆ (Green Lawn). ಹಸಿರು ನೆಲವೇ ಕಾಣದ ಈ ದಿನಮಾನಗಳಲ್ಲಿ ಪ್ರತಿ ಮನೆಗೂ ಹೊಂದಿಕೊಳ್ಳುವಂಥ ನೈಸರ್ಗಿಕ ಹಸಿರು ಹಾಸಿಗೆಯನ್ನು ತಯಾರಿಸುವ ತಂತ್ರeನವನ್ನು ನಾರು ಮಂಡಳಿಯ ಸಂಶೋಧಕರು ಕಂಡು ಹಿಡಿದಿದ್ದು, ಅದಕ್ಕೆ ಪೇಟೆಂಟ್ ಕೂಡ ಪಡೆದಿದ್ದಾರೆ. ಕೇರಳದ ಯಾಲಪಿಯಲ್ಲಿರುವ ಕೇಂದ್ರೀಯ ನಾರು ಸಂಶೋಧನ ಸಂಸ್ಥೆಯಲ್ಲಿ ಪ್ರಥಮ ಬಾರಿಗೆ ಈ ಆವಿಷ್ಕಾರ ಮಾಡಲಾಗಿದ್ದು, ಈಗ ಕರ್ನಾಟಕದಲ್ಲೂ ಇದರ ಪ್ರಯೋಗವಾಗಿದೆ. ಈಗಾಗಲೇ ಮೂವರು ಇದರ ಸೌಲಭ್ಯ ಪಡೆದಿದ್ದಾರೆ.
ಭಾರತದಲ್ಲಿ ನ್ಯಾಷನಲ್ ರೂರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಹಾಗೂ ನಾರು ಮಂಡಳಿ ಎರಡೂ ಕಡೆ ಇದನ್ನು ಹೇಗೆ ರೂಪಿಸುವುದು ಎಂಬುದರ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಹಾಸಿಗೆ ರೆಡಿ ಮಾಡಲು ಕೆಲವು ತಂತ್ರeನಗಳಿವೆ. ಅದನ್ನು ಅದೇ ಮಾದರಿಯಲ್ಲಿ ತಯಾರಿಸಬೇಕು. ಹೀಗಾಗಿ ಇದಕ್ಕೆ ಪರವಾನಗಿ ಪಡೆದು ಆರ್ಥಿಕ ಒಪ್ಪಂದಕ್ಕೆ (MOU)ಸಹಿ ಹಾಕಬೇಕು. ಜತೆಗೆ ತರಬೇತಿಯನ್ನು ಪಡೆಯಬೇಕು. ಅದನ್ನು ನಾರು ಮಂಡಳಿ ಹಾಗೂ ರೂರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಮಾಡುತ್ತಿವೆ.
ಇದರಿಂದ ಅ
ನುಕೂಲಗಳು:ನಾರು ಹಾಗೂ ನಾರಿನ ಪುಡಿಯನ್ನು ಹಾಸಿಗೆ ರೂಪದಲ್ಲಿ ಬಳಸಿ ಹಸಿರನ್ನು ಬೆಳೆಸಲಾಗುತ್ತದೆ. ಇದರಲ್ಲಿ ಗರಿಕೆ ಸೇರಿದಂತೆ ಎಲ್ಲ ರೀತಿಯ ಹುಲ್ಲು ಹಾಸಿಗೆಯನ್ನೂ ತಯಾರಿಸಬಹುದು. ಒಂದೇ ಬಾರಿ ಹಲವು ಹಂತಗಳಲ್ಲಿ ಹಾಸಿಗೆ ತಯಾರಿಸಬಹುದು. ಇದರ ಮೇಲೆ ಹುಲ್ಲುಬೆಳೆಯಲು ಕನಿಷ್ಠ ಒಂದರಿಂದ ಒಂದೂವರೆ ತಿಂಗಳು ಬೇಕು. ಈ ಹಾಸಿಗೆಯಲ್ಲಿ ಹುಲ್ಲು ಬೆಳೆದ ನಂತರ ಅದನ್ನು ಬೆಡ್ ಶೀಟ್ ರೀತಿ ಮಡಚಿ ಇಡಬಹುದು. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಲೀಸಾಗಿ ಇದನ್ನು ಸುತ್ತಿಕೊಂಡು ಹೋಗಬಹುದು ಅಥವಾ ಸ್ಥಳಾಂತರಿಸಬಹುದು. ಜತೆಗೆ ಯಾವ ಸ್ಥಳಕ್ಕೆ ಬೇಕೋ ಹಾಗೆ ಈ ಹುಲ್ಲನ್ನು ಕಟ್ ಮಾಡಿ ಜೋಡಿಸಬಹುದು. ಮನೆ ಮುಂದೆ ಈ ಹಾಸಿಗೆ ಜೋಡಿಸಿದರೆ ಇಡೀ ಮನೆ ಬೃಂದಾವನ !
ಈ ಹುಲ್ಲಿನ ಹಾಸಿಗೆಯನ್ನು ಕೇವಲ ಸಾಮಾನ್ಯ ಮನೆಗಳ ಮುಂದೆ ಹೊರಾಂಗಣಕ್ಕೆ ಮಾತ್ರವಲ್ಲ, ಮಹಡಿ ಮನೆಯಲ್ಲೂ ಅಲಂಕಾರಕ್ಕಾಗಿ ಬಳಸಬಹುದು. ಕಾಲುದಾರಿಯಲ್ಲೂ ಬಳಸಬಹುದು. ಮನೆಯ ಚಾವಣಿಗೆ ಕೂಡ ಬಳಸಬಹುದು. ಇದರಿಂದ ಮನೆ ಕೂಡ ತಂಪಾಗಿರುತ್ತದೆ. ರೆಸ್ಟೋರೆಂಟ್, ಆಸ್ಪತ್ರೆ ಹೀಗೆ ಎಲ್ಲೆಂದರೆ ಇದನ್ನು ಉಪಯೋಗಿಸಬಹುದು. ಎಲ್ಲ ಋತುಗಳಿಗೂ ಹೊಂದಿಕೊಳ್ಳುವ ಈ ಹುಲ್ಲಿನ ಹಾಸಿಗೆಯನ್ನು ಸುಲಭವಾಗಿ ಪೋಷಣೆ ಮಾಡಬಹುದು. ಜತೆಗೆ ಇದು ಶೇ. ೮೦೦ರಷ್ಟು ತಂಪಾಗಿರುವುದರಿಂದ ಸುತ್ತಮುತ್ತಲಿನ ವಾತಾವರಣ ಕೂಡ ತಂಪಾಗಿರುತ್ತದೆ.
ಹಾಸಿಗೆ ಬೆಳೆಸುವ ವಿಧಾನ:
ನಾರನ್ನು ಮೊದ
ಲು ತಾಂತ್ರ್ರಿಕವಾಗಿ ಜೋಡಿಸಿಕೊಂಡು (ನೀಡಲ್ ಫಿಲ್ಟ್ ಮಾಡಿ) ಒಂದು ಸ್ಥಳದಲ್ಲಿ ಅದನ್ನು ಸಮನಾಗಿ ಹರಡಿಕೊಳ್ಳಬೇಕು. ಅದರ ಮೇಲೆ ಜಿಯೋಟೆಕ್ಸೆಲ್ಸ್ ( ತಿಳಿ ಮಣ್ಣಿನಾಕಾರದ ನಾರು ಪುಡಿ) ಅದರ ಮೇಲೆ ಪಿಥ್(ಸಂಸ್ಕರಿಸಿದ ನಾರು ಪುಡಿ) ಹಾಕಿ, ಸ್ವಲ್ಪ ನೀರು ಚಿಮುಕಿಸಬೇಕು. ಅದರಲ್ಲಿ ನಿಮಗೆ ಯಾವ ಹುಲ್ಲು ಬೇಕೋ ಆ ಹುಲ್ಲಿನ ಬೀಜ ಬಿತ್ತಬೇಕು, ಇಲ್ಲವೇ ಬೇರು ಹೊಂದಿರುವ ಹುಲ್ಲಿನ ಚೂರುಗಳನ್ನು ನೆಟ್ಟರೂ ಸಾಕು. ಅನಂತರ ಇದಕ್ಕೆ ಪ್ರತಿನಿತ್ಯ ನೀರು ಚಿಮುಕಿಸುತ್ತಿರಬೇಕು. ಹೀಗೆ ಮಾಡಿದರೆ ಕೇವಲ ಒಂದೂವರೆ ತಿಂಗಳಿನಲ್ಲಿ ನಿಮಗೆ ಹುಲ್ಲಿನ ಹಾಸಿಗೆ ತಯಾರಾಗುತ್ತದೆ. ಹುಲ್ಲಿನ ಬೇರುಗಳು ಕೂಡ ಭದ್ರವಾಗುತ್ತವೆ. ಆಗ ನೀವು ಯಾವ ಆಕಾರಕ್ಕೆ ಬೇಕೋ ಆ ಆಕಾರಕ್ಕೆ ಸಲೀಸಾಗಿ ಕಟ್ ಮಾಡಿ ಅದನ್ನು ನಿಮಗೆ ಬೇಕಾದ ಸ್ಥಳಗಳಲ್ಲಿ ಜೋಡಿಸಿಕೊಳ್ಳಬಹುದು.
Thursday, September 3, 2009
ಉಳ್ಳವರಿಗೆ ದೇವರು ಹತ್ತಿರವಂತೆ! ಹೌದಾ...?
ಇವತ್ತು ದೇವರ ಹೆಸರು ಹೇಳಿಕೊಂಡು ಅದೆಷ್ಟೋ ಮಂದಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ದೇವರಿದ್ದಾನೋ ಇಲ್ಲವೋ ಬೇರೆ ವಿಚಾರ, ಆದರೆ ಅವನ ಹೆಸರು ಹೇಳಿಕೊಂಡು ಬದುಕುವವರು ಮಾತ್ರ ‘ಸೊಂಪಾಗಿದ್ದಾರೆ’. ಮೊನ್ನೆ ಸಣ್ಣದೊಂದು ಪ್ರವಾಸಕ್ಕೆಂದು ಬೇರೆ ಕಡೆಗೆ ಹೋಗಿದ್ದೆ. ಆ ಸ್ಥಳದಲ್ಲಿ ಒಬ್ಬ ಆತ್ಮೀಯ ಗೆಳೆಯನಿದ್ದ. ಅವನ ಮನೆಗೆಂದು ಹೋದಾಗ ಅವನು ತನ್ನ ಹಬ್ಬದ ದಿನವಾಗಿದ್ದರಿಂದ ತನ್ನ ಎಳೆಯ ಮಕ್ಕಳಿಗೆ ಪ್ರಸಾದ ತರಬೇಕೆಂದು ಒಂದು ‘ಭವ್ಯ ದೇವಸ್ಥಾನ’ಕ್ಕೆ ಕರೆದುಕೊಂಡು ಹೋಗಿದ್ದ.ದೇವರು ಎಂದರೆ ನನಗೆ ಮೊದಲಿನಿಂದಲೂ ದೂರ. ಆದರೆ ‘ಆ ದೇವಸ್ಥಾನದಲ್ಲಿ ಶೂದ್ರರೇ ಪೂಜೆ ಮಾಡ್ತಾರೆ. ಬೇಕಾದವರು ಪೂಜೆ ಮಾಡಿಸ್ಕೊಳ್ಳಬಹುದು, ಇಲ್ಲದಿದ್ರೆ ಸುಮ್ನೆ ದೇವಾಲಯ ಸುತ್ತಿಕೊಂಡು ಬರಬಹ್ದು, ದೇವಸ್ಥಾನದ ಸುತ್ತ ಉತ್ತಮ ವಾತಾವರಣ ನಿರ್ಮಾಣ ಮಾಡಲಾಗಿದೆ. ಅಲ್ಲಿ ಕೊಳ ಇದೆ, ಸುಂದರ ಪಾರ್ಕ್ ಇದೆ’ ಎಂದು ಅವನು ತಿಳಿಸಿದ. ಜತೆಗೆ ಆ ದೇವಸ್ಥಾನದಿಂದ ಮಕ್ಕಳಿಗೆ ಪ್ರಸಾದ ತರಬೇಕೆಂಬುದು ಅವನ ತಾಯಿಯ ಒತ್ತಾಸೆ ಕೂಡ ಆಗಿತ್ತು. ಆದ್ದರಿಂದ ಅವನು ಹೋಗಲೇಬೇಕಿತ್ತು. ಅವನ ಒತ್ತಾಯ ಹಾಗೂ ಆತ ಹೇಳಿದ ಕೆಲವು ಮಾತುಗಳಿಂದ ಕುತೂಹಲ ಶುರುವಾಯಿತು. ಸರಿ ಇಬ್ಬರೂ ಹೋದೆವು.
ದೇವಸ್ಥಾನದಲ್ಲಿ ಮ
ಕ್ಕಳ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಲು ಅವನು ರಶೀದಿ ಖರೀದಿಸಿದ. ಆರಂಭದಲ್ಲೇ ಅವನು ಹೇಳಿದ ಮಾತು ಅಲ್ಲಿ ಸುಳ್ಳಾಗಿತ್ತು. ಅಷ್ಟೆಲ್ಲಾ ಹೇಳಿದ ಅವನೇ ಹೋಗಿ ಹಣ ಕೊಟ್ಟು ವಿಶೇಷ ಪೂಜೆ ಮಾಡಿಸಿದ್ದ. ದೇವಸ್ಥಾನ ಸುಂದರ ಹಾಗೂ ಪ್ರಶಾಂತವಾಗಿದ್ದರಿಂದ ಸ್ವಲ್ಪ ಸುತ್ತಾಡುತ್ತಿದೆ. ಅವನು ಪ್ರಸಾದಕ್ಕಾಗಿ ಸರದಿ ಸಾಲಿನಲ್ಲಿ ನಿಂತಿದ್ದ. ಅಲ್ಲಿ ನವಗ್ರಹ ದೇವತೆಗಳು, ಅನ್ನಪೂರ್ಣೇಶ್ವರಿ, ವಿಘ್ನ ನಿವಾರಕ ಗಣೇಶ, ಶಿವ ಪಾರ್ವತಿ, ಶಾರದೆ ಹೀಗೆ ಎಲ್ಲ ಬಗೆಯ ದೇವಾನು ದೇವತೆಗಳಿದ್ದರು!ಅಷ್ಟು ಸಾಲದೆಂಬಂತೆ ದೇವಾಲಯದ ಬಳಿ ಪಾರ್ಕ್ ಹಾಗೂ ಕೊಳಗಳಿದ್ದವು. ಅವು ತುಂಬಾ ಸುಂದರವಾಗಿದ್ದವು. ಮಕ್ಕಳಿಗಂತೂ ಅಲ್ಲಿ ಹೋದರೆ ಹಬ್ಬ. ಇವೆಲ್ಲದರ ಜೊತೆಗೆ ದೇವಸ್ಥಾನದ ಹಿಂದೆ ಬಡವರಿಗಾಗಿಯೇ ಒಂದು ವಿವಾಹ ಮಂಟಪ, ಶ್ರೀಮಂತರಿಗಾಗಿ ಪಕ್ಕದಲ್ಲಿ ಮತ್ತೊಂದು ಮಂಟಪ. ಇದೂವರೆಗೆ ಕಂಡ ಹಾಗೆ ಬಹುತೇಕ ಕಡೆಗಳಲ್ಲಿ ದೇವಸ್ಥಾನ ಅಥವಾ ಮಠಗಳನ್ನು ನಿರ್ಮಾಣ ಮಾಡಿದರೆ ಹಣ ಗಳಿಕೆಗಾಗಿಯೇ ಅಲ್ಲೊಂದು ‘ಕಲ್ಯಾಣ’ ಮಂಟಪ ಇದ್ದೇ ಇರುತ್ತದೆ. ಆದರೆ ಇದು ಸ್ವಲ್ಪ ವಿಭಿನ್ನ. ಶ್ರೀಮಂತರ ಕಲ್ಯಾಣ ಮಂಟಪದಿಂದ ಬಂದ ಹಣದಿಂದ ಬಡವರ ಕಲ್ಯಾಣಕ್ಕಾಗಿಯೂ ತುಸು ಉಪಯೋಗಿಸುತ್ತಿದ್ದಾರೆ.
ಆದರೆ ಇಲ್ಲಿ ವಿಚಾರ ಅದಲ್ಲ, ತಿರುಪತಿಯಲ್ಲಿರುವಂತೆ ಎಲ್ಲ ದೇವಾಲಯಗಳಲ್ಲೂ ಹುಂಡಿಗೆ ಹೆಚ್ಚು ಹಣ ಹಾಕುವ ಶ್ರೀಮಂತರಿಗಾಗಿಯೇ ವಿಶೇಷ ಮಾರ್ಗ ಇದ್ದೇ ಇರುತ್ತವೆ. ಅದು ಕಾಣುವುದಿಲ್ಲ ಅಷ್ಟೆ. ಅವರಿಗೆಲ್ಲಾ ಅಲ್ಲಿ ದೇವರು ತುಂಬಾ ಬೇಗ ಸಿಗುತ್ತಾನೆ. ಆದರೆ ಬಡವರು ಮಾತ್ರ ಅದೇ ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ಕಾದು ನಿಂತು, ಬೆವರಿಳಿಸಿ ದೇವರ ದರ್ಶನ ಪಡೆಯಬೇಕು! ಕೇಳಿದ್ದಕ್ಕೆಲ್ಲ ತಥಾಸ್ತು ಎನ್ನುತ್ತಾನೋ ಇಲ್ಲವೋ ಅದು ಬೇರೆ ವಿಚಾರ. ಆದರೆ ಉಳ್ಳವರಿಗೆ ಹಾಗಿಲ್ಲ...
ಮೊನ್ನೆ ಅಲ್ಲಿ ಆಗಿದ್ದೂ ಅದೇ; ಸರದಿಯಲ್ಲಿ ನಿಂತಿದ್ದ ನನ್ನ ಸ್ನೇಹಿತನನ್ನು ಕಂಡ ಆ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು ಅವನನ್ನು ಕರೆದು ಮಾತನಾಡಿಸಿದರು. ‘ಇದೇನ್ ಸರ್ ನೀವು ಕ್ಯೂನಲ್ಲಿ ನಿಂತಿದ್ದೀರಿ. ನಂಗೆ ಒಂದ್ ಮಾತ್ ಹೇಳೋದ್ ಬ್ಯಾಡ್ವಾ... ಬನ್ನಿ..’ ಎಂದು ಅವನನ್ನು ಕರೆದುಕೊಂಡು ಗರ್ಭ ಗುಡಿಯ ಎದುರು ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಅವರು ಮತ್ತಷ್ಟು ಶ್ರೀಮಂತ ಸ್ನೇಹಿತರು ಆಗಮಿಸಿದ್ದಾರೆ. ಎಲ್ಲರೂ ಕೂಡಿ ಅಲ್ಲಿ ಮಾತಿಗಿಳಿದಾಗ ನನ್ನ ಸ್ನೇಹಿತ ‘ನಾನು ಹಾಗೂ ನನ್ನ ಸ್ನೇಹಿತ ಬಂದಿದ್ದೇವೆ’ ಎಂದಿದ್ದಾನೆ
. ತಕ್ಷಣ ‘ಅವರನ್ನು ಕರ್ಕೊಂಡು ಬನ್ನಿ...’ ಎಂದು ಕಳುಹಿಸಿದರು.ಬರುವುದಿಲ್ಲ ಎಂದರೂ ನನ್ನ ಗೆಳೆಯ ಬಿಡಲಿಲ್ಲ. ‘ನಾನು ಅವರ ಬಳಿ ಹೇಳಿಬಿಟ್ಟಿದ್ದೇನೆ, ನೀನು ಬರದೆ ಹೋದ್ರೆ ಅವರು ಬೇಸರ ಮಾಡಿಕೊಳ್ಳುತ್ತಾರೆ. ಬರಲೇಬೇಕು’ ಎಂದು ದುಂಬಾಲು ಬಿದ್ದ. ಅವನ ಕಾಟ ತಾಳದೆ ಹೋದರೆ ಹೇಳದೆ ಇದ್ದರೂ ವಿಶೇಷ ಪೂಜೆ! ಶುಲ್ಕ ಪಾವತಿ ಮಾಡದಿದ್ದರೂ ವಿಶೇಷ ಪ್ರಸಾದ, ಕುಂಕುಮ, ಹೂವು, ಹಣ್ಣು, ಕಾಯಿ ಹಾಕಿ ಪ್ಯಾಕ್ ಮಾಡಿ ಕೊಟ್ಟರು!! ನನ್ನ ಸ್ನೇಹಿತ ಶುಲ್ಕ ಪಾವತಿ ಮಾಡಿ ಪೂಜೆ ಮಾಡಿಸಿದ್ದಕ್ಕೆ ಒಂದು, ಅಧ್ಯಕ್ಷರ ಒತ್ತಾಯದ ಮೇರೆಗೆ ಮತ್ತೊಂದು ಪ್ರಸಾದ ಚೀಲ!! ಹೇಗಿದೆ ನೋಡಿ ಕಾಲ...ಇಂಥ ಮನೋಧರ್ಮ ಈಗ ಎಲ್ಲೆಲ್ಲೂ ತಾಂಡವವಾಡುತ್ತಿದೆ. ಶೂದ್ರರು ಪೂಜೆ ಮಾಡುವ ದೇವಸ್ಥಾನಗಳಲ್ಲಿಯೇ ಹೀಗಾದರೆ, ಪೂಜೆಯನ್ನೇ ಕುಲ ಕಸುಬಾಗಿಸಿಕೊಂಡು ಬಂದವರ ದೇವಸ್ಥಾನಗಳಲ್ಲಿ ಇನ್ನು ಹೆಂಗೆ..?
ಆದರೆ ನಮ್ಮ ಮುಂದೆ ಬಂದ ಅದೆಷ್ಟೋ ಬಡಪಾಯಿಗಳು ಪೂಜೆಗಾಗಿ ಕಾಯುತ್ತಿದ್ದವರು ಕಾಯುತ್ತಿಲೇ ಇದ್ದವು. ನಾವು ಮಾತ್ರ ಮನೆಯ ಕಡೆ ಹೆಜ್ಜೆ ಹಾಕಿದೆವು. ಆಗ ಕಾಡಿದ ಒಂದೇ ಪ್ರಶ್ನೆ ಉಳ್ಳವರಿಗೆ ದೇವರು ತುಂಬಾ ಹತ್ತಿರನಾ...?
Thursday, August 27, 2009
ಹಂದಿಜ್ವರ: ಯಾಕೆ ಈ ಥರ ?
ಕುಟುಂಬ ಸಮೇತ ಶಿವಮೊಗ್ಗಕ್ಕೆ ಹೊರಡಲೆಂದು ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಾಗ ಸರಿ ಸುಮಾರು ೧೦ ಗಂಟೆ. ರಾಷ್ಟ್ರದಾದ್ಯಂತ ಈಗ ಹಂದಿ ಜ್ವರ(ಎಚ್೧ಎನ್೧)ದ್ದೇ ಸುದ್ದಿ. ಸುಖಾ ಸುಮ್ಮನೆ ಸಾಯುವುದು ಎಂದರೆ ಯಾರಿಗೆ ತಾನೆ ಭಯ ಆಗುವುದಿಲ್ಲ? ಅದಕ್ಕೇ ರೈಲ್ವೆ ನಿಲ್ದಾಣಕ್ಕೆ ಬರುವ ಕೆಲವರು ಮುಖಕ್ಕೆ ಮಾಸ್ಕ್(ಮುಖಗವಸು) ಹಾಕಿಕೊಂಡಿದ್ದರು.ರೈಲ್ವೆ ನಿಲ್ದಾಣದಲ್ಲಿರುವ ಕೆಲವು ಮೆಡಿಕಲ್ ಸ್ಟೋರ್ಗಳಲ್ಲಿ ೧೦ರೂ.ಗೆ ಮಾರುವ ಮಾಸ್ಕ್ಗಳನ್ನು ೨೦, ೩೦ರೂ.ಗೆ ಮಾರಿಕೊಳ್ಳುತ್ತಿದ್ದರು. ಅದು ವ್ಯಾಪಾರಿ ವಂಚಕತನ. ಇರಲಿ, ಆದರೆ ಮಾಸ್ಕ್ ಹಾಕಿಕೊಂಡು ನಿಲ್ದಾಣದ ಒಳಗೆ ಹೋಗುವವರನ್ನು ಮಾಸ್ಕ್ ಹಾಕಿಕೊಳ್ಳದವರು ನೋಡುತ್ತಿದ್ದ ಹಾಗೂ ಗಮನಿಸುತ್ತಿದ್ದ ರೀತಿ ನೋಡಿದರೆ ನಿಜಕ್ಕೂ ಭಯವಾಗುತ್ತಿತ್ತು. ದೇಶ ವಿದೇಶಗಳ ಎಲ್ಲ ಮೀಡಿಯಾಗಳಲ್ಲಿಯೂ ಅದು ರೋಗ ತಡೆಗೆ ಬಳಸುವ ಒಂದು ವಿಧಾನ ಎಂದು ಬೊಬ್ಬೆ ಹೊಡೆಯುತ್ತಿದ್ದರೂ ಅವರೇನೋ ತಪ್ಪು ಮಾಡುತ್ತಿದ್ದಾರೆ ಎನ್ನುವಂತೆ ಜ
ನ ವಿಚಿತ್ರವಾಗಿ ನೋಡುತ್ತಿದ್ದರು. ಹತ್ತಿರ ಹೋದರೆ ಬೆದರಿದ ಹೋರಿಗಳಂತಾಡುತ್ತಿದ್ದರು !ಶಿವಮೊಗ್ಗದ ನಂತರ ಉಡುಪಿ, ಮಂಗಳೂರಿಗೂ ಹೋಗಬೇಕಾದ್ದರಿಂದ ನಾವು ಕುಟುಂಬವರೆಲ್ಲ ಮಾಸ್ಕ್ ತೆಗೆದುಕೊಂಡಿದ್ದೆವು. ಆದರೆ ಕಟ್ಟಿಕೊಂಡಿರಲಿಲ್ಲ. ನಾನು ಹಾಗೇ ಸುಮ್ಮನೆ ಕೆಲವರನ್ನು ಗಮನಿಸುತ್ತಲೇ ಸಾಗುತ್ತಿದ್ದೆ. ಮಾಸ್ಕ್ ಹಾಕಿಕೊಂಡವರು ಹತ್ತಿರ ಬಂದ ಕೂಡಲೇ ಬಹುತೇಕರು ಭಯ ಭೀತಿಯಿಂದ ಓಡುತ್ತಿದ್ದರು! ಇಲ್ಲವೇ ದೂರ ಸರಿದು ಮೂಗು ಮುಚ್ಚಿಕೊಳ್ಳುತ್ತಿದ್ದರು. ಮಾಸ್ಕ್ ಹಾಕಿಕೊಂಡವರು ಹತ್ತಿರ ಬಂದರೆ ಹಂದಿಜ್ವರ ಬರುತ್ತದೆ ಎಂಬಂತೆ ನಡೆದುಕೊಳ್ಳುತ್ತಿದ್ದರು. ಒಂದೇ ಮಾತಲ್ಲಿ ಹೇಳುಬೇಕೆಂದರೆ ಮಾಸ್ಕ್ ಹಾಕಿಕೊಂಡವರೆಲ್ಲ ಒಂದು ರೀತಿ ಅಲ್ಲಿ ಅಸ್ಪೃಶ್ಯರಾಗಿದ್ದರು!
ಹೀಗಿದ್ದಾಗಲೇ ಮಾಸ್ಕ್ ಹಾಕಿಕೊಂಡವನೊಬ್ಬ ಸಹಜವಾಗಿ ಸೀನಿಬಿಟ್ಟ. ದೂರದಲ್ಲಿ ಅವನನ್ನೇ ದುರುಗುಟ್ಟಿಕೊಂಡು ನೋಡುತ್ತಿದ್ದ ಕೆಲವರು ಕ್ಷಣಾರ್ಧದಲ್ಲಿ ನೆಲಕ್ಕೆ ಎಸೆದ ಚಂಡು ಪುಟಿದೇಳುವ ಹಾಗೆ ದೂರಕ್ಕೆ ಓಡಿದರು. ಅದನ್ನು ಕಂಡು ನಿಜಕ್ಕೂ ನಾನು ತಬ್ಬಿಬ್ಬಾದೆ. ಹಂದಿ ಜ್ವರ ಜನ ಸಾಮಾನ್ಯರಲ್ಲಿ ಅಷ್ಟೊಂದು ಭೀತಿ ಹುಟ್ಟಿಸಿದೆಯಾ? ಎಂಬ ಆತಂಕ ಒಂದೆಡೆಯಾದರೆ, ಇಷ್ಟೆಲ್ಲಾ ಜಾಗೃತಿ ಇದ್ದು, ಸಮಾಜ ಮುಂದುವರಿದಿದ್ದರೂ ಇಂಥ ನಡವಳಿಕೆಗೆ ಕಾರಣವೇನು? ಎಂಬ ಪ್ರಶ್ನೆ ಕಾಡತೊಡಗಿತು. ಆದರೆ ಉತ್ತರ ಇನ್ನೂ ಸಿಕ್ಕಿಲ್ಲ.
ಸರಕಾರಗಳು ಹಂದಿ ಜ್ವರ
ಕ್ಕೆ ಮದ್ದಿದೆ. ಅದು ಬರದಂತೆ ತಡೆಯಲು ಕೆಲವೇ ಮುಂಜಾಗೃತ ಕ್ರಮಗಳನ್ನು ಅನುಸರಿಸಿದರೆ ಸಾಕು, ಜತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಎಲ್ಲ ಮಾಧ್ಯಮಗಳಲ್ಲಿ ಪ್ರಚಾರ ಮಾಡುತ್ತಿವೆ. ಆದರೂ ಈ ರೀತಿಯ ಭಯವೇಕೆ? ಒಂದು ರೀತಿಯಲ್ಲಿ ಈ ಭಯಕ್ಕೆ ಮಾಧ್ಯಮಗಳೂ ಕಾರಣವೇ? ಎಂಬ ಅನುಮಾನ ನಿಜಕ್ಕೂ ಕಾಡುತ್ತಿದೆ. ವೈದ್ಯರು ‘ಇದೇನೂ ಅಂಥ ಭಯಾನಕ ಕಾಯಿಲೆ ಅಲ್ಲ, ಇದಕ್ಕೆ ಚಿಕಿತ್ಸೆ ಇದೆ’ ಎನ್ನುತ್ತಾರೆ. ಇಷ್ಟಾದರೂ ಮೀಡಿಯಾಗಳು ಹಂದಿ ಜ್ವರ ಭಯಾನಕ ಎನ್ನುವಂತೆ ಬಿಂಬಿಸಿ ನಿತ್ಯವೂ ವರದಿ ಮಾಡುತ್ತಿವೆ. ಇಲ್ಲಿ ಎಡವುತ್ತಿರುವುದು ಎಲ್ಲಿ ಎಂಬ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಸರಕಾರಗಳು ಕೂಡ ಸದ್ದಿಲ್ಲದೆ ಬಂದ ಈ ಕಾಯಿಲೆಗೆ ಮದ್ದು ಹಾಗೂ ಸೂಕ್ತ ಚಿಕಿತ್ಸೆಗೆ ವೈದ್ಯರ ನೇಮಕ ಮಾಡುವ ಬದಲು ‘ನಮ್ಮ ರಾಜ್ಯದಲ್ಲಿ ಇನ್ನೂ ಯಾರೂ ಸತ್ತಿಲ್ಲ, ಜ್ವರದ ತೀವ್ರತೆ ಇಲ್ಲ.’ಎಂದು ಹೇಳಿ ಆರಂಭದಲ್ಲಿ ಕೈ ತೊಳೆದುಕೊಂಡವು. ಆದರೆ ಈಗ ?ಯಾವುದೇ ಕಾಯಿಲೆಗಾದರೂ ಸರಿ, ಮುಂಜಾಗೃತೆ ವಹಿಸುವುದು ಒಳ್ಳೆಯದು. ಆದರೆ ಜಾಗೃತಿವಹಿಸುವ ಬದಲು ಅಂಥವರನ್ನು ನೋಡಿ ಇತರರು ಅಣಕಿಸುವಂತೆ ನೋಡುವುದು ಎಷ್ಟು ಸರಿ?
ಈ ಲೇಖನ ವಿಜಯ ಕರ್ನಾಟಕ ದಿನಪತ್ರಿಕೆಯ ಸಿಂಪ್ಲಿಸಿಟಿ ಪೇಜ್ನಲ್ಲಿ ಅಗಸ್ಟ್ ೨೭ರ ಸಂಚಿಕೆಯಲ್ಲಿ ಪ್ರಕಟಗೊಂಡಿದೆ. ಆದರೂ ಹಂದಿ ಜ್ವರದ ಬಗ್ಗೆ ಜನರಲ್ಲಿ ಇರುವ ಭಯ ಕೊಂಚವಾದರೂ ದೂರ ಮಾಡಲು ಇದು ಕೆಲವರಲ್ಲಾದರೂ ಅರಿವು ಮೂಡಿಸೀತು ಎಂಭ ಆಸೆಯಿಂದ ಇಲ್ಲಿ ಬಿತ್ತರಿಸಿದ್ದೇನೆ...
Monday, August 17, 2009
ನೀರಾ... ಏಕೆ ಈ ನಿರಾಸಕ್ತಿ...?
‘ನೀರಾದಿಂದ ಬೆಲ್ಲ ತಯಾರಿಸಬಹುದು. ಅದು ತುಂಬಾ ಸಿಹಿ. ಕಬ್ಬಿನ ಬೆಲ್ಲಕ್ಕಿಂತ ಈ ಬೆಲ್ಲ ಅತ್ಯಂತ ಉತ್ಕೃಷ್ಟದ್ದು. ನೀರಾದಿಂದ ತಯಾರಿಸುವ ಬೆಲ್ಲ ಸಿಹಿ ಹಾಗೂ ಸ್ವಾದಿಷ್ಟಯುಕ್ತ ಕೂಡ. ಇದರಿಂದ ಕೋಟಿಗಟ್ಟಲೆ ಹಣ ಸಂಪಾದಿಸಬಹುದು. ಎಲ್ಲಿ ತೆಂಗು ಬೆಳೆಯಲಾಗುತ್ತದೆಯೋ ಅಲ್ಲಿ ಅದರ ಬೆಲ್ಲ ತಯಾರಿಸಬಹುದು. ಇದು ಬಡತನ ನಿರ್ಮೂಲನೆಗೆ ದಾರಿ ಕೂಡ. ಆ ಮೂಲಕ ಈ ಧರೆಯಿಂದಲೇ ಬಡತನವನ್ನು ದೂರ ಮಾಡಬಹುದು’. -ಮಹಾತ್ಮ ಗಾಂಧಿ .
ಹೀಗೆ ಮಹಾತ್ಮ ಗಾಂಜಿ ಅವರೇ ನೀರಾ ಇಳಿಸುವುದನ್ನು ಸಮರ್ಥಿಸಿದ್ದರು. ಅಲ್ಲದೆ ಅವರ ‘ಹರಿಜನ’ ಪತ್ರಿಕೆಯಲ್ಲೂ ದಿ.ಗಜಾನನ ನಾಯಕ್ ಅವ
ರು ೧೯೩೯ರ ಜನವರಿ೭ರ ಸಂಚಿಕೆಯಲ್ಲಿ ‘ಗರ್ಭಿಣಿಯರು ವಾರಕ್ಕೆ ಎರಡ್ಮೂರು ಬಾರಿ ನೀರಾ ಸೇವಿಸಿದರೆ ಹುಟ್ಟುವ ಮಗು ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯಪೂರ್ಣವಾಗಿ ಹಾಗೂ ಸೌಂದರ್ಯಯುತವಾಗಿ ಹುಟ್ಟುತ್ತವೆ’ ಎಂದು ಬರೆದಿದ್ದರು.
ಇಷ್ಟೆಲ್ಲಾ ನಿದರ್ಶನಗಳು ಕಣ್ಮುಂದೆ ಇದ್ದರೂ ನಮ್ಮ ಸರಕಾರಗಳಿಗೆ ಮಾತ್ರ ನೀರಾವನ್ನು ಅಭಿವೃದ್ಧಿಪಡಿಸುವ ಬಗ್ಗೆಯಾಗಲಿ, ಅದರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡುವುದಕ್ಕಾಗಲಿ, ರೈತರ ಬದುಕನ್ನು ಆ ಮೂಲಕ ಹಸನು ಮಾಡುವುದಕ್ಕಾಗಲಿ ಕಾಳಜಿ ಇದ್ದಂತಿಲ್ಲ. ಕರ್ನಾಟಕದಲ್ಲಿ ‘ನೀರಾ ಚಳವಳಿ’ ನಡೆದು ೯ ವರ್ಷಗಳಾಗುತ್ತಿವೆ. ೨೦೦೧ರ ಅಕ್ಟೋಬರ್ ೯ಕ್ಕೆ ಇದೇ ಚಳವಳಿಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯ ಇಬ್ಬರು ರೈತರು ಬಲಿಯಾದರೂ ಸರಕಾರ ಮಾತ್ರ ಕೇವಲ ಭರವಸೆಯ ‘ಮತ್ತಿನಲ್ಲಿ’ಯೇ ತೇಲಾ(ಡುತ್ತಿದೆ.) ಡಿಸುತ್ತಿದೆ.
ಬೆಂಗಳೂರಿನ ಗಾಂ ಭವನದಲ್ಲಿ ಅದೇ ೨೦೦೧ರ ಆಗಸ್ಟ್೧೩ರಂದು ‘ನುಸಿಪೀಡೆ ಹಾಗೂ ನೀರಾ’ಎಂಬ ವಿಷಯದ ಕುರಿತು ನಡೆಸಿದ ರಾಷ್ಟ್ರೀಯ ಕಾರ್ಯಾಗಾರವೇ ನೀರಾ ಚಳವಳಿಗೆ ಪ್ರಮುಖ ಪ್ರೇರಣೆಯಾಯಿತು. ಚಳವಳಿಗೆ ಆದೇ ಆ.೨೭ರಂದು ಸರಕಾರ ಸ್ಪಂದಿಸುವ ನಾಟಕವಾಡಿ ಮೊಸಳೆ ಕಣ್ಣೀರು ಸುರಿಸಿ ನೀರಾ ಇಳಿಸಲು ಅನುಮತಿ ನೀಡುವುದಾಗಿ ತಿಳಿಸಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಅದರ ಫಲವಾಗಿಯೇ ಚಳವಳಿ ತೀವ್ರ ಸ್ವರೂಪ ಪಡೆಯಿತು. ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಅದೇ ವರ್ಷ ಅಕ್ಟೋಬರ್ ೯ರಂದು ನಡೆದ ಹೋರಾಟ ತೀವ್ರ ಸ್ವರೂಪ ಪಡೆದಾಗ ಸರಕಾರ ಉತ್ತರ ನೀಡಿದ್ದು ಬಂದೂಕಿನ ನಳಿಕೆಯ ಮೂಲಕ! ಅದಕ್ಕೆ ತಮ್ಮಯ್ಯ ಹಾಗೂ ಪುಟ್ಟನಂಜಯ್ಯ ಎಂಬ ಇಬ್ಬರು ಅಮಾಯಕ ರೈತರು ಬಲಿಯಾದರು. ಆದರೆ ಅವರ ಬಲಿದಾನವಾದರೂ ಸರಕಾರಗಳು ಇಂದಿಗೂ ಬಗ್ಗದಿರುವುದು ಇತ್ತೀಚಿನ ಸರಕಾರಗಳು ಎಷ್ಟರಮಟ್ಟಿಗೆ ಜನಪರ, ರೈತಪರವಾಗಿವೆ ಎಂಬುದನ್ನು ತೋರಿಸುತ್ತವೆ.
ಅಂದು ಅದೇ ಚಳವಳಿಯನ್ನು ರಾಜಕೀಯ ದಾಳವಾಗಿಸಿಕೊಂಡ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್, ಎಚ್.ಕೆ.ಪಾಟೀಲ್ ಹಾಗೂ ಮಾಜಿ ಪ್ರದಾನಿ ಎಚ್.ಡಿ.ದೇವೇಗೌಡರು ರಾಜಕೀಯವಾಗಿ ಮತ್ತಷ್ಟು ಬೆಳೆದುನಿಂತರು. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವಿಠಲೇನಹಳ್ಳಿಯಿಂದ ವಿಧಾನಸೌಧದ ವರೆಗೆ ಪಾದಯಾತ್ರೆ ಮಾಡಿದರು. ಆದರೆ ಅದರಿಂದ ಬಡ ರೈತರಿಗೆ ಮಾತ್ರ ಸಿಕ್ಕಿದ್ದು ಕೋರ್ಟ್ಗೆ ಅಲೆಯುವ ಕಾಯಕ. ಆ ರೈತರ ಮೇಲೆ ಹಾಕಲಾಗಿರುವ ಪ್ರಕರಣಗಳು ಇಂದಿಗೂ ಇತ್ಯರ್ಥವಾಗಿಲ್ಲ, ಜತೆಗೆ ಚಳವಳಿಯ ಆಶಯವೂ ಈಡೇರಿಲ್ಲ! ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪದ್ಮರಾಜ್ ಆಯೋಗವನ್ನು ನೇಮಕ ಮಾಡಲಾಯಿತು. ಆ ಆಯೋಗ ವರದಿ ತಯಾರಿಸಿ ಸರಕಾರಕ್ಕೆ ನೀಡಿತಾದರೂ ಅದರಲ್ಲಿ ಏನಿದೆ ಎಂಬುದು ಇಂದಿಗೂ ಬಹಿರಂಗವಾಗಲಿಲ್ಲ.
ಲಕ್ಷಾಂತರ ರೈತರ ಬದುಕನ್ನು ಹಸನುಗೊಳಿಸಿದ ಕಲ್ಪವೃಕ್ಷಕ್ಕೆ ನುಸಿ ಪೀಡೆ ಕಾಣಿಸಿಕೊಂಡ ನಂತರ ಅವರು ಕಂಡುಕೊಂಡಿದ್ದು ನೀರಾ ಉತ್ಪನ್ನವನ್ನು.
ನೀರಾ ಚಳವಳಿ ಆರಂಭವಾದ ನಂತರ ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ವಿಶ್ವವೇ ಬೆರಗಾಗುವ ರೀತಿಯಲ್ಲಿ ನೀರಾದಿಂದ ಸಕ್ಕರೆ ತಯಾರಿಸುವ ಪ್ರಶಿಕ್ಷಣ ತರಬೇತಿ ನೀಡಲಾಯಿತು. ಆದರೆ ಅನಂತರ ಅದಕ್ಕೆ ಮಾರುಕಟ್ಟೆ ಸಮಸ್ಯೆ ಹಾಗೂ ಸರಕಾರದ ನಿರುತ್ಸಾಹ ಎದುರಾಯಿತು. ಅಂದಿನಿಂದ ತೆಂಗು ಬೆಳೆಗಾರರು ಮತ್ತೆ ಅತಂತ್ರವಾದರು.
೨೦೦೦ರಿಂದ ೨೦೦೩ರ ವರೆಗೆ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಕಡೆ ಬೀದಿ ಬೀದಿಗಳಲ್ಲಿ ಚಳವಳಿ ನಡೆಸಿದರು. ನೀರಾ ಬಗ್ಗೆ ರೈತರು ಹಾಗೂ ಸರಕಾರದ ಕಣ್ಣು ತೆರೆಸಿದರು. ೨೦೦೮ರಲ್ಲಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಭಾರತೀಯ ಸತ್ಸಂಗ ಸಮಾಜದ ಅಧ್ಯಕ್ಷರಾದ ಶ್ರೀ ಭಕ್ತಿ ತೀರ್ಥ ಸ್ವಾಮೀಜಿ ಕೂಡ ನೀರಾಗೆ ಸಂಬಂಸಿದಂತೆ ಹೋರಾಟ ನಡೆಸಿದರು. ಕರ್ನಾಟಕ ನೀರಾ ಮಹಾಮಂಡಳಿ ರಚನೆಗೆ ಒತ್ತಾಯಿಸಿದ್ದರು. ಬಜೆಟ್ನಲ್ಲಿ ೧೦ ಕೋಟಿ ರೂ.ಗಳನ್ನು ನೀರಾ ಉತ್ಪಾದನೆ, ಅಭಿವೃದ್ಧಿ ಹಾಗೂ ವಹಿವಾಟಿಗಾಗಿಯೇ ಮೀಸಲಿಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ರಾಜ್ಯದ ಬಹುತೇಕ ಕಡೆಗಳಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಿದರು. ಆದರೂ ಸರಕಾರ ಮಾತ್ರ ಅಕಾರದ ಅಮಲಿನಲ್ಲಿ ಬೀದಿ ಬೀದಿಯಲ್ಲಿ ಹೆಂಡದಂಗಡಿ, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಮುಂದಾಗುತ್ತಿದೆಯೇ ಹೊರತು ನೀರಾ ಉತ್ಪಾದನೆಗೆ ಸಹಕಾರ ನೀಡಲೇ ಇಲ್ಲ.
ನೀರಾ ಉತ್ಪಾದನೆಯ ಹಿನ್ನೆಲೆ:
ಭಾರತದಲ್ಲಿ ಅನಾದಿ ಕಾಲದಿಂದಲೂ ನೀರಾ ತಯಾರಿಸಲಾಗುತ್ತಿದೆ. ಇದು ಆಯುರ್ವೇದದಲ್ಲಿ ಹೆಚ್ಚು ಚಿರಪರಿಚಿತವೂ ಹೌದು. ಎಲ್ಲ ರೀತಿಯ ರೋಗಗಳಿಗೂ ಇದು ಮದ್ದು. ಆದರೆ ರಾಜ್ಯದಲ್ಲಿ ೧೯೫೧ರಲ್ಲಿ ಮೊದಲ ಬಾರಿಗೆ ನೀರಾ ಉತ್ಪಾದಿಸಲಾಯಿತು. ಆಗಲೇ ಕರ್ನಾಟಕದಲ್ಲಿ ೧೬೭ ಪಟ್ಟಣ ಹಾಗೂ ೧೫೨ ಪ್ರಮುಖ ಗ್ರಾಮೀಣ ಭಾಗಗಳಲ್ಲಿ ನೀರಾ ಮಾರಾಟ ಕೇಂದ್ರಗಳು ಸ್ಥಾಪನೆಯಾದವು. ೧೭ ನೀರಾ ಮತ್ತು ಪನೆ ಬೆಲ್ಲ ಸಹಕಾರಿ ಸಂಘಗಳು ಕಾರ್ಯನಿರ್ವಹಿಸತೊಡಗಿದವು. ೧೯೫೮ರಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ನೀರಾ ಮತ್ತು ಪನೆ ಬೆಲ್ಲ ಸಂಯುಕ್ತ ಸಂಘಗಳು ಆಸ್ತಿತ್ವಕ್ಕೆ ಬಂದವು.
ಕೇವಲ ಹತ್ತು ವರ್ಷಗಳ ನಂತರ ಸರಕಾರ ತಂದ ೧೯೬೮ರ ಶಾಸನದಿಂದ ನೀರಾ ಉದ್ಯಮ ಸಂಪೂರ್ಣ ನೆಲ ಕಚ್ಚಿತು. ಆದರೆ ೨೦೦೧ರಲ್ಲಿ ಎಲ್ಲೆಡೆ ತೆಂಗಿಗೆ ನುಸಿಪೀಡೆ ಕಾಣಿಸಿಕೊಂಡಾಗ ಮತ್ತೆ ನೀರಾ ಕುರಿತ ಚಿಂತನೆ, ಚಳವಳಿ ಆರಂಭವಾಗಿದ್ದು.
ಉಪಯೋಗ
ಹಾಗೂ ಸಾಧ್ಯತೆ:
ನೀರಾ ಬಗ್ಗೆ ಜನಪ್ರತಿನಿಗಳಿಗೆ ಹಾಗೂ ಅಕಾರಿಗಳಿಗೆ ಸರಿಯಾದ ಅರಿವು ಇಲ್ಲದಿರುವುದೇ ನಿರುತ್ಸಾಹಕ್ಕೆ ಕಾರಣ ಎನ್ನಲಾಗಿದೆ. ಅದನ್ನು ಮರದಿಂದ ಇಳಿಸಿದ ಕೆಲವೇ ಗಂಟೆಗಳಲ್ಲಿ ಇದು ಹುಳಿ ಬಂದು ಹೆಂಡವಾಗುತ್ತದೆ ಎಂಬ ತಪ್ಪು ಕಲ್ಪನೆ ಇದೆ. ನೀರಾ ನಿಜಕ್ಕೂ ಪರಿಪೂರ್ಣ ಪೇಯ. ಕೋಕಾ ಕೋಲಾ, ಪೆಪ್ಸಿಯಂತ ವಿದೇಶಿ ಹಾಗೂ ಹಾನಿಕಾರಕ ಪಾನೀಯಗಳ ವಿರುದ್ಧ ಜಾಗತಿಕ ಮಟ್ಟದಲ್ಲಿ ಎದುರು ನಿಂತು ಬೆಳೆಯಬಲ್ಲ ಸಾಮರ್ಥ್ಯ ಇರುವುದು ಎಳೆನೀರು ಹಾಗೂ ನೀರಾಗೆ ಮಾತ್ರ! ಹೌದು, ಇವೆರಡೂ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ.
ನೀರಾ ಎಂದರೆ ಹೆಂಡ(ಸರಾಯಿ) ಎಂದಲ್ಲ. ಇದು ಎಲ್ಲ ವಯೋಮಿತಿಯ ಜನರಿಗೂ ಉಪಯುಕ್ತವಾಗುವ ಆರೋಗ್ಯದಾಯಕ ಪಾನೀಯ. ಆದರೆ ಕೆಲವರು ನೀರಾ ಹೆಸರಿನಲ್ಲಿ ಅಬಕಾರಿ ಅಕಾರಿಗಳ ಜತೆ ಸೇರಿಕೊಂಡು ಹೆಂಡವನ್ನು ಮಾರುವ ದಂಧೆ ಆರಂಭಿಸಿದ್ದಾರೆ. ಇಂಥವರು ನಿಜಕ್ಕೂ ರೈತರಲ್ಲ ಎಂಬುದು ಬಹಿರಂಗ ಸತ್ಯ. ನೀರಾ, ನೀರಿನಂತೆ ಪರಿಶುದ್ಧ, ಪಾರದರ್ಶಕ ಹಳದಿ ಬಣ್ಣದಿಂದ ಕೂಡಿರುತ್ತದೆ. ಇದನ್ನು ಇಳಿಸಿದ ನಂತರ ಮೂರು ಗಂಟೆಯವರೆಗೆ ಹಾಗೆಯೇ ಇಟ್ಟರೂ ಮತ್ತಿನ ಅಂಶ ಇರುವುದಿಲ್ಲ. ೧೨ ಗಂಟೆಯ ನಂತರವಷ್ಟೇ ಶೇ.೦.೭ ರಿಂದ ಶೇ.೦.೮ರಷ್ಟು ಮತ್ತು ಬರುತ್ತದೆ. ಆದರೆ ವೈeನಿಕವಾಗಿ ಇದನ್ನು ಸಂಸ್ಕರಿಸಿದರೆ ೬ ತಿಂಗಳ ಕಾಲ ರುಚಿ ಕೆಡದಂತೆ ಹಾಗೆಯೇ ಇಡಬಹುದು ಎಂಬುದು ತಜ್ಞರ ಅಭಿಪ್ರಾಯ.
ನೀರಾ ನಿಜಕ್ಕೂ ಆರೋಗ್ಯದಾಯಕ, ರೋಗನಿರೋಧಕ ಶಕ್ತಿ ಹೊಂದಿದ ಹಾಗೂ ನರದೌರ್ಬಲ್ಯ ಹೊಂದಿದವರಿಗೆ ದಿವ್ಯ ಔಷಧ ಕೂಡ ಹೌದು. ಇದರಿಂದ ಬೆಲ್ಲ, ಕಲ್ಲು ಸಕ್ಕರೆ, ಜ್ಯೂಸ್, ಜಾಮ್, ಚಾಕೋಲೇಟ್, ಬಿಸ್ಕೆಟ್, ಸಿರಪ್ ಹಾಗೂ ಇನ್ನಿತರೆ ಸಿಹಿ ತಿಂಡಿಗಳನ್ನು ತಯಾರಿಸಬಹುದು! ಆಯುರ್ವೇದದಲ್ಲಿ ತೆಂಗಿನ ಉತ್ಪಾದನೆಗಳಿಗೆ ಶ್ರೇಷ್ಠ ಸ್ಥಾನವಿದೆ. ಆದರೆ ಅದರ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಈಗಿನ ಯಾವ ಜನಪ್ರತಿನಿಗಳಿಗೂ ಇಲ್ಲ.
ನೆರೆಯ ಕೇರಳ, ತಮಿಳು ನಾಡು, ಮಹಾರಾಷ್ಟ್ರದಲ್ಲಿ ನೀರಾ ಉದ್ಯಮ ಬೆಳೆದಂತೆ ಕರ್ನಾಟಕದಲ್ಲಿ ಬೆಳೆದಿಲ್ಲ. ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಅಕಾರಿಗಳಿಗೆ ಹಾಗೂ ಜನಪ್ರತಿನಿಗಳಿಗೆ ಇದರ ಬಗ್ಗೆ ಇರುವ ಅರಿವಿನ ಕೊರತೆ ಹಾಗೂ ರೈತರ ಬಗ್ಗೆ ಇವರಿಗಿರುವ ನಿಷ್ಕಾಳಜಿ. ನೀರಾ ನಿಜಕ್ಕೂ ರೈತರ ಪಾಲಿನ ಆಶಾಕಿರಣ. ಇಲ್ಲಿ ಕೃಷಿಕರಿಗೆ ವಿಫುಲವಾದ ಅವಕಾಶಗಳಿವೆ. ಅವುಗಳನ್ನು ಸರಕಾರ ಕಂಡುಕೊಳ್ಳಬೇಕಿದೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಹೆಂಡದ ಅಮಲಿನಲ್ಲಿ ಕುಣಿದಾಡುವುದಕ್ಕಿಂತ ವೈಜ್ಞಾನಿಕವಾಗಿ ನೀರಾದಿಂದಾಗುವ ಉಪಯೋಗಗಳನ್ನು ಪತ್ತೆ ಹಚ್ಚಬೇಕಿದೆ. ಜತೆಗೆ ಸರಕಾರದಿಂದ ಪರವಾನಗಿ ಪಡೆದು ನೀರಾ ಉತ್ಪಾದನೆಗೆ ಕೈ ಹಾಕುವಂತೆ ಮಾಡಬೇಕಿದೆ. ಜತೆಗೆ ನೀರಾ ಉತ್ಪನ್ನಗಳ ಅಭಿವೃದ್ಧಿ ಬಗ್ಗೆ ಚಿಂತಿಸಿದರೆ ರೈತರ ಬಾಳು ಕೂಡ ಹಸನಾಗುವುದರಲ್ಲಿ ಸಂಶಯವಿಲ್ಲ.
ಇಂದು ಕರ್ನಾಟಕದಲ್ಲಿ ಶೇ.೩೫ ರಿಂದ ಶೇ.೪೦ ರಷ್ಟು ಕೃಷಿ ಹಾಗೂ ತೋಟಗಾರಿಕೆ ಉತ್ಮನ್ನಗಳು ವಿನಾಕಾರಣ ಹಾಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಮಗ್ರ ಕೃಷಿ ನೀತಿಯನ್ನು ಜಾರಿಗೆ ತರುವ ತುರ್ತು ಅಗತ್ಯವಿದೆ. ವಿಶ್ವದಲ್ಲಿ ಇಂದು ರೈತರು ಜಾಗತಿಕರಣ, ಉದಾರೀಕರಣದಿಂದಾಗಿ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಗೆ ಇಳಿಯಬೇಕಿದ್ದು, ಮೌಲ್ಯರ್ವತ ವಸ್ತುಗಳನ್ನು ಉತ್ಪಾದಿಸುವ ಮೂಲಕ ಸ್ಪರ್ಧೆಯಲ್ಲಿ ತನ್ನದೇ ಆದ ಸ್ಥಾನ ಉಳಿಸಿಕೊಳ್ಳಬೇಕಿದೆ. ಈ ಕಾರಣಕ್ಕಾಗಿಯೇ ಸರಕಾರಗಳು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಕೃಷಿ ಉತ್ಪನ್ನಗಳನ್ನು ಉದ್ಯಮವಾಗಿ ನಿರ್ಮಾಣ ಮಾಡುವ ಇಚ್ಛಾಶಕ್ತಿ ತೋರಬೇಕಿದೆ.
ಹೀಗೆ ಮಹಾತ್ಮ ಗಾಂಜಿ ಅವರೇ ನೀರಾ ಇಳಿಸುವುದನ್ನು ಸಮರ್ಥಿಸಿದ್ದರು. ಅಲ್ಲದೆ ಅವರ ‘ಹರಿಜನ’ ಪತ್ರಿಕೆಯಲ್ಲೂ ದಿ.ಗಜಾನನ ನಾಯಕ್ ಅವ
ರು ೧೯೩೯ರ ಜನವರಿ೭ರ ಸಂಚಿಕೆಯಲ್ಲಿ ‘ಗರ್ಭಿಣಿಯರು ವಾರಕ್ಕೆ ಎರಡ್ಮೂರು ಬಾರಿ ನೀರಾ ಸೇವಿಸಿದರೆ ಹುಟ್ಟುವ ಮಗು ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯಪೂರ್ಣವಾಗಿ ಹಾಗೂ ಸೌಂದರ್ಯಯುತವಾಗಿ ಹುಟ್ಟುತ್ತವೆ’ ಎಂದು ಬರೆದಿದ್ದರು.ಇಷ್ಟೆಲ್ಲಾ ನಿದರ್ಶನಗಳು ಕಣ್ಮುಂದೆ ಇದ್ದರೂ ನಮ್ಮ ಸರಕಾರಗಳಿಗೆ ಮಾತ್ರ ನೀರಾವನ್ನು ಅಭಿವೃದ್ಧಿಪಡಿಸುವ ಬಗ್ಗೆಯಾಗಲಿ, ಅದರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡುವುದಕ್ಕಾಗಲಿ, ರೈತರ ಬದುಕನ್ನು ಆ ಮೂಲಕ ಹಸನು ಮಾಡುವುದಕ್ಕಾಗಲಿ ಕಾಳಜಿ ಇದ್ದಂತಿಲ್ಲ. ಕರ್ನಾಟಕದಲ್ಲಿ ‘ನೀರಾ ಚಳವಳಿ’ ನಡೆದು ೯ ವರ್ಷಗಳಾಗುತ್ತಿವೆ. ೨೦೦೧ರ ಅಕ್ಟೋಬರ್ ೯ಕ್ಕೆ ಇದೇ ಚಳವಳಿಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯ ಇಬ್ಬರು ರೈತರು ಬಲಿಯಾದರೂ ಸರಕಾರ ಮಾತ್ರ ಕೇವಲ ಭರವಸೆಯ ‘ಮತ್ತಿನಲ್ಲಿ’ಯೇ ತೇಲಾ(ಡುತ್ತಿದೆ.) ಡಿಸುತ್ತಿದೆ.
ಬೆಂಗಳೂರಿನ ಗಾಂ ಭವನದಲ್ಲಿ ಅದೇ ೨೦೦೧ರ ಆಗಸ್ಟ್೧೩ರಂದು ‘ನುಸಿಪೀಡೆ ಹಾಗೂ ನೀರಾ’ಎಂಬ ವಿಷಯದ ಕುರಿತು ನಡೆಸಿದ ರಾಷ್ಟ್ರೀಯ ಕಾರ್ಯಾಗಾರವೇ ನೀರಾ ಚಳವಳಿಗೆ ಪ್ರಮುಖ ಪ್ರೇರಣೆಯಾಯಿತು. ಚಳವಳಿಗೆ ಆದೇ ಆ.೨೭ರಂದು ಸರಕಾರ ಸ್ಪಂದಿಸುವ ನಾಟಕವಾಡಿ ಮೊಸಳೆ ಕಣ್ಣೀರು ಸುರಿಸಿ ನೀರಾ ಇಳಿಸಲು ಅನುಮತಿ ನೀಡುವುದಾಗಿ ತಿಳಿಸಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಅದರ ಫಲವಾಗಿಯೇ ಚಳವಳಿ ತೀವ್ರ ಸ್ವರೂಪ ಪಡೆಯಿತು. ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಅದೇ ವರ್ಷ ಅಕ್ಟೋಬರ್ ೯ರಂದು ನಡೆದ ಹೋರಾಟ ತೀವ್ರ ಸ್ವರೂಪ ಪಡೆದಾಗ ಸರಕಾರ ಉತ್ತರ ನೀಡಿದ್ದು ಬಂದೂಕಿನ ನಳಿಕೆಯ ಮೂಲಕ! ಅದಕ್ಕೆ ತಮ್ಮಯ್ಯ ಹಾಗೂ ಪುಟ್ಟನಂಜಯ್ಯ ಎಂಬ ಇಬ್ಬರು ಅಮಾಯಕ ರೈತರು ಬಲಿಯಾದರು. ಆದರೆ ಅವರ ಬಲಿದಾನವಾದರೂ ಸರಕಾರಗಳು ಇಂದಿಗೂ ಬಗ್ಗದಿರುವುದು ಇತ್ತೀಚಿನ ಸರಕಾರಗಳು ಎಷ್ಟರಮಟ್ಟಿಗೆ ಜನಪರ, ರೈತಪರವಾಗಿವೆ ಎಂಬುದನ್ನು ತೋರಿಸುತ್ತವೆ.
ಅಂದು ಅದೇ ಚಳವಳಿಯನ್ನು ರಾಜಕೀಯ ದಾಳವಾಗಿಸಿಕೊಂಡ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್, ಎಚ್.ಕೆ.ಪಾಟೀಲ್ ಹಾಗೂ ಮಾಜಿ ಪ್ರದಾನಿ ಎಚ್.ಡಿ.ದೇವೇಗೌಡರು ರಾಜಕೀಯವಾಗಿ ಮತ್ತಷ್ಟು ಬೆಳೆದುನಿಂತರು. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವಿಠಲೇನಹಳ್ಳಿಯಿಂದ ವಿಧಾನಸೌಧದ ವರೆಗೆ ಪಾದಯಾತ್ರೆ ಮಾಡಿದರು. ಆದರೆ ಅದರಿಂದ ಬಡ ರೈತರಿಗೆ ಮಾತ್ರ ಸಿಕ್ಕಿದ್ದು ಕೋರ್ಟ್ಗೆ ಅಲೆಯುವ ಕಾಯಕ. ಆ ರೈತರ ಮೇಲೆ ಹಾಕಲಾಗಿರುವ ಪ್ರಕರಣಗಳು ಇಂದಿಗೂ ಇತ್ಯರ್ಥವಾಗಿಲ್ಲ, ಜತೆಗೆ ಚಳವಳಿಯ ಆಶಯವೂ ಈಡೇರಿಲ್ಲ! ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪದ್ಮರಾಜ್ ಆಯೋಗವನ್ನು ನೇಮಕ ಮಾಡಲಾಯಿತು. ಆ ಆಯೋಗ ವರದಿ ತಯಾರಿಸಿ ಸರಕಾರಕ್ಕೆ ನೀಡಿತಾದರೂ ಅದರಲ್ಲಿ ಏನಿದೆ ಎಂಬುದು ಇಂದಿಗೂ ಬಹಿರಂಗವಾಗಲಿಲ್ಲ.
ಲಕ್ಷಾಂತರ ರೈತರ ಬದುಕನ್ನು ಹಸನುಗೊಳಿಸಿದ ಕಲ್ಪವೃಕ್ಷಕ್ಕೆ ನುಸಿ ಪೀಡೆ ಕಾಣಿಸಿಕೊಂಡ ನಂತರ ಅವರು ಕಂಡುಕೊಂಡಿದ್ದು ನೀರಾ ಉತ್ಪನ್ನವನ್ನು.
ನೀರಾ ಚಳವಳಿ ಆರಂಭವಾದ ನಂತರ ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ವಿಶ್ವವೇ ಬೆರಗಾಗುವ ರೀತಿಯಲ್ಲಿ ನೀರಾದಿಂದ ಸಕ್ಕರೆ ತಯಾರಿಸುವ ಪ್ರಶಿಕ್ಷಣ ತರಬೇತಿ ನೀಡಲಾಯಿತು. ಆದರೆ ಅನಂತರ ಅದಕ್ಕೆ ಮಾರುಕಟ್ಟೆ ಸಮಸ್ಯೆ ಹಾಗೂ ಸರಕಾರದ ನಿರುತ್ಸಾಹ ಎದುರಾಯಿತು. ಅಂದಿನಿಂದ ತೆಂಗು ಬೆಳೆಗಾರರು ಮತ್ತೆ ಅತಂತ್ರವಾದರು.೨೦೦೦ರಿಂದ ೨೦೦೩ರ ವರೆಗೆ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಕಡೆ ಬೀದಿ ಬೀದಿಗಳಲ್ಲಿ ಚಳವಳಿ ನಡೆಸಿದರು. ನೀರಾ ಬಗ್ಗೆ ರೈತರು ಹಾಗೂ ಸರಕಾರದ ಕಣ್ಣು ತೆರೆಸಿದರು. ೨೦೦೮ರಲ್ಲಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಭಾರತೀಯ ಸತ್ಸಂಗ ಸಮಾಜದ ಅಧ್ಯಕ್ಷರಾದ ಶ್ರೀ ಭಕ್ತಿ ತೀರ್ಥ ಸ್ವಾಮೀಜಿ ಕೂಡ ನೀರಾಗೆ ಸಂಬಂಸಿದಂತೆ ಹೋರಾಟ ನಡೆಸಿದರು. ಕರ್ನಾಟಕ ನೀರಾ ಮಹಾಮಂಡಳಿ ರಚನೆಗೆ ಒತ್ತಾಯಿಸಿದ್ದರು. ಬಜೆಟ್ನಲ್ಲಿ ೧೦ ಕೋಟಿ ರೂ.ಗಳನ್ನು ನೀರಾ ಉತ್ಪಾದನೆ, ಅಭಿವೃದ್ಧಿ ಹಾಗೂ ವಹಿವಾಟಿಗಾಗಿಯೇ ಮೀಸಲಿಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ರಾಜ್ಯದ ಬಹುತೇಕ ಕಡೆಗಳಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಿದರು. ಆದರೂ ಸರಕಾರ ಮಾತ್ರ ಅಕಾರದ ಅಮಲಿನಲ್ಲಿ ಬೀದಿ ಬೀದಿಯಲ್ಲಿ ಹೆಂಡದಂಗಡಿ, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಮುಂದಾಗುತ್ತಿದೆಯೇ ಹೊರತು ನೀರಾ ಉತ್ಪಾದನೆಗೆ ಸಹಕಾರ ನೀಡಲೇ ಇಲ್ಲ.
ನೀರಾ ಉತ್ಪಾದನೆಯ ಹಿನ್ನೆಲೆ:
ಭಾರತದಲ್ಲಿ ಅನಾದಿ ಕಾಲದಿಂದಲೂ ನೀರಾ ತಯಾರಿಸಲಾಗುತ್ತಿದೆ. ಇದು ಆಯುರ್ವೇದದಲ್ಲಿ ಹೆಚ್ಚು ಚಿರಪರಿಚಿತವೂ ಹೌದು. ಎಲ್ಲ ರೀತಿಯ ರೋಗಗಳಿಗೂ ಇದು ಮದ್ದು. ಆದರೆ ರಾಜ್ಯದಲ್ಲಿ ೧೯೫೧ರಲ್ಲಿ ಮೊದಲ ಬಾರಿಗೆ ನೀರಾ ಉತ್ಪಾದಿಸಲಾಯಿತು. ಆಗಲೇ ಕರ್ನಾಟಕದಲ್ಲಿ ೧೬೭ ಪಟ್ಟಣ ಹಾಗೂ ೧೫೨ ಪ್ರಮುಖ ಗ್ರಾಮೀಣ ಭಾಗಗಳಲ್ಲಿ ನೀರಾ ಮಾರಾಟ ಕೇಂದ್ರಗಳು ಸ್ಥಾಪನೆಯಾದವು. ೧೭ ನೀರಾ ಮತ್ತು ಪನೆ ಬೆಲ್ಲ ಸಹಕಾರಿ ಸಂಘಗಳು ಕಾರ್ಯನಿರ್ವಹಿಸತೊಡಗಿದವು. ೧೯೫೮ರಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ನೀರಾ ಮತ್ತು ಪನೆ ಬೆಲ್ಲ ಸಂಯುಕ್ತ ಸಂಘಗಳು ಆಸ್ತಿತ್ವಕ್ಕೆ ಬಂದವು.
ಕೇವಲ ಹತ್ತು ವರ್ಷಗಳ ನಂತರ ಸರಕಾರ ತಂದ ೧೯೬೮ರ ಶಾಸನದಿಂದ ನೀರಾ ಉದ್ಯಮ ಸಂಪೂರ್ಣ ನೆಲ ಕಚ್ಚಿತು. ಆದರೆ ೨೦೦೧ರಲ್ಲಿ ಎಲ್ಲೆಡೆ ತೆಂಗಿಗೆ ನುಸಿಪೀಡೆ ಕಾಣಿಸಿಕೊಂಡಾಗ ಮತ್ತೆ ನೀರಾ ಕುರಿತ ಚಿಂತನೆ, ಚಳವಳಿ ಆರಂಭವಾಗಿದ್ದು.
ಉಪಯೋಗ
ಹಾಗೂ ಸಾಧ್ಯತೆ:ನೀರಾ ಬಗ್ಗೆ ಜನಪ್ರತಿನಿಗಳಿಗೆ ಹಾಗೂ ಅಕಾರಿಗಳಿಗೆ ಸರಿಯಾದ ಅರಿವು ಇಲ್ಲದಿರುವುದೇ ನಿರುತ್ಸಾಹಕ್ಕೆ ಕಾರಣ ಎನ್ನಲಾಗಿದೆ. ಅದನ್ನು ಮರದಿಂದ ಇಳಿಸಿದ ಕೆಲವೇ ಗಂಟೆಗಳಲ್ಲಿ ಇದು ಹುಳಿ ಬಂದು ಹೆಂಡವಾಗುತ್ತದೆ ಎಂಬ ತಪ್ಪು ಕಲ್ಪನೆ ಇದೆ. ನೀರಾ ನಿಜಕ್ಕೂ ಪರಿಪೂರ್ಣ ಪೇಯ. ಕೋಕಾ ಕೋಲಾ, ಪೆಪ್ಸಿಯಂತ ವಿದೇಶಿ ಹಾಗೂ ಹಾನಿಕಾರಕ ಪಾನೀಯಗಳ ವಿರುದ್ಧ ಜಾಗತಿಕ ಮಟ್ಟದಲ್ಲಿ ಎದುರು ನಿಂತು ಬೆಳೆಯಬಲ್ಲ ಸಾಮರ್ಥ್ಯ ಇರುವುದು ಎಳೆನೀರು ಹಾಗೂ ನೀರಾಗೆ ಮಾತ್ರ! ಹೌದು, ಇವೆರಡೂ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ.
ನೀರಾ ಎಂದರೆ ಹೆಂಡ(ಸರಾಯಿ) ಎಂದಲ್ಲ. ಇದು ಎಲ್ಲ ವಯೋಮಿತಿಯ ಜನರಿಗೂ ಉಪಯುಕ್ತವಾಗುವ ಆರೋಗ್ಯದಾಯಕ ಪಾನೀಯ. ಆದರೆ ಕೆಲವರು ನೀರಾ ಹೆಸರಿನಲ್ಲಿ ಅಬಕಾರಿ ಅಕಾರಿಗಳ ಜತೆ ಸೇರಿಕೊಂಡು ಹೆಂಡವನ್ನು ಮಾರುವ ದಂಧೆ ಆರಂಭಿಸಿದ್ದಾರೆ. ಇಂಥವರು ನಿಜಕ್ಕೂ ರೈತರಲ್ಲ ಎಂಬುದು ಬಹಿರಂಗ ಸತ್ಯ. ನೀರಾ, ನೀರಿನಂತೆ ಪರಿಶುದ್ಧ, ಪಾರದರ್ಶಕ ಹಳದಿ ಬಣ್ಣದಿಂದ ಕೂಡಿರುತ್ತದೆ. ಇದನ್ನು ಇಳಿಸಿದ ನಂತರ ಮೂರು ಗಂಟೆಯವರೆಗೆ ಹಾಗೆಯೇ ಇಟ್ಟರೂ ಮತ್ತಿನ ಅಂಶ ಇರುವುದಿಲ್ಲ. ೧೨ ಗಂಟೆಯ ನಂತರವಷ್ಟೇ ಶೇ.೦.೭ ರಿಂದ ಶೇ.೦.೮ರಷ್ಟು ಮತ್ತು ಬರುತ್ತದೆ. ಆದರೆ ವೈeನಿಕವಾಗಿ ಇದನ್ನು ಸಂಸ್ಕರಿಸಿದರೆ ೬ ತಿಂಗಳ ಕಾಲ ರುಚಿ ಕೆಡದಂತೆ ಹಾಗೆಯೇ ಇಡಬಹುದು ಎಂಬುದು ತಜ್ಞರ ಅಭಿಪ್ರಾಯ.
ನೀರಾ ನಿಜಕ್ಕೂ ಆರೋಗ್ಯದಾಯಕ, ರೋಗನಿರೋಧಕ ಶಕ್ತಿ ಹೊಂದಿದ ಹಾಗೂ ನರದೌರ್ಬಲ್ಯ ಹೊಂದಿದವರಿಗೆ ದಿವ್ಯ ಔಷಧ ಕೂಡ ಹೌದು. ಇದರಿಂದ ಬೆಲ್ಲ, ಕಲ್ಲು ಸಕ್ಕರೆ, ಜ್ಯೂಸ್, ಜಾಮ್, ಚಾಕೋಲೇಟ್, ಬಿಸ್ಕೆಟ್, ಸಿರಪ್ ಹಾಗೂ ಇನ್ನಿತರೆ ಸಿಹಿ ತಿಂಡಿಗಳನ್ನು ತಯಾರಿಸಬಹುದು! ಆಯುರ್ವೇದದಲ್ಲಿ ತೆಂಗಿನ ಉತ್ಪಾದನೆಗಳಿಗೆ ಶ್ರೇಷ್ಠ ಸ್ಥಾನವಿದೆ. ಆದರೆ ಅದರ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಈಗಿನ ಯಾವ ಜನಪ್ರತಿನಿಗಳಿಗೂ ಇಲ್ಲ.
ನೆರೆಯ ಕೇರಳ, ತಮಿಳು ನಾಡು, ಮಹಾರಾಷ್ಟ್ರದಲ್ಲಿ ನೀರಾ ಉದ್ಯಮ ಬೆಳೆದಂತೆ ಕರ್ನಾಟಕದಲ್ಲಿ ಬೆಳೆದಿಲ್ಲ. ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಅಕಾರಿಗಳಿಗೆ ಹಾಗೂ ಜನಪ್ರತಿನಿಗಳಿಗೆ ಇದರ ಬಗ್ಗೆ ಇರುವ ಅರಿವಿನ ಕೊರತೆ ಹಾಗೂ ರೈತರ ಬಗ್ಗೆ ಇವರಿಗಿರುವ ನಿಷ್ಕಾಳಜಿ. ನೀರಾ ನಿಜಕ್ಕೂ ರೈತರ ಪಾಲಿನ ಆಶಾಕಿರಣ. ಇಲ್ಲಿ ಕೃಷಿಕರಿಗೆ ವಿಫುಲವಾದ ಅವಕಾಶಗಳಿವೆ. ಅವುಗಳನ್ನು ಸರಕಾರ ಕಂಡುಕೊಳ್ಳಬೇಕಿದೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಹೆಂಡದ ಅಮಲಿನಲ್ಲಿ ಕುಣಿದಾಡುವುದಕ್ಕಿಂತ ವೈಜ್ಞಾನಿಕವಾಗಿ ನೀರಾದಿಂದಾಗುವ ಉಪಯೋಗಗಳನ್ನು ಪತ್ತೆ ಹಚ್ಚಬೇಕಿದೆ. ಜತೆಗೆ ಸರಕಾರದಿಂದ ಪರವಾನಗಿ ಪಡೆದು ನೀರಾ ಉತ್ಪಾದನೆಗೆ ಕೈ ಹಾಕುವಂತೆ ಮಾಡಬೇಕಿದೆ. ಜತೆಗೆ ನೀರಾ ಉತ್ಪನ್ನಗಳ ಅಭಿವೃದ್ಧಿ ಬಗ್ಗೆ ಚಿಂತಿಸಿದರೆ ರೈತರ ಬಾಳು ಕೂಡ ಹಸನಾಗುವುದರಲ್ಲಿ ಸಂಶಯವಿಲ್ಲ.
ಇಂದು ಕರ್ನಾಟಕದಲ್ಲಿ ಶೇ.೩೫ ರಿಂದ ಶೇ.೪೦ ರಷ್ಟು ಕೃಷಿ ಹಾಗೂ ತೋಟಗಾರಿಕೆ ಉತ್ಮನ್ನಗಳು ವಿನಾಕಾರಣ ಹಾಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಮಗ್ರ ಕೃಷಿ ನೀತಿಯನ್ನು ಜಾರಿಗೆ ತರುವ ತುರ್ತು ಅಗತ್ಯವಿದೆ. ವಿಶ್ವದಲ್ಲಿ ಇಂದು ರೈತರು ಜಾಗತಿಕರಣ, ಉದಾರೀಕರಣದಿಂದಾಗಿ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಗೆ ಇಳಿಯಬೇಕಿದ್ದು, ಮೌಲ್ಯರ್ವತ ವಸ್ತುಗಳನ್ನು ಉತ್ಪಾದಿಸುವ ಮೂಲಕ ಸ್ಪರ್ಧೆಯಲ್ಲಿ ತನ್ನದೇ ಆದ ಸ್ಥಾನ ಉಳಿಸಿಕೊಳ್ಳಬೇಕಿದೆ. ಈ ಕಾರಣಕ್ಕಾಗಿಯೇ ಸರಕಾರಗಳು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಕೃಷಿ ಉತ್ಪನ್ನಗಳನ್ನು ಉದ್ಯಮವಾಗಿ ನಿರ್ಮಾಣ ಮಾಡುವ ಇಚ್ಛಾಶಕ್ತಿ ತೋರಬೇಕಿದೆ.
Subscribe to:
Posts (Atom)
